ETV Bharat / state

ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಸ್ತ್ರೀ ಶಕ್ತಿ ಸಾಲ ಮನ್ನಾ ಮಾಡುತ್ತೇನೆ: ಹೆಚ್‌ಡಿಕೆ - ಪಂಚರತ್ನ ರಥಯಾತ್ರೆ

ನಮಗೆ ಒಂದು ಅವಕಾಶ ಕೊಡಿ, ನಿಮಗೆ ಸುಂದರ ಬದುಕು ಕಟ್ಟಿಕೊಡುತ್ತೇವೆ. ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಸ್ತ್ರೀ ಶಕ್ತಿ ಸಾಲ ಮನ್ನಾ ಮಾಡ್ತೀನಿ. ಇಲ್ಲದಿದ್ದರೆ ಪಕ್ಷವನ್ನು ವಿಸರ್ಜನೆ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಹೇಳಿದರು.

hd kumarswamy
ಹೆಚ್​ ಡಿ ಕುಮಾರಸ್ವಾಮಿ
author img

By

Published : Nov 24, 2022, 11:18 AM IST

Updated : Nov 24, 2022, 12:32 PM IST

ಚಿಕ್ಕಬಳ್ಳಾಪುರ: ಕೋವಿಡ್ 19 ವೈರಸ್​ ಮತ್ತು ಮಳೆಯ ಅನಾಹುತದಿಂದ ಅನೇಕ ಸಮಸ್ಯೆಗಳು ಎದುರಾಗಿದ್ದು ಬಿಜೆಪಿ ಸರ್ಕಾರದಿಂದ ಯಾವುದೇ ಸ್ಪಂದನೆ ದೊರೆತಿಲ್ಲ. ಆದ್ರೆ, ಪಂಚರತ್ನ ಯೋಜನೆ ಉದ್ದೇಶವೇ ಆರು ಕೋಟಿ ಜನರು ಉತ್ತಮವಾಗಿ ಬದುಕುವಂತೆ ಮಾಡುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಹೇಳಿದರು.

ಚಿಂತಾಮಣಿಯಲ್ಲಿ ಪಂಚರತ್ನ ರಥಯಾತ್ರೆ ವೇಳೆ ಮಾತನಾಡಿದ ಹೆಚ್​ಡಿಕೆ, ಬಿಜೆಪಿ ಸರ್ಕಾರ ಬಂದ ಬಳಿಕ ಮಕ್ಕಳಿಗೆ ಶಾಂತಿಯುತ ಬದುಕು ಕಲಿಸೋ ಬದಲು ಬೇರೆ ರೀತಿಯದ್ದನ್ನೇ ಕಲಿಸಲು ಹೊರಟಿದೆ. ನೀವು ಜನ್ಮಕೊಟ್ಟ ಮಕ್ಕಳು ಖರ್ಚಿಲ್ಲದೇ ವಿದ್ಯಾಭ್ಯಾಸ ಪಡೆಯಲು ಪ್ರತಿ ಗ್ರಾಮ ಪಂಚಾಯತಿಯಲ್ಲಿ ಎರಡರಿಂದ ಮೂರು ಉತ್ತಮ‌ ಶಾಲೆ ಆರಂಭಿಸಲಾಗುವುದು ತಿಳಿಸಿದರು.

