ETV Bharat / state

ಅಕ್ರಮ ಮದ್ಯ ಮಾರಾಟ: ಕೈಕಟ್ಟಿ ಕೂತಿರುವ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ - ಚಿಕ್ಕಬಳ್ಳಾಪುರ

ಚಿಂತಾಮಣಿ ತಾಲೂಕಿನ ಕಾಗತಿ ಪಂಚಾಯತಿ ವ್ಯಾಪ್ತಿಯ ಕೃಷ್ಣರಾಜಪುರದಲ್ಲಿ ಪ್ರತಿನಿತ್ಯ ಮುಂಜಾನೆ ಅಕ್ರಮ ಮದ್ಯ ಮಾರಾಟ ನಡೆಸುತ್ತಿರುವುದು ಕಂಡು ಬಂದಿದ್ದು, ಇದಕ್ಕೆ ಅಬಕಾರಿ ಅಧಿಕಾರಿಗಳು ಸಾಥ್ ನೀಡುತ್ತಿದ್ದಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕೃಷ್ಣರಾಜಪುರದಲ್ಲಿ ಅಕ್ರಮ ಮದ್ಯ ಮಾರಾಟ
author img

By

Published : May 25, 2019, 5:15 PM IST

ಚಿಕ್ಕಬಳ್ಳಾಪುರ: ಸರ್ಕಾರದ ಕಟ್ಟುನಿಟ್ಟಿನ ಆದೇಶದ ನಡುವೆಯೂ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದು ಜಿಲ್ಲೆಯ ಚಿಂತಾಮಣಿ ತಾಲೂಕು ವ್ಯಾಪ್ತಿಯಲ್ಲಿ ಕಂಡು ಬಂದಿದೆ.

ಚಿಂತಾಮಣಿ ತಾಲೂಕಿನ ಕಾಗತಿ ಪಂಚಾಯತಿ ವ್ಯಾಪ್ತಿಯ ಕೃಷ್ಣರಾಜಪುರದಲ್ಲಿ ಪ್ರತಿನಿತ್ಯ ಮುಂಜಾನೆ ಅಕ್ರಮ ಮದ್ಯ ಮಾರಾಟ ನಡೆಸುತ್ತಿದೆ ಎನ್ನಲಾಗಿದೆ. ಗ್ರಾಮದಲ್ಲಿನ ಚಿಲ್ಲರೆ ಅಂಗಡಿಗಳಲ್ಲಿ ಮದ್ಯ ಮಾರಟ ನಡೆಯುತ್ತಿದ್ದರೂ ಅಬಕಾರಿ ಅಧಿಕಾರಿಗಳು ಮಾತ್ರ ನಮಗೇನು ಗೊತ್ತಿಲ್ಲ ಎಂಬಂತೆ ಸುಮ್ಮನೆ ಕುಳಿತಿದ್ದು, ಇದಕ್ಕೆ ಸಾಥ್ ನೀಡುತ್ತಿದ್ದಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕೃಷ್ಣರಾಜಪುರದಲ್ಲಿ ಅಕ್ರಮ ಮದ್ಯ ಮಾರಾಟ

ಗ್ರಾಮದಲ್ಲಿ ಮುಂಜಾನೆಯೇ ಅಂಗಡಿ ತಗೆಯುವುದರಿಂದ ಕುಡುಕರ ಹಾವಳಿಯೂ ದಿನೇ ದಿನೇ ಹೆಚ್ಚಾಗುತ್ತಿದ್ದು, ಯುವ ಸಮೂಹ ಸೇರಿದಂತೆ ವಿದ್ಯಾರ್ಥಿಗಳೂ ಸಹ ಕುಡಿತಕ್ಕೆ ಒಳಗಾಗುತ್ತಿದ್ದಾರೆ. ಇವುಗಳಿಗೆಲ್ಲ ಸಾಕ್ಷಿ ಎಂಬಂತೆ ಗ್ರಾಮದ ಬೀದಿ ಬೀದಿಗಳಲ್ಲಿ ಎಸೆದಿರುವ ಮದ್ಯದ ಬಾಟಲಿಗಳು ಎದ್ದು ಕಾಣುತ್ತಿವೆ. ಈ ಬಗ್ಗೆ ಇದುವರೆಗೆ ನಾಲ್ಕು ಬಾರಿ ಅಬಕಾರಿ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಷ್ಟೇ ಅಲ್ಲದೇ ಮೂಟೆಗಳಲ್ಲಿ ಮದ್ಯ ರವಾನೆಯಾಗುತ್ತಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂದು ಗ್ರಾಮಸ್ಥರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಚಿಕ್ಕಬಳ್ಳಾಪುರ: ಸರ್ಕಾರದ ಕಟ್ಟುನಿಟ್ಟಿನ ಆದೇಶದ ನಡುವೆಯೂ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದು ಜಿಲ್ಲೆಯ ಚಿಂತಾಮಣಿ ತಾಲೂಕು ವ್ಯಾಪ್ತಿಯಲ್ಲಿ ಕಂಡು ಬಂದಿದೆ.

