ETV Bharat / state

ಕೆಎಸ್ಆರ್​ಟಿಸಿ ಬಸ್ ಟೈರ್ ಸಿಡಿದು ಕಂಟೈನರ್​ಗೆ ಡಿಕ್ಕಿ: ಚಾಲಕ ಸೇರಿ 15 ಪ್ರಯಾಣಿಕರಿಗೆ ಗಂಭೀರ ಗಾಯ - undefined

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕೆಎಸ್​ಆರ್​​ಟಿಸಿ ಬಸ್‌ನ ಟೈರ್ ಸಿಡಿದು ಕಂಟೈನರ್​ಗೆ ಡಿಕ್ಕಿ ಹೊಡೆದ ಪರಿಣಾಮ 15 ಮಂದಿ ಗಾಯಗೊಂಡಿದ್ದಾರೆ.

ಕೆಎಸ್ಆರ್​ಟಿಸಿ
author img

By

Published : May 7, 2019, 3:00 PM IST

ಚಿಕ್ಕಬಳ್ಳಾಪುರ: ಕೆಎಸ್​ಆರ್​​ಟಿಸಿ ಬಸ್‌ನ ಟೈರ್ ಸಿಡಿದು ಕಂಟೈನರ್​ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿ 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗೊಂಡಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ನಡೆದಿದೆ.

ಕೆಎಸ್ಆರ್​ಟಿಸಿ

ಬಾಗೇಪಲ್ಲಿಯ ಹೊರವಲಯದ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ದೊಡ್ಡಬಳ್ಳಾಪುರ ಘಟಕಕ್ಕೆ ಸೇರಿದ ಬಸ್ ಚಿಕ್ಕಬಳ್ಳಾಪುರದತ್ತ ಸಾಗುತ್ತಿತ್ತು. ಈ ವೇಳೆ ಸರ್ಕಾರಿ ಪಾಲಿಟೆಕ್ನಿಕ್​ ಕಾಲೇಜು ಬಳಿ ಬಸ್​ನ ಮುಂಭಾಗದ ಟೈರ್ ಸಿಡಿದು ಚಾಲಕನ ನಿಯಂತ್ರಣ ಕಳೆದುಕೊಂಡಿತ್ತು. ನಂತರ ಬಸ್​ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ನಿಲ್ಲಿಸಿದ್ದ ಕಂಟೈನರ್ ಮತ್ತು ಜಾಹೀರಾತು ಫಲಕಕ್ಕೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಚಾಲಕ ಸೇರಿದಂತೆ 15 ಪ್ರಯಾಣಿಕರು ಗಂಭೀರವಾಗಿ ಗಾಯಗಗೊಂಡಿದ್ದಾರೆ. ಗಾಯಾಳುಗಳನ್ನು ಬಾಗೇಪಲ್ಲಿ ಸಾರ್ವಜನಿಕರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿಕ್ಕಬಳ್ಳಾಪುರ: ಕೆಎಸ್​ಆರ್​​ಟಿಸಿ ಬಸ್‌ನ ಟೈರ್ ಸಿಡಿದು ಕಂಟೈನರ್​ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿ 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗೊಂಡಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ನಡೆದಿದೆ.

ಕೆಎಸ್ಆರ್​ಟಿಸಿ

ಬಾಗೇಪಲ್ಲಿಯ ಹೊರವಲಯದ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ದೊಡ್ಡಬಳ್ಳಾಪುರ ಘಟಕಕ್ಕೆ ಸೇರಿದ ಬಸ್ ಚಿಕ್ಕಬಳ್ಳಾಪುರದತ್ತ ಸಾಗುತ್ತಿತ್ತು. ಈ ವೇಳೆ ಸರ್ಕಾರಿ ಪಾಲಿಟೆಕ್ನಿಕ್​ ಕಾಲೇಜು ಬಳಿ ಬಸ್​ನ ಮುಂಭಾಗದ ಟೈರ್ ಸಿಡಿದು ಚಾಲಕನ ನಿಯಂತ್ರಣ ಕಳೆದುಕೊಂಡಿತ್ತು. ನಂತರ ಬಸ್​ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ನಿಲ್ಲಿಸಿದ್ದ ಕಂಟೈನರ್ ಮತ್ತು ಜಾಹೀರಾತು ಫಲಕಕ್ಕೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಚಾಲಕ ಸೇರಿದಂತೆ 15 ಪ್ರಯಾಣಿಕರು ಗಂಭೀರವಾಗಿ ಗಾಯಗಗೊಂಡಿದ್ದಾರೆ. ಗಾಯಾಳುಗಳನ್ನು ಬಾಗೇಪಲ್ಲಿ ಸಾರ್ವಜನಿಕರ ಆಸ್ಪತ್ರೆಗೆ ದಾಖಲಿಸಲಾಗಿದೆ.

Intro:
ಕೆಎಸ್ ಆರ್ ಟಿಸಿ ಬಸ್‌ನ ಟೈರ್ ಸಿಡಿದು ಕಂಟೈನರ್ ಗೆ ಡಿಕ್ಕಿ ಹೊಡೆದ ಪರಿಣಾಮ 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ 7 ರಲ್ಲಿ ನಡೆದಿದೆ.
Body:ದೊಡ್ಡಬಳ್ಳಾಪುರ ಘಟಕಕ್ಕೆ ಸೇರಿದ ಸಾರಿಗೆ ಸಂಸ್ಥೆ ಬಸ್ ಬಾಗೇಪಲ್ಲಿಯಿಂದ ಚಿಕ್ಕಬಳ್ಳಾಪುರದತ್ತ ಬರುವಾಗ ಸರ್ಕಾರಿ ಪಾಲಿಟೆಕ್ನಿಕಲ್ ಕಾಲೇಜು ಬಳಿ ಬಸ್ ನ ಮುಂಭಾಗದ ಟೈರ್ ಸಿಡಿದು ಚಾಲಕನ ನಿಯಂತ್ರಣ ಕಳೆದುಕೊಂಡು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ನಿಲ್ಲಿಸಿದ್ದ ಕಂಟೈನರ್ ಮತ್ತು ಜಾಹಿರಾತು ಫಲಕಕ್ಕೆ ಡಿಕ್ಕಿ ಹೊಡೆದಿದೆ. ಸದ್ಯ ಚಾಲಕ ಸೇರಿದಂತೆ 15 ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು ಬಾಗೇಪಲ್ಲಿ ಸಾರ್ವಜನಿಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ ಈ ಘಟನೆ ಬಾಗೇಪಲ್ಲಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.