ETV Bharat / state

ಚಿಕ್ಕಬಳ್ಳಾಪುರ: ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆಯ ಪತಿ ಹತ್ಯೆ; ಚಿಕ್ಕಪ್ಪನ ಕೊಂದು ಮಗ ಪರಾರಿ

author img

By ETV Bharat Karnataka Team

Published : Nov 28, 2023, 7:13 AM IST

Chikkaballapura murder case: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭೀಕರ ಕೊಲೆ ಪ್ರಕರಣ ನಡೆದಿದೆ. ಗುಂಡ್ಲಕೊತ್ತೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆಯ ಪತಿ ಹತ್ಯೆಯಾಗಿದ್ದಾರೆ.

Brutal Murder  Gram Panchayat Vice President  Murder of Gram Panchayat  ಉಪಾಧ್ಯಕ್ಷೆಯ ಗಂಡನ ಬರ್ಬರ ಕೊಲೆ  ಚಿಕ್ಕಪ್ಪನ ಕೊಂದು ಪರಾರಿಯಾದ ಮಗ  ಭೀಕರ ಕೊಲೆ  ಗುಂಡ್ಲಕೊತ್ತೂರು ಗ್ರಾಮ ಪಂಚಾಯಿತಿ  ಆರೋಪಿ ನಾಗರಾಜ್ ಪರಾರಿ
ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆಯ ಗಂಡನ ಬರ್ಬರ ಕೊಲೆ

ಚಿಕ್ಕಬಳ್ಳಾಪುರ: ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆಯ ಪತಿಯನ್ನು ಮಚ್ಚಿನಿಂದ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಗೌರಿಬಿದನೂರು ತಾಲ್ಲೂಕಿನ ಚೋಳಶೆಟ್ಟಿಹಳ್ಳಿ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಘಟನೆ ನಡೆದಿದೆ.

ಗುಂಡ್ಲಕೊತ್ತೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಗಂಗರತ್ನಮ್ಮ ಅವರ ಪತಿ ರಾಮಕೃಷ್ಣಪ್ಪ(56) ಕೊಲೆಯಾದವರು. ತೋಟದ ಮನೆಯಿಂದ ಚೋಳಶೆಟ್ಟಿಹಳ್ಳಿ ಗ್ರಾಮದ ಡೈರಿಗೆ ಹಾಲು ತರಲು ಹೋಗಿದ್ದಾಗ ಅಣ್ಣನ ಮಗ ನಾಗರಾಜ್ ದಾಳಿ ನಡೆಸಿ ಕೊಲೆ ಮಾಡಿದ್ದಾನೆ. ತೀವ್ರವಾಗಿ ಗಾಯಗೊಂಡ ರಾಮಕೃಷ್ಣಪ್ಪ ರಕ್ತದ ಮಡುವಿನಲ್ಲಿ ಸ್ಥಳದಲ್ಲೇ ಬಿದ್ದು ಅಸುನೀಗಿದ್ದಾರೆ. ಆರೋಪಿ ನಾಗರಾಜ್ ಪರಾರಿಯಾಗಿದ್ದಾನೆ.

ಚಿಕ್ಕಬಳ್ಳಾಪುರ ಎಸ್​ಪಿಡಿಎಲ್ ನಾಗೇಶ್, ಗೌರಿಬಿದನೂರು ವೃತ್ತ ನಿರೀಕ್ಷಕ ಸತ್ಯನಾರಾಯಣ, ಗೌರಿಬಿದನೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಎಫ್​ಎಸ್​ಎಲ್ ಹಾಗೂ ಶ್ವಾನ ದಳ ಸ್ಥಳಕ್ಕೆ ಆಗಮಿಸಿತ್ತು. ಗೌರಿಬಿದನೂರು ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಒಟ್ಟಿಗೆ ನಾಲ್ವರಿಂದ ವಿಷ ಸೇವನೆ: ಒಬ್ಬ ಯುವತಿ ಸಾವು, ಮೂವರ ಸ್ಥಿತಿ ಚಿಂತಾಜನಕ