ಚಿಂತಾಮಣಿ ತಾಲೂಕಿನ ಕಾಗತಿ ಪಂಚಾಯತಿ ವ್ಯಾಪ್ತಿಯ ಕೃಷ್ಣರಾಜಪುರದಲ್ಲಿ ಪ್ರತಿನಿತ್ಯ ಮುಂಜಾನೆ ಅಕ್ರಮ ಮದ್ಯ ಮಾರಾಟ ನಡೆಸುತ್ತಿದೆ ಎನ್ನಲಾಗಿದೆ. ಗ್ರಾಮದಲ್ಲಿನ ಚಿಲ್ಲರೆ ಅಂಗಡಿಗಳಲ್ಲಿ ಮದ್ಯ ಮಾರಟ ನಡೆಯುತ್ತಿದ್ದರೂ ಅಬಕಾರಿ ಅಧಿಕಾರಿಗಳು ಮಾತ್ರ ನಮಗೇನು ಗೊತ್ತಿಲ್ಲ ಎಂಬಂತೆ ಸುಮ್ಮನೆ ಕುಳಿತಿದ್ದು, ಇದಕ್ಕೆ ಸಾಥ್ ನೀಡುತ್ತಿದ್ದಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕೃಷ್ಣರಾಜಪುರದಲ್ಲಿ ಅಕ್ರಮ ಮದ್ಯ ಮಾರಾಟ

ಗ್ರಾಮದಲ್ಲಿ ಮುಂಜಾನೆಯೇ ಅಂಗಡಿ ತಗೆಯುವುದರಿಂದ ಕುಡುಕರ ಹಾವಳಿಯೂ ದಿನೇ ದಿನೇ ಹೆಚ್ಚಾಗುತ್ತಿದ್ದು, ಯುವ ಸಮೂಹ ಸೇರಿದಂತೆ ವಿದ್ಯಾರ್ಥಿಗಳೂ ಸಹ ಕುಡಿತಕ್ಕೆ ಒಳಗಾಗುತ್ತಿದ್ದಾರೆ. ಇವುಗಳಿಗೆಲ್ಲ ಸಾಕ್ಷಿ ಎಂಬಂತೆ ಗ್ರಾಮದ ಬೀದಿ ಬೀದಿಗಳಲ್ಲಿ ಎಸೆದಿರುವ ಮದ್ಯದ ಬಾಟಲಿಗಳು ಎದ್ದು ಕಾಣುತ್ತಿವೆ. ಈ ಬಗ್ಗೆ ಇದುವರೆಗೆ ನಾಲ್ಕು ಬಾರಿ ಅಬಕಾರಿ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಷ್ಟೇ ಅಲ್ಲದೇ ಮೂಟೆಗಳಲ್ಲಿ ಮದ್ಯ ರವಾನೆಯಾಗುತ್ತಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂದು ಗ್ರಾಮಸ್ಥರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

