ಚಿಕ್ಕಬಳ್ಳಾಪುರ: ವಿಶ್ವಪ್ರಸಿದ್ಧ ಪ್ರವಾಸಿಗರ ನೆಚ್ಚಿನ ಸ್ಥಳ ಹಾಗೂ ಪ್ರೇಮಿಗಳ ಸ್ವರ್ಗ ನಂದಿಬೆಟ್ಟಕ್ಕೆ ಜಿಲ್ಲಾಡಳಿತ ಮತ್ತೆ ಲಾಕ್ಡೌನ್ ಆದೇಶ ಹೊರಡಿಸಿದೆ.
ವೀಕೆಂಡ್ನಲ್ಲಿ ಎರಡು ದಿನಗಳ ಸಂಪೂರ್ಣ ಲಾಕ್ಡೌನ್ಗೆ ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್ ಆದೇಶ ಹೊರಡಿಸಿದ್ದು, ಪ್ರವಾಸಿಗರಿಗೆ ಮತ್ತೆ ಗೊಂದಲವಾಗಿದೆ. ಅನ್ಲಾಕ್ ನಂತರ ಪ್ರವಾಸಿಗರಿಗೆ ಬೆಟ್ಟಕ್ಕೆ ಪ್ರವೇಶಿಸಲು ಅನುಮತಿ ನೀಡಲಾಗಿತ್ತು. ಆದರೆ ದಾಖಲೆಯ ಸಂಖ್ಯೆಯಲ್ಲಿ ಜನ ಬಂದಿದ್ದರಿಂದ ಜಿಲ್ಲಾಡಳಿತಕ್ಕೆ ತಲೆ ನೋವಾಗಿ ಪರಿಣಮಿಸಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಿಲ್ಲಾಡಳಿತ ವೀಕ್ ಎಂಡ್ ಲಾಕ್ಡೌನ್ ಆದೇಶವನ್ನು ಜಾರಿಗೊಳಿಸುವಂತೆ ಆದೇಶ ಹೊರಡಿಸಿದೆ.
ಸಿಲಿಕಾನ್ ಸಿಟಿಗೆ ಹತ್ತಿರವಿರುವ ಈ ಬೆಟ್ಟಕ್ಕೆ ವೀಕ್ ಎಂಡ್ ಬಂತೆಂದರೆ ಪರಿಸರ ಪ್ರೇಮಿಗಳು ದೊಡ್ಡ ಸಂಖ್ಯೆಯಲ್ಲಿ ಭೇಟಿ ಕೊಟ್ಟು ಪ್ರಕೃತಿ ಸೌಂದರ್ಯವನ್ನು ಸವಿಯುತ್ತಾರೆ. ಸದ್ಯ ಕೊರೊನಾ ಸೊಂಕಿನ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ಸುಧಾಕರ್ ಚರ್ಚೆ ನಡೆಸಿ ಈ ನಿರ್ಧಾರ ಕೈಗೊಂಡಿದ್ದಾರೆ.
ಇದನ್ನೂ ಓದಿ: ಒಂದು ಹೆಣ್ಣು ಆಗಿ ಈ ರೀತಿ ಮಾಡೋಕೆ ಎಷ್ಟು ಧೈರ್ಯ?: ನಟ ದರ್ಶನ್