ETV Bharat / state

ಮನೆ ಮುಂದೆ ಗಲಾಟೆ ಮಾಡಬೇಡ ಎಂದಿದ್ದಕ್ಕೆ ಬೈಕ್​ಗೆ ಬೆಂಕಿ ಹಚ್ಚಿದ ಭೂಪ

author img

By

Published : Mar 5, 2021, 4:03 PM IST

ಕುಪಿತಗೊಂಡ ನರಸಿಂಹಮೂರ್ತಿ ತಡರಾತ್ರಿ 3 ಗಂಟೆ ಸಮಯದಲ್ಲಿ ಆಂಜನಪ್ಪ ಮನೆಯನ್ನು ಹೊರಗಿನಿಂದ ಲಾಕ್ ಮಾಡಿ ಮನೆ ಮುಂದೆ ನಿಂತಿದ್ದ ಬೈಕ್​ಗೆ ಬೆಂಕಿ ಹಚ್ಚಿದ್ದಾನೆ.

Man set fire to Bike in bagepalli
ಮನೆ ಮುಂದೆ ಗಲಾಟೆ ಮಾಡಬೇಡ ಎಂದಿದ್ದಕ್ಕೆ ಬೈಕ್​ಗೆ ಬೆಂಕಿ ಹಚ್ಚಿದ ಭೂಪ

ಬಾಗೇಪಲ್ಲಿ: ಮನೆ ಎದುರು ಗಲಾಟೆ ಮಾಡಬೇಡ ಎಂದಿದ್ದಕ್ಕೆ ಕೋಪಗೊಂಡ ವ್ಯಕ್ತಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗೆ ಬೆಂಕಿ ಹಚ್ಚಿದ ಘಟನೆ ತಾಲ್ಲೂಕಿನ ಯಲ್ಲಂಪಲ್ಲಿ ಗ್ರಾಮದಲ್ಲಿ ನಡೆದಿದೆ.

ಆಂಜನಪ್ಪ ಅವರಿಗೆ ಸೇರಿರುವ ಹೋಂಡಾ ಡಿಯೋ ಬೈಕ್ ಸುಟ್ಟುಹೋಗಿದೆ. ಬೆಂಕಿಯಿಂದ ಕಿಟಕಿ, ಗ್ರಾನೈಟ್ ಮತ್ತು ಇತರ ವಸ್ತುಗಳು ಸುಟ್ಟು ಬೂದಿಯಾಗಿವೆ. ಗ್ರಾಮದ ನರಸಿಂಹಮೂರ್ತಿ ಎಂಬಾತ ಕ್ಷುಲ್ಲಕ ಕಾರಣಕ್ಕಾಗಿ ರಾತ್ರಿ 8 ಗಂಟೆ ಸಮಯದಲ್ಲಿ ಆಂಜನಪ್ಪನವರ ಮನೆ ಮುಂಭಾಗದಲ್ಲಿ ಗಲಾಟೆ ಮಾಡುತ್ತಿದ್ದಾಗ, ಮನೆ ಎದುರು ಗಲಾಟೆ ಮಾಡಬೇಡ ಎಂದು ಹೇಳಿದ್ದಾರೆ.

ಮಾತಿಗೆ ಮಾತು ಬೆಳೆದು, ಇಬ್ಬರ ನಡುವೆ ಗಲಾಟೆ ನಡೆದಿದೆ. ಕುಪಿತಗೊಂಡ ನರಸಿಂಹಮೂರ್ತಿ ತಡರಾತ್ರಿ 3 ಗಂಟೆ ಸಮಯದಲ್ಲಿ ಆಂಜಿನಪ್ಪ ಮನೆಯನ್ನು ಹೊರಗಿನಿಂದ ಲಾಕ್ ಮಾಡಿ ಮನೆ ಮುಂದೆ ನಿಂತಿದ್ದ ಬೈಕ್​ಗೆ ಬೆಂಕಿ ಹಚ್ಚಿದ್ದಾನೆ. ಇದನ್ನು ಗಮನಿಸಿದ ನೆರೆಮನೆಯವರು ಕೋಡಲೇ ಬೆಂಕಿ ನಂದಿಸಿ ಬಾಗೇಪಲ್ಲಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬಾಗೇಪಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಬಾಗೇಪಲ್ಲಿ: ಮನೆ ಎದುರು ಗಲಾಟೆ ಮಾಡಬೇಡ ಎಂದಿದ್ದಕ್ಕೆ ಕೋಪಗೊಂಡ ವ್ಯಕ್ತಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗೆ ಬೆಂಕಿ ಹಚ್ಚಿದ ಘಟನೆ ತಾಲ್ಲೂಕಿನ ಯಲ್ಲಂಪಲ್ಲಿ ಗ್ರಾಮದಲ್ಲಿ ನಡೆದಿದೆ.

ಆಂಜನಪ್ಪ ಅವರಿಗೆ ಸೇರಿರುವ ಹೋಂಡಾ ಡಿಯೋ ಬೈಕ್ ಸುಟ್ಟುಹೋಗಿದೆ. ಬೆಂಕಿಯಿಂದ ಕಿಟಕಿ, ಗ್ರಾನೈಟ್ ಮತ್ತು ಇತರ ವಸ್ತುಗಳು ಸುಟ್ಟು ಬೂದಿಯಾಗಿವೆ. ಗ್ರಾಮದ ನರಸಿಂಹಮೂರ್ತಿ ಎಂಬಾತ ಕ್ಷುಲ್ಲಕ ಕಾರಣಕ್ಕಾಗಿ ರಾತ್ರಿ 8 ಗಂಟೆ ಸಮಯದಲ್ಲಿ ಆಂಜನಪ್ಪನವರ ಮನೆ ಮುಂಭಾಗದಲ್ಲಿ ಗಲಾಟೆ ಮಾಡುತ್ತಿದ್ದಾಗ, ಮನೆ ಎದುರು ಗಲಾಟೆ ಮಾಡಬೇಡ ಎಂದು ಹೇಳಿದ್ದಾರೆ.

ಮಾತಿಗೆ ಮಾತು ಬೆಳೆದು, ಇಬ್ಬರ ನಡುವೆ ಗಲಾಟೆ ನಡೆದಿದೆ. ಕುಪಿತಗೊಂಡ ನರಸಿಂಹಮೂರ್ತಿ ತಡರಾತ್ರಿ 3 ಗಂಟೆ ಸಮಯದಲ್ಲಿ ಆಂಜಿನಪ್ಪ ಮನೆಯನ್ನು ಹೊರಗಿನಿಂದ ಲಾಕ್ ಮಾಡಿ ಮನೆ ಮುಂದೆ ನಿಂತಿದ್ದ ಬೈಕ್​ಗೆ ಬೆಂಕಿ ಹಚ್ಚಿದ್ದಾನೆ. ಇದನ್ನು ಗಮನಿಸಿದ ನೆರೆಮನೆಯವರು ಕೋಡಲೇ ಬೆಂಕಿ ನಂದಿಸಿ ಬಾಗೇಪಲ್ಲಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬಾಗೇಪಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.