ಚಿಕ್ಕಬಳ್ಳಾಪುರ: ರಸ್ತೆ ದಾಟುವ ವೇಳೆ ಚಿರತೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಆರೂರು ಗ್ರಾಮದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 44ರ ನಿರ್ಮಾಣ ಹಂತದ ಮೆಡಿಕಲ್ ಕಾಲೇಜು ಬಳಿಯ ಡಿವೈಡರ್ ಮೇಲೆ ಸುಮಾರು 2 ವರ್ಷದ ಚಿರತೆ ಸಾವನ್ನಪ್ಪಿದೆ. ಆರಂಭದಲ್ಲಿ ಚಿರತೆಯನ್ನು ನೋಡಿದ ಸವಾರರು ಗಾಬರಿಗೊಂಡಿದ್ದಾರೆ.
ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಚಿರತೆ ಸಾವು
ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆಯೊಂದು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
![ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಚಿರತೆ ಸಾವು leopard dies Chikkaballapur](https://etvbharatimages.akamaized.net/etvbharat/prod-images/768-512-14699520-thumbnail-3x2-new.jpg?imwidth=3840)
ಬಳಿಕ ಚಿರತೆ ಸಾವನ್ನಪ್ಪಿದ ವಿಷಯ ತಿಳಿಯುತ್ತಿದ್ದಂತೆ ನೂರಾರು ಜನರು ಫೋಟೋ ತೆಗೆಯಲು ಜಮಾಯಿಸಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಪೆರೇಸಂದ್ರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದರು.
ಚಿಕ್ಕಬಳ್ಳಾಪುರ: ರಸ್ತೆ ದಾಟುವ ವೇಳೆ ಚಿರತೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಆರೂರು ಗ್ರಾಮದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 44ರ ನಿರ್ಮಾಣ ಹಂತದ ಮೆಡಿಕಲ್ ಕಾಲೇಜು ಬಳಿಯ ಡಿವೈಡರ್ ಮೇಲೆ ಸುಮಾರು 2 ವರ್ಷದ ಚಿರತೆ ಸಾವನ್ನಪ್ಪಿದೆ. ಆರಂಭದಲ್ಲಿ ಚಿರತೆಯನ್ನು ನೋಡಿದ ಸವಾರರು ಗಾಬರಿಗೊಂಡಿದ್ದಾರೆ.
ಬಳಿಕ ಚಿರತೆ ಸಾವನ್ನಪ್ಪಿದ ವಿಷಯ ತಿಳಿಯುತ್ತಿದ್ದಂತೆ ನೂರಾರು ಜನರು ಫೋಟೋ ತೆಗೆಯಲು ಜಮಾಯಿಸಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಪೆರೇಸಂದ್ರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದರು.