ETV Bharat / state

ಡಿಸ್ಕವರಿ ವಿಲೇಜ್‌ನಲ್ಲಿ 'ಕರ್ನಾಟಕ ಹಕ್ಕಿ ಹಬ್ಬ'! - ಕೇಂದ್ರ ಮಾನವ ಸಂಪನ್ಮೂಲ ಖಾತೆ ರಾಜ್ಯ ಸಚಿವ ಸತ್ಯಪಾಲ್ ಸಿಂಗ್

ಅಳಿವಿನಂಚಿನಲ್ಲಿರುವ ಪಕ್ಷಿಗಳ ಸಂತತಿ, ಸಂರಕ್ಷಿಸುವ ನಿಟ್ಟಿನಲ್ಲಿ ಚಿಕ್ಕಬಳ್ಳಾಪುರದ ಡಿಸ್ಕವರಿ ವಿಲೇಜ್‌ನಲ್ಲಿ 'ಕರ್ನಾಟಕ ಹಕ್ಕಿ ಹಬ್ಬ' ಕಾರ್ಯಕ್ರಮ.

Government to increase the bird population
'ಕರ್ನಾಟಕ ಹಕ್ಕಿ ಹಬ್ಬ' ಕಾರ್ಯಕ್ರಮ
author img

By

Published : Jan 18, 2020, 5:22 AM IST

ಚಿಕ್ಕಬಳ್ಳಾಪುರ: ಅಳಿವಿನಂಚಿನಲ್ಲಿರುವ ಪಕ್ಷಿಗಳ ಸಂತತಿ, ಸಂರಕ್ಷಣೆ ಹಾಗೂ ಅಧ್ಯಯನ‌ದ ನಿಟ್ಟಿನಲ್ಲಿ ಚಿಕ್ಕಬಳ್ಳಾಪುರ ಹೊರವಲಯದ ಡಿಸ್ಕವರಿ ವಿಲೇಜ್‌ನಲ್ಲಿ ಅರಣ್ಯ ಇಲಾಖೆ ಹಮ್ಮಿಕೊಂಡಿರುವ 'ಕರ್ನಾಟಕ ಹಕ್ಕಿ ಹಬ್ಬ' ಕಾರ್ಯಕ್ರಮಕ್ಕೆ ಅರಣ್ಯ ಸಚಿವ ಸಿಸಿ ಪಾಟೀಲ್​ ಚಾಲನೆ ನೀಡಿದರು.

ಶುಕ್ರವಾರದಿಂದ 3 ದಿನಗಳ ಕಾಲ ನಡೆಯಲಿರುವ ಈ ಕಾರ್ಯಾಗಾರದಲ್ಲಿ ಹಕ್ಕಿಗಳ ರಕ್ಷಣೆಗೆ ಸಂಬಂಧಿಸಿದಂತೆ ಸಂವಾದ, ಉಪನ್ಯಾಸಗಳು ನಡೆಯಲಿವೆ. ರಾಜ್ಯದ ಹಲವೆಡೆಯಿಂದ ಪಕ್ಷಿ ಪ್ರೇಮಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

'ಕರ್ನಾಟಕ ಹಕ್ಕಿ ಹಬ್ಬ' ಕಾರ್ಯಕ್ರಮ

ಹಕ್ಕಿಗಳ ಸಂರಕ್ಷಣೆಗೆ ಅಧಿಕಾರಗಳು ಶ್ರಮ ವಹಿಸುತ್ತಿರುವುದು ಶ್ಲಾಘನೀಯ. ಈಗ ಪಕ್ಷಿಗಳ ಸಂತತಿ ಅಳಿವಿನ ಅಂಚಿನಲ್ಲಿದೆ‌. ಅವುಗಳನ್ನು ಉಳಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಶಾಸಕ ಡಾ.ಕೆ.ಸುಧಾಕರ್ ತಿಳಿಸಿದರು.

ಹಕ್ಕಿಗಳ ಹಬ್ಬದ ಮುಖಾಂತರ ಪ್ರಾಣಿಗಳ ಮೇಲಿನ‌ ಪ್ರೀತಿ ಹೆಚ್ಚಾಗಲಿ. ಇಂತಹ ಕಾರ್ಯಕ್ರಮಗಳನ್ನು ಏರ್ಪಡಿಸುವ ಮೂಲಕ ಜನಜಾಗೃತಿ ಮೂಡಿಸಬೇಕು. ಪಕ್ಷಿಗಳ ಸಂತತಿ ಹೆಚ್ಚಿಸಲು ಸರ್ಕಾರ ಸಾಕಷ್ಟು ಯೋಜನೆಗಳನ್ನು ರೂಪಿಸುತ್ತಿದೆ ಎಂದು ಸಚಿವ ಸಿಸಿ ಪಾಟೀಲ್ ಹೇಳಿದರು.

ಕೇಂದ್ರ ಮಾನವ ಸಂಪನ್ಮೂಲ ಖಾತೆ ರಾಜ್ಯ ಸಚಿವ ಸತ್ಯಪಾಲ್ ಸಿಂಗ್ ಅವರು ಹಕ್ಕಿ ಹಬ್ಬ ಕಾರ್ಯಾಗಾರದ ಕುರಿತು ಹರ್ಷ ವ್ಯಕ್ತಪಡಿಸಿದರು.

ಚಿಕ್ಕಬಳ್ಳಾಪುರ: ಅಳಿವಿನಂಚಿನಲ್ಲಿರುವ ಪಕ್ಷಿಗಳ ಸಂತತಿ, ಸಂರಕ್ಷಣೆ ಹಾಗೂ ಅಧ್ಯಯನ‌ದ ನಿಟ್ಟಿನಲ್ಲಿ ಚಿಕ್ಕಬಳ್ಳಾಪುರ ಹೊರವಲಯದ ಡಿಸ್ಕವರಿ ವಿಲೇಜ್‌ನಲ್ಲಿ ಅರಣ್ಯ ಇಲಾಖೆ ಹಮ್ಮಿಕೊಂಡಿರುವ 'ಕರ್ನಾಟಕ ಹಕ್ಕಿ ಹಬ್ಬ' ಕಾರ್ಯಕ್ರಮಕ್ಕೆ ಅರಣ್ಯ ಸಚಿವ ಸಿಸಿ ಪಾಟೀಲ್​ ಚಾಲನೆ ನೀಡಿದರು.

ಶುಕ್ರವಾರದಿಂದ 3 ದಿನಗಳ ಕಾಲ ನಡೆಯಲಿರುವ ಈ ಕಾರ್ಯಾಗಾರದಲ್ಲಿ ಹಕ್ಕಿಗಳ ರಕ್ಷಣೆಗೆ ಸಂಬಂಧಿಸಿದಂತೆ ಸಂವಾದ, ಉಪನ್ಯಾಸಗಳು ನಡೆಯಲಿವೆ. ರಾಜ್ಯದ ಹಲವೆಡೆಯಿಂದ ಪಕ್ಷಿ ಪ್ರೇಮಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

'ಕರ್ನಾಟಕ ಹಕ್ಕಿ ಹಬ್ಬ' ಕಾರ್ಯಕ್ರಮ

ಹಕ್ಕಿಗಳ ಸಂರಕ್ಷಣೆಗೆ ಅಧಿಕಾರಗಳು ಶ್ರಮ ವಹಿಸುತ್ತಿರುವುದು ಶ್ಲಾಘನೀಯ. ಈಗ ಪಕ್ಷಿಗಳ ಸಂತತಿ ಅಳಿವಿನ ಅಂಚಿನಲ್ಲಿದೆ‌. ಅವುಗಳನ್ನು ಉಳಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಶಾಸಕ ಡಾ.ಕೆ.ಸುಧಾಕರ್ ತಿಳಿಸಿದರು.

ಹಕ್ಕಿಗಳ ಹಬ್ಬದ ಮುಖಾಂತರ ಪ್ರಾಣಿಗಳ ಮೇಲಿನ‌ ಪ್ರೀತಿ ಹೆಚ್ಚಾಗಲಿ. ಇಂತಹ ಕಾರ್ಯಕ್ರಮಗಳನ್ನು ಏರ್ಪಡಿಸುವ ಮೂಲಕ ಜನಜಾಗೃತಿ ಮೂಡಿಸಬೇಕು. ಪಕ್ಷಿಗಳ ಸಂತತಿ ಹೆಚ್ಚಿಸಲು ಸರ್ಕಾರ ಸಾಕಷ್ಟು ಯೋಜನೆಗಳನ್ನು ರೂಪಿಸುತ್ತಿದೆ ಎಂದು ಸಚಿವ ಸಿಸಿ ಪಾಟೀಲ್ ಹೇಳಿದರು.

ಕೇಂದ್ರ ಮಾನವ ಸಂಪನ್ಮೂಲ ಖಾತೆ ರಾಜ್ಯ ಸಚಿವ ಸತ್ಯಪಾಲ್ ಸಿಂಗ್ ಅವರು ಹಕ್ಕಿ ಹಬ್ಬ ಕಾರ್ಯಾಗಾರದ ಕುರಿತು ಹರ್ಷ ವ್ಯಕ್ತಪಡಿಸಿದರು.

Intro:ಅಳಿವಿಚಿನಲ್ಲಿರುವ ಹಕ್ಕಿಗಳ ಸಂತತಿ,ಸಂರಕ್ಷಣೆ ಹಾಗೂ ಅಧ್ಯಯನ‌ ನಿಟ್ಟಿನಲ್ಲಿ ಅರಣ್ಯ ಇಲಾಖೆವತಿಯಿಂದ ಕರ್ನಾಟಕ ಹಕ್ಕಿ ಹಬ್ಬವು ಚಿಕ್ಕಬಳ್ಳಾಪುರ ಹೊರ ವಲಯದ ಡಿಸ್ಕವರಿ ವಿಲೇಜ್‌ನಲ್ಲಿ 3 ದಿನಗಳ ಕಾರ್ಯಗಾರವನ್ನು ಏರ್ಪಡಿಸಿದ್ದು ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಸಿಸಿ ಪಾಟೀಲ್ ಚಾಲನೆ ಕೊಟ್ಟರು.


