ಚಿಕ್ಕಬಳ್ಳಾಪುರ: ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ನಡೆಯುತ್ತಿದ್ದ ಚುನಾವಣೆ ವೇಳೆ ಸಾಮಾಜಿಕ ಅಂತರ ಹಾಗೂ ಶಿಸ್ತು ಕಾಪಾಡುವಂತೆ ಪೊಲೀಸರು ಶಿಕ್ಷಕರಿಗೆ ಸೂಚಿಸಿದ್ದಾರೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಕೈ-ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ.
ಚಿಂತಾಮಣಿ ನಗರದ ಬಾಲಕರ ಪ್ರೌಢಶಾಲೆಯಲ್ಲಿ ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿತ್ತು. ಗುಂಪುಗುಂಪಾಗಿ ಮಾತುಕತೆ ಹಾಗೂ ಮತದಾನಕ್ಕೆ ಹೋಗುತ್ತಿದ್ದ ಶಿಕ್ಷಕರಿಗೆ ಚುನಾವಣೆ ವೇಳೆ ಸಾಮಾಜಿಕ ಅಂತರ ಹಾಗೂ ಶಿಸ್ತನ್ನು ಕಾಪಾಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಓದಿ: ಕೋಲಾರ: ಎನ್ಒಸಿ ನೀಡದ್ದಕ್ಕೆ ಸಿಇಒ ಮೇಲೆ ಹಲ್ಲೆ, ಕೊಲೆ ಬೆದರಿಕೆ
ಪೊಲೀಸರ ಮನವಿಗೆ ಕ್ಯಾರೆನ್ನದ ಶಿಕ್ಷಕರ ವಿರುದ್ಧ ಪೊಲೀಸರು ಗರಂ ಆಗಿದ್ದಾರೆ. ನಂತರ ವಾಗ್ವಾದ ನಡೆದಿದೆ.