ಇತ್ತೀಚಿನ ಘಟನೆಗಳು-ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ: ಕುಡಿದ ಮತ್ತಿನಲ್ಲಿ ಎರಡು ಗುಂಪುಗಳ ಜನರು ಒಬ್ಬರಿಗೊಬ್ಬರು ಮದ್ಯದ ಬಾಟಲಿಯಿಂದ ಹೊಡೆದಾಡಿಕೊಂಡ ಘಟನೆ ಗೌರಿಬಿದನೂರು ತಾಲೂಕಿನ ವಿದುರಾಶ್ವಥ ಗ್ರಾಮದ ದೇವಿ ಬಾರ್ ಆ್ಯಂಡ್ ರೆಸ್ಟೋರೆಂಟ್ ಬಳಿ ಇತ್ತೀಚಿಗೆ ನಡೆದಿದೆ. ಹಳೆಯ ದ್ವೇಷ ಹಾಗೂ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದೆ. ಮಾತಿಗೆ ಮಾತು ಬೆಳೆದು ಪರಸ್ಪರ ಹಲ್ಲೆ ಮಾಡಿಕೊಂಡಿದ್ದಾರೆ. ಗಲಾಟೆ ಬಿಡಿಸಲು ಹೋಗಿದ್ದ ಅಶ್ವಥ್ ನಾರಾಯಣಪ್ಪ ಎಂಬವರಿಗೆ ಹೊಡೆತ ಬಿದ್ದಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ ನಾಲ್ವರಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ರಮೇಶ್ ಗುಗ್ಗರ್ ಹಾಗೂ ಪಿಎಸ್​ಐ ಲಲಿತಮ್ಮ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚಿಕ್ಕಬಳ್ಳಾಪುರ: ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆಯ ಪತಿಯನ್ನು ಮಚ್ಚಿನಿಂದ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಗೌರಿಬಿದನೂರು ತಾಲ್ಲೂಕಿನ ಚೋಳಶೆಟ್ಟಿಹಳ್ಳಿ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಘಟನೆ ನಡೆದಿದೆ.

ಗುಂಡ್ಲಕೊತ್ತೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಗಂಗರತ್ನಮ್ಮ ಅವರ ಪತಿ ರಾಮಕೃಷ್ಣಪ್ಪ(56) ಕೊಲೆಯಾದವರು. ತೋಟದ ಮನೆಯಿಂದ ಚೋಳಶೆಟ್ಟಿಹಳ್ಳಿ ಗ್ರಾಮದ ಡೈರಿಗೆ ಹಾಲು ತರಲು ಹೋಗಿದ್ದಾಗ ಅಣ್ಣನ ಮಗ ನಾಗರಾಜ್ ದಾಳಿ ನಡೆಸಿ ಕೊಲೆ ಮಾಡಿದ್ದಾನೆ. ತೀವ್ರವಾಗಿ ಗಾಯಗೊಂಡ ರಾಮಕೃಷ್ಣಪ್ಪ ರಕ್ತದ ಮಡುವಿನಲ್ಲಿ ಸ್ಥಳದಲ್ಲೇ ಬಿದ್ದು ಅಸುನೀಗಿದ್ದಾರೆ. ಆರೋಪಿ ನಾಗರಾಜ್ ಪರಾರಿಯಾಗಿದ್ದಾನೆ.

ಚಿಕ್ಕಬಳ್ಳಾಪುರ ಎಸ್​ಪಿಡಿಎಲ್ ನಾಗೇಶ್, ಗೌರಿಬಿದನೂರು ವೃತ್ತ ನಿರೀಕ್ಷಕ ಸತ್ಯನಾರಾಯಣ, ಗೌರಿಬಿದನೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಎಫ್​ಎಸ್​ಎಲ್ ಹಾಗೂ ಶ್ವಾನ ದಳ ಸ್ಥಳಕ್ಕೆ ಆಗಮಿಸಿತ್ತು. ಗೌರಿಬಿದನೂರು ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಒಟ್ಟಿಗೆ ನಾಲ್ವರಿಂದ ವಿಷ ಸೇವನೆ: ಒಬ್ಬ ಯುವತಿ ಸಾವು, ಮೂವರ ಸ್ಥಿತಿ ಚಿಂತಾಜನಕ

ಇತ್ತೀಚಿನ ಘಟನೆಗಳು-ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ: ಕುಡಿದ ಮತ್ತಿನಲ್ಲಿ ಎರಡು ಗುಂಪುಗಳ ಜನರು ಒಬ್ಬರಿಗೊಬ್ಬರು ಮದ್ಯದ ಬಾಟಲಿಯಿಂದ ಹೊಡೆದಾಡಿಕೊಂಡ ಘಟನೆ ಗೌರಿಬಿದನೂರು ತಾಲೂಕಿನ ವಿದುರಾಶ್ವಥ ಗ್ರಾಮದ ದೇವಿ ಬಾರ್ ಆ್ಯಂಡ್ ರೆಸ್ಟೋರೆಂಟ್ ಬಳಿ ಇತ್ತೀಚಿಗೆ ನಡೆದಿದೆ. ಹಳೆಯ ದ್ವೇಷ ಹಾಗೂ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದೆ. ಮಾತಿಗೆ ಮಾತು ಬೆಳೆದು ಪರಸ್ಪರ ಹಲ್ಲೆ ಮಾಡಿಕೊಂಡಿದ್ದಾರೆ. ಗಲಾಟೆ ಬಿಡಿಸಲು ಹೋಗಿದ್ದ ಅಶ್ವಥ್ ನಾರಾಯಣಪ್ಪ ಎಂಬವರಿಗೆ ಹೊಡೆತ ಬಿದ್ದಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ ನಾಲ್ವರಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ರಮೇಶ್ ಗುಗ್ಗರ್ ಹಾಗೂ ಪಿಎಸ್​ಐ ಲಲಿತಮ್ಮ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.