ಪಂಚರತ್ನ ರಥಯಾತ್ರೆ ವೇಳೆ ಮಾತನಾಡಿದ ಹೆಚ್​ಡಿಕೆ

ಕೋವಿಡ್ ಸಂದರ್ಭದಲ್ಲಿ ಆಸ್ಪತ್ರೆ ಸೇರಿಸಲು ಸೂಕ್ತ ವ್ಯವಸ್ಥೆ ಇರಲಿಲ್ಲ. ಹೀಗಾಗಿ, ಸಾವಿರಾರು ಜನ ಸಾವನ್ನಪ್ಪಿದ್ದರು. ಒಂದು ಲಕ್ಷ ರೂ ಪರಿಹಾರ ಕೊಡುವುದಾಗಿ ಹೇಳಿ ಒಂದು ರೂಪಾಯಿಯನ್ನೂ ಕೂಡ ಬಿಡುಗಡೆ ಮಾಡಿಲ್ಲ. ನಾವು ಉತ್ತಮ ವೈದ್ಯರನ್ನು ನೇಮಕ ಮಾಡಿ, 24 ಗಂಟೆ ಖಾಸಗಿ ಆಸ್ಪತ್ರೆ ರೀತಿಯಲ್ಲಿ ಸೇವೆ ಸಿಗುವಂತೆ ಮಾಡುತ್ತೇವೆ. ಅನೇಕ ಜನ ಸಹಾಯ ಕೇಳಿಕೊಂಡು ಮನೆ ಬಳಿ ಬರುತ್ತಾರೆ, ನಾನು ಎಲ್ಲಿಂದ ಹಣ ತರಲಿ?. ಬೇರೆ ರಾಜಕಾರಣಿಗಳ ರೀತಿ ಖಾಸಗಿ ಶಾಲೆ ಇಟ್ಟುಕೊಂಡಿಲ್ಲ, ಬೇರೆಯವರ ರೀತಿ ಉದ್ಯಮಿ ಕೂಡ ಅಲ್ಲ. ಪ್ರತಿ ದಿನ ಸಹಾಯ ಮಾಡಬೇಕು ಅಂದ್ರೆ 50 ಲಕ್ಷ ರೂಪಾಯಿ ಬೇಕು. ಆದ್ರೆ ಅಷ್ಟು ಹಣ ಎಲ್ಲಿಂದ ತರಲಿ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಮಾಜಿ ಸಚಿವರು ಹತಾಶರಾಗಿದ್ದಾರೆ.. ಯೋಗೇಶ್ವರ್​ ವಿರುದ್ಧ ನಿಖಿಲ್ ಕುಮಾರಸ್ವಾಮಿ​​ ವಾಗ್ದಾಳಿ

ಬಿಜೆಪಿ ಸರ್ಕಾರಕ್ಕೆ 40% ಕೊಡಬೇಕು ಅಂತ ನೀವೇ ಮಾತನಾಡುತ್ತಿದ್ದೀರಾ, ನಮಗೆ ಒಂದು ಬಾರಿ ಸಂಪೂರ್ಣ ಬಹುಮತ ಕೊಡಿ. 60 ವರ್ಷ ಮೇಲ್ಪಟ್ಟವರಿಗೆ ಕೊನೆಯವರೆಗೂ ಪಿಂಚಣಿ ಕೊಡಲಾಗುವುದು. ಅಷ್ಟೇ ಅಲ್ಲದೆ, ವಿಧವಾ ವೇತನ, ಅಂಗವಿಕಲರಿಗೆ ಕೂಡ ಹಣ ನೀಡಲಾಗುವುದು. ಕೋವಿಡ್ ಸಂದರ್ಭದಲ್ಲಿ ಮೂರು ಸಾವಿರ ಮಹಿಳೆಯರನ್ನು ಕೆಲಸದಿಂದ ಕಿತ್ತು ಹಾಕಿದ್ರು. ನಮಗೆ ಒಂದು ಅವಕಾಶ ಕೊಡಿ, ನಿಮಗೆ ಸುಂದರ ಬದುಕು ಕಟ್ಟಿಕೊಡುತ್ತೇವೆ. ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಸ್ತ್ರೀ ಶಕ್ತಿ ಸಾಲ ಮನ್ನಾ ಮಾಡ್ತೀನಿ. ಇಲ್ಲದಿದ್ದರೆ ಪಕ್ಷವನ್ನ ವಿಸರ್ಜನೆ ಮಾಡುತ್ತೇನೆ ಎಂದರು.

ಇದನ್ನೂ ಓದಿ: ವಯಸ್ಸು 45 ದಾಟುತ್ತಿದೆ ಸಾರ್​.. ಮದುವೆಗೆ ಕನ್ಯೆ ಸಿಗುತ್ತಿಲ್ಲವೆಂದು ಹೆಚ್​ಡಿಕೆಗೆ ಮನವಿ ಪತ್ರ ಸಲ್ಲಿಸಿದ ರೈತ

2006 ರಲ್ಲಿ ನಾನು ಸಿಎಂ ಆದಾಗ ಚಿಕ್ಕಬಳ್ಳಾಪುರ ಜಿಲ್ಲೆ ಮಾಡಿದೆ. ಅದೇ ರೀತಿ ಈ ಜಿಲ್ಲೆಗೆ ಹಲವು ಯೋಜನೆ ತರುವ ಉದ್ದೇಶ ಇದೆ. ಕೋಲಾರ, ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ನೀರು ಕೊಡ್ತೀವಿ ಅಂತ 10 ಸಾವಿರ ಕೋಟಿ ಖರ್ಚು ಮಾಡಿದರು. ಆದ್ರೆ, ಒಂದು ಹನಿ ನೀರು ಕೂಡ ಬರಲಿಲ್ಲ. ಈಗ 24 ಸಾವಿರ ಕೋಟಿ ಹಣ ಬೇಕಂತೆ. ಬೆಂಗಳೂರಿನ ಕೊಳಚೆ ನೀರನ್ನು ನಿಮಗೆ ಕೊಡುತ್ತಿದ್ದಾರೆ. ಆ ನೀರಿನಿಂದ ಕ್ಯಾನ್ಸರ್ ಬರುವ ಸಾಧ್ಯತೆ ಇದೆ. ಅಂತವರಿಗೆ ತಕ್ಕ ಪಾಠ ಕಲಿಸುವ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಜೆಡಿಎಸ್ ಚುನಾವಣಾ ರಣಕಹಳೆ: ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಜೊತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಹೆಚ್​ಡಿಕೆ

