ETV Bharat / state

ಮಾಸ್ಕ್ ಸಹ ಕೊಡದೇ ಇರುವ ತಾಪಂಗೆ ನಾಚಿಕೆಯಾಗಬೇಕು: ನಾಗರಾಜ್ ಗರಂ - ಚಿಂತಾಮಣಿ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆ

ಚಿಂತಾಮಣಿ ತಾಲೂಕು ಪಂಚಾಯಿತಿಯಿಂದ ಆಶಾ ಕಾರ್ಯಕರ್ತರಿಗೆ ಹಾಗೂ ಹಳ್ಳಿ ಜನರಿಗೆ ಮಾಸ್ಕ್​ ಸೇರಿದಂತೆ ಯಾವುದೇ ಅಗತ್ಯ ಪರಿಕರಗಳನ್ನು ನೀಡಿಲ್ಲ ಎಂದು ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್. ನಾಗರಾಜ್ ಆರೋಪಿಸಿದ್ದಾರೆ.

General Meeting of Chintamani Taluk Panchayat
ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆ
author img

By

Published : May 30, 2020, 7:21 PM IST

ಚಿಕ್ಕಬಳ್ಳಾಪುರ: ಆಶಾ ಕಾರ್ಯಕರ್ತರಿಗೆ ಹಾಗೂ ಹಳ್ಳಿ ಜನರಿಗೆ ಒಂದು ಮಾಸ್ಕ್ ಕೊಡುವ ಯೋಗ್ಯತೆ ಇಲ್ಲದ ಚಿಂತಾಮಣಿ ತಾಲೂಕು ಪಂಚಾಯಿತಿಗೆ ನಾಚಿಕೆಯಾಗಬೇಕೆಂದು ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್. ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿಂತಾಮಣಿ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆ

ಚಿಂತಾಮಣಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಕೊರೊನಾ ವೈರಸ್​ನಿಂದ ಇಡೀ ದೇಶ ನಲುಗುತ್ತಿದೆ. ಆದರೆ, ತಾಲೂಕು ಪಂಚಾಯಿತಿಯಿಂದ ಆಶಾ ಕಾರ್ಯಕರ್ತರಿಗೆ ಹಾಗೂ ಹಳ್ಳಿ ಜನರಿಗೆ ಮಾಸ್ಕ್​ ಸೇರಿದಂತೆ ಯಾವುದೇ ಅಗತ್ಯ ಪರಿಕರಗಳನ್ನು ನೀಡಿಲ್ಲ. ಸಾಮಾನ್ಯ ಸಭೆಯಲ್ಲಿ ಮೊದಲು ಕೋವಿಡ್​-19 ವಿಚಾರದ ಬಗ್ಗೆ ಚರ್ಚೆ ನಡೆಸಿ ನಂತರ ಸಾಮಾನ್ಯ ಸಭೆಯನ್ನು ಮುಂದುವರಿಸಿ ಎಂದು ಅವರು ಅಧ್ಯಕ್ಷರು ಮತ್ತು ಕೆಲ ಸದಸ್ಯರ ಮೇಲೆ ಹರಿಹಾಯ್ದರು.

ತಾಲೂಕು ಪಂಚಾಯಿತಿ ಮುರುಗಮಲ್ಲ ಕ್ಷೇತ್ರದ ಸದಸ್ಯ ನರಸಿಂಹ ರಾಜು.ಕೆ ಮಾತನಾಡಿ, ನಮಗೆ ತಾಲೂಕು ಪಂಚಾಯಿತಿಯಿಂದ ಯಾವುದೇ ಅನುದಾನ ಬರುತ್ತಿಲ್ಲ. ಮೊದಲು ನಮ್ಮ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಿ ಇಲ್ಲದಿದ್ದರೆ ನಾವು ಸಾಮಾನ್ಯ ಸಭೆಯನ್ನು ಬಹಿಷ್ಕಾರ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಚಿಕ್ಕಬಳ್ಳಾಪುರ: ಆಶಾ ಕಾರ್ಯಕರ್ತರಿಗೆ ಹಾಗೂ ಹಳ್ಳಿ ಜನರಿಗೆ ಒಂದು ಮಾಸ್ಕ್ ಕೊಡುವ ಯೋಗ್ಯತೆ ಇಲ್ಲದ ಚಿಂತಾಮಣಿ ತಾಲೂಕು ಪಂಚಾಯಿತಿಗೆ ನಾಚಿಕೆಯಾಗಬೇಕೆಂದು ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್. ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿಂತಾಮಣಿ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆ

ಚಿಂತಾಮಣಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಕೊರೊನಾ ವೈರಸ್​ನಿಂದ ಇಡೀ ದೇಶ ನಲುಗುತ್ತಿದೆ. ಆದರೆ, ತಾಲೂಕು ಪಂಚಾಯಿತಿಯಿಂದ ಆಶಾ ಕಾರ್ಯಕರ್ತರಿಗೆ ಹಾಗೂ ಹಳ್ಳಿ ಜನರಿಗೆ ಮಾಸ್ಕ್​ ಸೇರಿದಂತೆ ಯಾವುದೇ ಅಗತ್ಯ ಪರಿಕರಗಳನ್ನು ನೀಡಿಲ್ಲ. ಸಾಮಾನ್ಯ ಸಭೆಯಲ್ಲಿ ಮೊದಲು ಕೋವಿಡ್​-19 ವಿಚಾರದ ಬಗ್ಗೆ ಚರ್ಚೆ ನಡೆಸಿ ನಂತರ ಸಾಮಾನ್ಯ ಸಭೆಯನ್ನು ಮುಂದುವರಿಸಿ ಎಂದು ಅವರು ಅಧ್ಯಕ್ಷರು ಮತ್ತು ಕೆಲ ಸದಸ್ಯರ ಮೇಲೆ ಹರಿಹಾಯ್ದರು.

ತಾಲೂಕು ಪಂಚಾಯಿತಿ ಮುರುಗಮಲ್ಲ ಕ್ಷೇತ್ರದ ಸದಸ್ಯ ನರಸಿಂಹ ರಾಜು.ಕೆ ಮಾತನಾಡಿ, ನಮಗೆ ತಾಲೂಕು ಪಂಚಾಯಿತಿಯಿಂದ ಯಾವುದೇ ಅನುದಾನ ಬರುತ್ತಿಲ್ಲ. ಮೊದಲು ನಮ್ಮ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಿ ಇಲ್ಲದಿದ್ದರೆ ನಾವು ಸಾಮಾನ್ಯ ಸಭೆಯನ್ನು ಬಹಿಷ್ಕಾರ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.