Body:ಇಂದಿನಿಂದ 3 ದಿನಗಳ ಕಾಲ ಸಂವಾದ,ಉಪನ್ಯಾಸ,ಹಕ್ಕಿಗಳ ವಿಕ್ಷಣೆ ಸೇರಿದಂತೆ ವಿವಿಧ ಕಾರ್ಯಗಾರವನ್ನು ನಂದಿಬೆಟ್ಟ ಸ್ಕಂದಗಿರಿ ಸೇರಿದಂತೆ ನಂದಿ ಬೆಟ್ಟದ ಸುತ್ತಲಿನ ಪ್ರದೇಶಗಳಲ್ಲಿ ಹಮ್ಮಿಕೊಳ್ಳಲಾಗಿದ್ದು ಕರ್ನಾಟಕ ರಾಜ್ಯದ ಹಲವೆಡೆಯಿಂದ ಪಕ್ಷಿ ಪ್ರೇಮಿಗಳು ಕಾರ್ಯಕ್ರಮಕ್ಕೆ ಹಾಜರಿದ್ದರು.

ಹಕ್ಕಿ ಹಬ್ನವನ್ನು ಚಿಕ್ಕಬಳ್ಳಾಪುರ ಕ್ಷೇತ್ರ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿರುವುದು ಸಾಕಷ್ಟು ಸಂತಸವನ್ನು ತಂದು ಕೊಟ್ಟಿದ್ದು,ಹಕ್ಕಿಗಳ ಸಂರಕ್ಷಣೆಗೆ ಅಧಿಕಾರಗಳು ಶ್ರಮವಹಿಸುತ್ತಿರುವುದು ಸಾಕಷ್ಟು ಸಂತಸವನ್ನು ತಂದು ಕೊಟ್ಟಿದೆ.ಹಕ್ಕಿಗಳು ಹಿಂದಿನ ಕಾಲಗಳಲ್ಲಿಯೂ ಪತ್ರಗಳ ರವಾನೆಗೆ ಮುಖ್ಯಪಾತ್ರವನ್ನು ಪಡೆದುಕೊಂಡಿತ್ತು ಆದರೆ ಈಗ ಪಕ್ಷಿಗಳ ಸಂತತಿ ಅಳಿವಿನ ಅಂಚಿನಲ್ಲಿದೆ‌ ಎಂದು ಸ್ಥಳೀಯ ಶಾಸಜ ಡಾ ಕೆ ಸುಧಾಕರ್ ತಿಳಿಸಿದರು.


ಹಕ್ಕಿಗಳ ಹಬ್ಬದ ಮುಖಾಂತರ ಪ್ರಾಣಿಗಳ ಮೇಲಿನ‌ ಪ್ರೀತಿ ಹೆಚ್ಚಾಗಲೀ,ಅವುಗಳ ಪಾಲನೆ ಪೋಷಣೆ ಹೆಚ್ಚಾಗಲೀ,ಸದ್ಯ ಕರ್ನಾಟಕದಲ್ಲಿ ಪಕ್ಷಿಗಳ ಸಂಖ್ಯೆ ಹೆಚ್ಚಾಗಿರುವುದು ಸಂತಸ ವಿಷಯ.ಹಕ್ಕಿಗಳ ಹಬ್ಬಗಳ‌ ಆಚರಣೆ ಮಾಡುವುದರಿಂದ ಜನಜಾಗೃತಿ ಮೂಡಿಸಬೇಕು ಎಂದು ಪರಿಸರ ಸಚಿವ ಹಾಗೂ ಜಿಬಶಾಸ್ತ್ರ ಸಚಿವ ಸಿಸಿ ಪಾಟೀಲ್ ತಿಳಿಸಿದರು.ಇದೇ ವೇಳೆ ಪಕ್ಷಿಗಳ ಸಂತತಿ ಹೆಚ್ಚಿಸಲು ಸಾಕಷ್ಟು ಯೋಜನೆಗಳನ್ನು ಸರ್ಕಾರ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಇನ್ನೂ ಕೇಂದ್ರ ಮಾನವ ಸಂಪನ್ಮೂಲ ಖಾತೆ ರಾಜ್ಯ ಸಚಿವರಾದ ಸತ್ಯಪಾಲ್ ಸಿಂಗ್ ಹಕ್ಕಿ ಹಬ್ಬದ ಬಗ್ಗೆ ಹರ್ಷವನ್ನು ವ್ಯಕ್ತಪಡಿಸಿದ್ದಾರೆ.


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.