ಚಿಕ್ಕಬಳ್ಳಾಪುರ: ಕೋವಿಡ್ 19 ವೈರಸ್​ ಮತ್ತು ಮಳೆಯ ಅನಾಹುತದಿಂದ ಅನೇಕ ಸಮಸ್ಯೆಗಳು ಎದುರಾಗಿದ್ದು ಬಿಜೆಪಿ ಸರ್ಕಾರದಿಂದ ಯಾವುದೇ ಸ್ಪಂದನೆ ದೊರೆತಿಲ್ಲ. ಆದ್ರೆ, ಪಂಚರತ್ನ ಯೋಜನೆ ಉದ್ದೇಶವೇ ಆರು ಕೋಟಿ ಜನರು ಉತ್ತಮವಾಗಿ ಬದುಕುವಂತೆ ಮಾಡುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಹೇಳಿದರು.

ಚಿಂತಾಮಣಿಯಲ್ಲಿ ಪಂಚರತ್ನ ರಥಯಾತ್ರೆ ವೇಳೆ ಮಾತನಾಡಿದ ಹೆಚ್​ಡಿಕೆ, ಬಿಜೆಪಿ ಸರ್ಕಾರ ಬಂದ ಬಳಿಕ ಮಕ್ಕಳಿಗೆ ಶಾಂತಿಯುತ ಬದುಕು ಕಲಿಸೋ ಬದಲು ಬೇರೆ ರೀತಿಯದ್ದನ್ನೇ ಕಲಿಸಲು ಹೊರಟಿದೆ. ನೀವು ಜನ್ಮಕೊಟ್ಟ ಮಕ್ಕಳು ಖರ್ಚಿಲ್ಲದೇ ವಿದ್ಯಾಭ್ಯಾಸ ಪಡೆಯಲು ಪ್ರತಿ ಗ್ರಾಮ ಪಂಚಾಯತಿಯಲ್ಲಿ ಎರಡರಿಂದ ಮೂರು ಉತ್ತಮ‌ ಶಾಲೆ ಆರಂಭಿಸಲಾಗುವುದು ತಿಳಿಸಿದರು.

ಪಂಚರತ್ನ ರಥಯಾತ್ರೆ ವೇಳೆ ಮಾತನಾಡಿದ ಹೆಚ್​ಡಿಕೆ

ಕೋವಿಡ್ ಸಂದರ್ಭದಲ್ಲಿ ಆಸ್ಪತ್ರೆ ಸೇರಿಸಲು ಸೂಕ್ತ ವ್ಯವಸ್ಥೆ ಇರಲಿಲ್ಲ. ಹೀಗಾಗಿ, ಸಾವಿರಾರು ಜನ ಸಾವನ್ನಪ್ಪಿದ್ದರು. ಒಂದು ಲಕ್ಷ ರೂ ಪರಿಹಾರ ಕೊಡುವುದಾಗಿ ಹೇಳಿ ಒಂದು ರೂಪಾಯಿಯನ್ನೂ ಕೂಡ ಬಿಡುಗಡೆ ಮಾಡಿಲ್ಲ. ನಾವು ಉತ್ತಮ ವೈದ್ಯರನ್ನು ನೇಮಕ ಮಾಡಿ, 24 ಗಂಟೆ ಖಾಸಗಿ ಆಸ್ಪತ್ರೆ ರೀತಿಯಲ್ಲಿ ಸೇವೆ ಸಿಗುವಂತೆ ಮಾಡುತ್ತೇವೆ. ಅನೇಕ ಜನ ಸಹಾಯ ಕೇಳಿಕೊಂಡು ಮನೆ ಬಳಿ ಬರುತ್ತಾರೆ, ನಾನು ಎಲ್ಲಿಂದ ಹಣ ತರಲಿ?. ಬೇರೆ ರಾಜಕಾರಣಿಗಳ ರೀತಿ ಖಾಸಗಿ ಶಾಲೆ ಇಟ್ಟುಕೊಂಡಿಲ್ಲ, ಬೇರೆಯವರ ರೀತಿ ಉದ್ಯಮಿ ಕೂಡ ಅಲ್ಲ. ಪ್ರತಿ ದಿನ ಸಹಾಯ ಮಾಡಬೇಕು ಅಂದ್ರೆ 50 ಲಕ್ಷ ರೂಪಾಯಿ ಬೇಕು. ಆದ್ರೆ ಅಷ್ಟು ಹಣ ಎಲ್ಲಿಂದ ತರಲಿ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಮಾಜಿ ಸಚಿವರು ಹತಾಶರಾಗಿದ್ದಾರೆ.. ಯೋಗೇಶ್ವರ್​ ವಿರುದ್ಧ ನಿಖಿಲ್ ಕುಮಾರಸ್ವಾಮಿ​​ ವಾಗ್ದಾಳಿ

