ETV Bharat / state

ನಿಯಮ ಉಲ್ಲಂಘಿಸಿ ನ್ಯೂ ಇಯರ್ ಪಾರ್ಟಿ - ಪ್ರಶ್ನಿಸಿದ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ 8 ಮಂದಿ ಅಂದರ್​!

author img

By

Published : Jan 1, 2022, 12:08 PM IST

ನೈಟ್​ ಕರ್ಫ್ಯೂ ನಿಯಮವಿದ್ದರೂ ತಡರಾತ್ರಿ ರೆಸಾರ್ಟ್​ ಒಂದರಲ್ಲಿ ಪಾರ್ಟಿ ಮಾಡಿದವರನ್ನು ಪೊಲೀಸರು ಪ್ರಶ್ನಿಸಿದ್ದು, ಆ ತಂಡ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದೆ. ಹಲ್ಲೆಗೆ ಯತ್ನಿಸಿದ 8 ಜನರನ್ನು ನಂದಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

eight arrested who assault on police in chikkaballapura
ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ 8 ಮಂದಿ ಅಂದರ್

ಚಿಕ್ಕಬಳ್ಳಾಪುರ: ನೈಟ್ ಕರ್ಫ್ಯೂ ನಿಯಮ ಉಲ್ಲಂಘಿಸಿ ನ್ಯೂ ಇಯರ್ ಪಾರ್ಟಿ ಮಾಡಿದ ಹಿನ್ನೆಲೆ ಪ್ರಶ್ನಿಸಿದ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ 8 ಜನರನ್ನು ನಂದಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ 8 ಮಂದಿ ಅಂದರ್

ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ಇರುವ ವೈಟ್ ನಿರ್ವಾಣ ಬೈ ಜಡೇ ರೆಸಾರ್ಟ್​ನಲ್ಲಿ ತಡ ರಾತ್ರಿ ಹೊಸ ವರ್ಷದ ಪಾರ್ಟಿ ಮಾಡುತ್ತಿದ್ದ ತಂಡವನ್ನು ನಂದಿ ಪೊಲೀಸರು ಪ್ರಶ್ನಿಸಿದ್ದಾರೆ. ಆ ವೇಳೆ, ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದಾರೆ. ಪಾರ್ಟಿ ಮಾಡುತ್ತಿದ್ದವರಲ್ಲಿ 8 ಜನರನ್ನು ಪೊಲೀಸರು ಬಂಧಿಸಿದ್ದು, ಸ್ಥಳಕ್ಕೆ ಎಸ್ಪಿ ಜಿ.ಕೆ. ಮಿಥುನ್‌ ಕುಮಾರ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ನಿಷೇಧಾಜ್ಞೆ ಉಲ್ಲಂಘಿಸಿ ಪಾರ್ಟಿ.. ರಾಮನಗರದ ರೆಸಾರ್ಟ್​ ಮೇಲೆ ಪೊಲೀಸರ ದಾಳಿ

ಬಂಧಿತರಲ್ಲಿ ಕೆಲವರು ಪ್ರತಿಷ್ಠಿತ ರಾಜಕೀಯ ಮುಖಂಡರ ಸ್ನೇಹಿತರು ಎಂದು ತಿಳಿದು ಬಂದಿದೆ. ಈ ಕುರಿತು ನಂದಿ ಹಿಲ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಚಿಕ್ಕಬಳ್ಳಾಪುರ: ನೈಟ್ ಕರ್ಫ್ಯೂ ನಿಯಮ ಉಲ್ಲಂಘಿಸಿ ನ್ಯೂ ಇಯರ್ ಪಾರ್ಟಿ ಮಾಡಿದ ಹಿನ್ನೆಲೆ ಪ್ರಶ್ನಿಸಿದ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ 8 ಜನರನ್ನು ನಂದಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ 8 ಮಂದಿ ಅಂದರ್

ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ಇರುವ ವೈಟ್ ನಿರ್ವಾಣ ಬೈ ಜಡೇ ರೆಸಾರ್ಟ್​ನಲ್ಲಿ ತಡ ರಾತ್ರಿ ಹೊಸ ವರ್ಷದ ಪಾರ್ಟಿ ಮಾಡುತ್ತಿದ್ದ ತಂಡವನ್ನು ನಂದಿ ಪೊಲೀಸರು ಪ್ರಶ್ನಿಸಿದ್ದಾರೆ. ಆ ವೇಳೆ, ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದಾರೆ. ಪಾರ್ಟಿ ಮಾಡುತ್ತಿದ್ದವರಲ್ಲಿ 8 ಜನರನ್ನು ಪೊಲೀಸರು ಬಂಧಿಸಿದ್ದು, ಸ್ಥಳಕ್ಕೆ ಎಸ್ಪಿ ಜಿ.ಕೆ. ಮಿಥುನ್‌ ಕುಮಾರ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ನಿಷೇಧಾಜ್ಞೆ ಉಲ್ಲಂಘಿಸಿ ಪಾರ್ಟಿ.. ರಾಮನಗರದ ರೆಸಾರ್ಟ್​ ಮೇಲೆ ಪೊಲೀಸರ ದಾಳಿ

ಬಂಧಿತರಲ್ಲಿ ಕೆಲವರು ಪ್ರತಿಷ್ಠಿತ ರಾಜಕೀಯ ಮುಖಂಡರ ಸ್ನೇಹಿತರು ಎಂದು ತಿಳಿದು ಬಂದಿದೆ. ಈ ಕುರಿತು ನಂದಿ ಹಿಲ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.