ETV Bharat / state

ಬಿಜೆಪಿಯವ್ರು ಹಣದಿಂದ ಏನ್​ ಬೇಕಾದ್ರು ತೆಗೆದುಕೊಳ್ಳಬಹುದು ಎಂದುಕೊಂಡಿದ್ದಾರೆ: ಹೆಚ್​ಡಿಕೆ ವಾಗ್ದಾಳಿ

author img

By

Published : Dec 7, 2021, 5:13 AM IST

ಬಿಜೆಪಿಯು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಹಾಳು ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

kumaraswamy
ಕುಮಾರಸ್ವಾಮಿ

ಚಿಕ್ಕಬಳ್ಳಾಪುರ: ಬಿಜೆಪಿಯವರು ಹಣದಿಂದ ಏನು ಬೇಕಾದರೂ ಕೊಂಡುಕೊಳ್ಳಬಹುದು ಎಂದುಕೊಂಡಿದ್ದಾರೆ. ಈ ಹಿಂದೆ ಮೈತ್ರಿ ಸರ್ಕಾರದ ಅವಧಿಯಲ್ಲಿ 18 ಶಾಸಕರನ್ನು ಖರೀದಿಸಿ ಕುತಂತ್ರದ ರಾಜಕಾರಣ ಮಾಡಿದ್ದರು. ಈ ಮೂಲಕ ಬಿಜೆಪಿಯು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಹಾಳು ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ವಿಧಾನಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್​ ಅಭ್ಯರ್ಥಿಯ ಪರ ಅವರು ಮತಯಾಚನೆ ಮಾಡಿದರು. ಈ ಚುನಾವಣೆಗೆ ಜಿಲ್ಲಾ ಮಂತ್ರಿಗಳು ಅವರ ಅಭಿವೃದ್ಧಿಯ ಹೆಸರಿನಲ್ಲಿ ಮತ ಕೇಳುತ್ತಿಲ್ಲ. ಬಿಜೆಪಿಯವರು ಹಣದಲ್ಲಿ ಏನನ್ನಾದರೂ ಸಾಧಿಸಬಹುದು ಎಂದು ತಿಳಿದುಕೊಂಡಿದ್ದಾರೆ. ರಾಜಾರೋಷವಾಗಿ ಎಲ್ಲವೂ ನಡೆಯುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ನಾವು ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವುದು ದುಸ್ಸಾಹಸವಾಗಿದೆ ಎಂದು ಹೇಳಿದರು.

ಹೆಚ್​.ಡಿ.ಕುಮಾರಸ್ವಾಮಿ ವಾಗ್ದಾಳಿ

2023ಕ್ಕೆ ಜೆಡಿಎಸ್ ಪಕ್ಷಕ್ಕೆ ‌ಸಂಪೂರ್ಣ ಬಹುಮತ ನೀಡಬೇಕಿದೆ. ಶಿಕ್ಷಣ, ಆರೋಗ್ಯದ ಕಡೆ ನಾವು‌ ಹೆಚ್ಚು ಒತ್ತು‌ ನೀಡಲಿದ್ದೇವೆ ಎಂದು ಹೆಚ್​ಡಿಕೆ ಭರವಸೆ ನೀಡಿದರು.

ಇದನ್ನೂ ಓದಿ: ಬಿಡಿಎ ಕಚೇರಿಗಳ ಮೇಲೆ ಎಸಿಬಿ ದಾಳಿ : ನಾಲ್ವರು ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲು

ಚಿಕ್ಕಬಳ್ಳಾಪುರ: ಬಿಜೆಪಿಯವರು ಹಣದಿಂದ ಏನು ಬೇಕಾದರೂ ಕೊಂಡುಕೊಳ್ಳಬಹುದು ಎಂದುಕೊಂಡಿದ್ದಾರೆ. ಈ ಹಿಂದೆ ಮೈತ್ರಿ ಸರ್ಕಾರದ ಅವಧಿಯಲ್ಲಿ 18 ಶಾಸಕರನ್ನು ಖರೀದಿಸಿ ಕುತಂತ್ರದ ರಾಜಕಾರಣ ಮಾಡಿದ್ದರು. ಈ ಮೂಲಕ ಬಿಜೆಪಿಯು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಹಾಳು ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ವಿಧಾನಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್​ ಅಭ್ಯರ್ಥಿಯ ಪರ ಅವರು ಮತಯಾಚನೆ ಮಾಡಿದರು. ಈ ಚುನಾವಣೆಗೆ ಜಿಲ್ಲಾ ಮಂತ್ರಿಗಳು ಅವರ ಅಭಿವೃದ್ಧಿಯ ಹೆಸರಿನಲ್ಲಿ ಮತ ಕೇಳುತ್ತಿಲ್ಲ. ಬಿಜೆಪಿಯವರು ಹಣದಲ್ಲಿ ಏನನ್ನಾದರೂ ಸಾಧಿಸಬಹುದು ಎಂದು ತಿಳಿದುಕೊಂಡಿದ್ದಾರೆ. ರಾಜಾರೋಷವಾಗಿ ಎಲ್ಲವೂ ನಡೆಯುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ನಾವು ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವುದು ದುಸ್ಸಾಹಸವಾಗಿದೆ ಎಂದು ಹೇಳಿದರು.

ಹೆಚ್​.ಡಿ.ಕುಮಾರಸ್ವಾಮಿ ವಾಗ್ದಾಳಿ

2023ಕ್ಕೆ ಜೆಡಿಎಸ್ ಪಕ್ಷಕ್ಕೆ ‌ಸಂಪೂರ್ಣ ಬಹುಮತ ನೀಡಬೇಕಿದೆ. ಶಿಕ್ಷಣ, ಆರೋಗ್ಯದ ಕಡೆ ನಾವು‌ ಹೆಚ್ಚು ಒತ್ತು‌ ನೀಡಲಿದ್ದೇವೆ ಎಂದು ಹೆಚ್​ಡಿಕೆ ಭರವಸೆ ನೀಡಿದರು.

ಇದನ್ನೂ ಓದಿ: ಬಿಡಿಎ ಕಚೇರಿಗಳ ಮೇಲೆ ಎಸಿಬಿ ದಾಳಿ : ನಾಲ್ವರು ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.