ಬಿಜೆಪಿ ಸರ್ಕಾರಕ್ಕೆ 40% ಕೊಡಬೇಕು ಅಂತ ನೀವೇ ಮಾತನಾಡುತ್ತಿದ್ದೀರಾ, ನಮಗೆ ಒಂದು ಬಾರಿ ಸಂಪೂರ್ಣ ಬಹುಮತ ಕೊಡಿ. 60 ವರ್ಷ ಮೇಲ್ಪಟ್ಟವರಿಗೆ ಕೊನೆಯವರೆಗೂ ಪಿಂಚಣಿ ಕೊಡಲಾಗುವುದು. ಅಷ್ಟೇ ಅಲ್ಲದೆ, ವಿಧವಾ ವೇತನ, ಅಂಗವಿಕಲರಿಗೆ ಕೂಡ ಹಣ ನೀಡಲಾಗುವುದು. ಕೋವಿಡ್ ಸಂದರ್ಭದಲ್ಲಿ ಮೂರು ಸಾವಿರ ಮಹಿಳೆಯರನ್ನು ಕೆಲಸದಿಂದ ಕಿತ್ತು ಹಾಕಿದ್ರು. ನಮಗೆ ಒಂದು ಅವಕಾಶ ಕೊಡಿ, ನಿಮಗೆ ಸುಂದರ ಬದುಕು ಕಟ್ಟಿಕೊಡುತ್ತೇವೆ. ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಸ್ತ್ರೀ ಶಕ್ತಿ ಸಾಲ ಮನ್ನಾ ಮಾಡ್ತೀನಿ. ಇಲ್ಲದಿದ್ದರೆ ಪಕ್ಷವನ್ನ ವಿಸರ್ಜನೆ ಮಾಡುತ್ತೇನೆ ಎಂದರು.

ಇದನ್ನೂ ಓದಿ: ವಯಸ್ಸು 45 ದಾಟುತ್ತಿದೆ ಸಾರ್​.. ಮದುವೆಗೆ ಕನ್ಯೆ ಸಿಗುತ್ತಿಲ್ಲವೆಂದು ಹೆಚ್​ಡಿಕೆಗೆ ಮನವಿ ಪತ್ರ ಸಲ್ಲಿಸಿದ ರೈತ

2006 ರಲ್ಲಿ ನಾನು ಸಿಎಂ ಆದಾಗ ಚಿಕ್ಕಬಳ್ಳಾಪುರ ಜಿಲ್ಲೆ ಮಾಡಿದೆ. ಅದೇ ರೀತಿ ಈ ಜಿಲ್ಲೆಗೆ ಹಲವು ಯೋಜನೆ ತರುವ ಉದ್ದೇಶ ಇದೆ. ಕೋಲಾರ, ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ನೀರು ಕೊಡ್ತೀವಿ ಅಂತ 10 ಸಾವಿರ ಕೋಟಿ ಖರ್ಚು ಮಾಡಿದರು. ಆದ್ರೆ, ಒಂದು ಹನಿ ನೀರು ಕೂಡ ಬರಲಿಲ್ಲ. ಈಗ 24 ಸಾವಿರ ಕೋಟಿ ಹಣ ಬೇಕಂತೆ. ಬೆಂಗಳೂರಿನ ಕೊಳಚೆ ನೀರನ್ನು ನಿಮಗೆ ಕೊಡುತ್ತಿದ್ದಾರೆ. ಆ ನೀರಿನಿಂದ ಕ್ಯಾನ್ಸರ್ ಬರುವ ಸಾಧ್ಯತೆ ಇದೆ. ಅಂತವರಿಗೆ ತಕ್ಕ ಪಾಠ ಕಲಿಸುವ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಜೆಡಿಎಸ್ ಚುನಾವಣಾ ರಣಕಹಳೆ: ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಜೊತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಹೆಚ್​ಡಿಕೆ

Last Updated : Nov 24, 2022, 12:32 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.