Intro:ಸರ್ಕಾರದ ಕಟ್ಟು ನಿಟ್ಟಿನ ಆದೇಶದ ನಡುವೆಯೂ ಅಕ್ರಮ ಮದ್ಯ ಮಾರಾಟ ಬೆಳಕಿಗೆ ಬಂದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕು ವ್ಯಾಪ್ತಿಯಲ್ಲಿ ಕಂಡು ಬಂದಿದೆ.Body:ಜಿಲ್ಲೆಯ ಚಿಂತಾಮಣಿ ತಾಲೂಕಿನ ಕಾಗತಿ ಪಂಚಾಯತಿ ವ್ಯಾಪ್ತಿಯ ಕೃಷ್ಣರಾಜಪುರದಲ್ಲಿ ಪ್ರತಿನಿತ್ಯ 7 ಗಂಟೆಗೆ ಅಕ್ರಮ ಮದ್ಯ ಮಾರಾಟ ನಡೆಸುತ್ತಿರುವ ಘಟನೆ ಬೆಳಕಿಗೆ ಬಂದಿದೆ.

ಗ್ರಾಮದಲ್ಲಿನ ಚಿಲ್ಲರೆ ಅಂಗಡಿಗಳಲ್ಲಿ ಮದ್ಯ ಮಾರಟ ನಡೆಯುತ್ತಿದ್ದರೂ ಅಬಕಾರಿ ಅಧಿಕಾರಿಗಳು ಮಾತ್ರ ನಮಗೇನು ಗೋತ್ತಿಲ್ಲ ಎಂಬಂತೆ ಅಕ್ರಮ ಮದ್ಯ ಮಾರಾಟಕ್ಕೆ ಸಾಥ್ ನೀಡುತ್ತಿದ್ದಾರೆಂದು ಗ್ರಾಮಸ್ಥರು ತಿಳಿಸಿದ್ದಾರೆ. ಇನ್ನೂ ಗ್ರಾಮದಲ್ಲಿ ಮುಂಜಾನೆಯೇ ಅಂಗಡಿ ತಗೆಯುವುದರಿಂದ ಕುಡುಕರ ಹಾವಳಿಯೂ ದಿನೇದಿನೇ ಹೆಚ್ಚಾಗುತ್ತಿದ್ದು ಯುವ ಸಮೂಹ ಸೇರಿದಂತೆ ವಿದ್ಯಾರ್ಥಿಗಳು ಸಹ ಕುಡಿತಕ್ಕೆ ಒಳಗಾಗುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೂ ಅಕ್ರಮ ಮದ್ಯ ಮಾರಾಟದ ಬಗ್ಗೆ ಇದುವರೆಗೂ 4 ಬಾರೀ ಅಬಕಾರಿ ಅಧಿಕಾರಿಗಳಿಗೆ ತಿಳಿಸಿದರು ಯಾವುದೇ ಪ್ರಯೋಜನವಿಲ್ಲವೆಂದು ತಮ್ಮ ಅಳಲ್ಲನ್ನು ತೋಡಿಕೊಂಡಿದ್ದಾರೆ.

ಸದ್ಯ ಇವುಗಳಿಗೆಲ್ಲಾ ಸಾಕ್ಷಿ ಎಂಬಂತೆ ಗ್ರಾಮದ ಬೀದಿ ಬೀದಿಗಳಲ್ಲಿಯೂ ಬಿಸಾಡಿದ ಮದ್ಯ ಬಾಟಲೀಗಳು ಎದ್ದು ಕಾಣುತ್ತಿವೆ.ಅಷ್ಟೇ ಅಲ್ಲದೇ ಮೂಟೆಗಳಲ್ಲಿ ರವಾನೆಯಾಗುತ್ತಿದ್ದರು ಅಧಿಕಾರಿಗಳು ಯಾವುದೇ ಕ್ರಮವನ್ನು ಕೈಗೊಳ್ಳುತ್ತಿಲ್ಲವೆಂದು ಗ್ರಾಮಸ್ಥರು ಈಟಿವಿ ಭಾರತ್ ಗೆ ನ್ಯಾಯ ದೊರಕಿಸಿಕೊಡುವಂತೆ ಕೇಳಿಕೊಂಡಿದ್ದಾರೆ.

ಸದ್ಯ ಈಗಲಾದ್ರು ಅಬಕಾರಿ ಇಲಾಖೆ ಅಧಿಕಾರಿಗಳು ಎಚ್ಚೇತ್ತು ಕೊಂಡು ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುತ್ತಾರೋ ಇಲ್ಲವೋ ಕಾದು ನೋಡ ಬೇಕಾಗಿದೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.