ETV Bharat / state

ಅಂತಾರಾಜ್ಯ ಪ್ರಯಾಣಿಕರ ತಲೆಬಿಸಿ: ಟ್ವಿಟರ್​ನಲ್ಲಿ ಅಸಹಾಯಕತೆ ವ್ಯಕ್ತಪಡಿಸಿದ ವೈದ್ಯಕೀಯ ಶಿಕ್ಷಣ ಸಚಿವ..!

author img

By

Published : May 21, 2020, 4:59 PM IST

ರಾಜ್ಯದಲ್ಲಿನ ಘಟನಾವಳಿಗಳನ್ನು ಕಂಡು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್​ ಟ್ವಿಟರ್​ನಲ್ಲಿ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

Medical Education Minister Sudhakar tweet about  outer state travelers
ಶಿಕ್ಷಣ ಸಚಿವ ಸುಧಾಕರ್​ ಟ್ವಿಟ್ಟರ್

ಚಿಕ್ಕಬಳ್ಳಾಪುರ: ಹೊರರಾಜ್ಯದ ಪ್ರಯಾಣಿಕರಿಂದ ರಾಜ್ಯದಲ್ಲಿ ಆತಂಕ ಹೆಚ್ಚಾಗಿದ್ದು, ಈ ಬಗ್ಗೆ ತಲೆಬಿಸಿ ಮಾಡಿಕೊಂಡಿರುವ ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್​ ಟ್ವಿಟರ್​​​​​ನಲ್ಲಿ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿನ ಘಟನಾವಳಿಗಳಿಂದ ಆತಂಕ ಹೆಚ್ಚಾಗಿದೆ. ಇದರಿಂದ ನನಗೆ ನಿದ್ದೆಯೇ ಬರುತ್ತಿಲ್ಲ ಎಂದು ತಮ್ಮ‌ ಟ್ವಿಟರ್​​​​ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.

Medical Education Minister Sudhakar tweet about  outer state travelers
ಶಿಕ್ಷಣ ಸಚಿವ ಸುಧಾಕರ್​ ಟ್ವೀಟ್​​​

ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೇ ಮಹಾರಾಷ್ಟ್ರದಿಂದ ಸುಮಾರು 250 ಜನರನ್ನು 6 ಬಸ್​ನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಕಳುಹಿಸಿರುವುದು ದುರದೃಷ್ಟಕರ ಹಾಗೂ ದುಡುಕಿನ ನಿರ್ಧಾರ. ಹೊರರಾಜ್ಯದ ಪ್ರಯಾಣಿಕರಿಂದ ಸೋಂಕಿತರ ಸಂಖ್ಯೆ ಹೆಚ್ಚಳವಾಗಬಹುದೆಂಬ ಆತಂಕದಿಂದ ನಿದ್ದೆ ಬರುತ್ತಿಲ್ಲ. ಸದ್ಯ ಎಲ್ಲಾ ಜಿಲ್ಲಾಡಳಿತಗಳು ಎಚ್ಚರವಹಿಸಬೇಕು ಎಂದು ಟ್ವಿಟರ್​​​​​​ನಲ್ಲಿ ಮನವಿ ಮಾಡಿದ್ದಾರೆ.

Medical Education Minister Sudhakar tweet about  outer state travelers
ಅಸಾಯಕತೆ ವ್ಯಕ್ತಪಡಿಸಿದ ಶಿಕ್ಷಣ ಸಚಿವ ಸುಧಾಕರ್​

ಇನ್ನು ಈಗಾಗಲೇ ಮಖ್ಯ ಕಾರ್ಯದರ್ಶಿಯ ಜೊತೆ ಮಾತನಾಡಿದ್ದು, ಕಳೆದ ಎರಡು ದಿನಗಳಿಂದ ನಮ್ಮ ಗಡಿಯಲ್ಲಿ ಬಂದು ಕಾಯುತ್ತಿದ್ದರು. ಹೀಗಾಗಿ ಮಾನವೀಯತೆ ದೃಷ್ಟಿಯಿಂದ ಅವರನ್ನು ಬಿಡಬೇಕಾಯಿತೆಂದು ತಿಳಿಸಿದ್ದಾರೆ. ಇನ್ನು ಹೊರ ರಾಜ್ಯದಿಂದ ಬಂದ ಎಲ್ಲರನ್ನೂ ಕ್ವಾರಂಟೈನ್​ ಮಾಡಲಾಗುತ್ತಿದ್ದು, ಎಲ್ಲರ ಪರೀಕ್ಷೆಯನ್ನು ಮಾಡಲಾಗುತ್ತಿದೆ. ಜಿಲ್ಲೆಯ ಜನರು ಆತಂಕಪಡಬೇಕಿಲ್ಲ ಎಂದಿದ್ದಾರೆ.

ಚಿಕ್ಕಬಳ್ಳಾಪುರ: ಹೊರರಾಜ್ಯದ ಪ್ರಯಾಣಿಕರಿಂದ ರಾಜ್ಯದಲ್ಲಿ ಆತಂಕ ಹೆಚ್ಚಾಗಿದ್ದು, ಈ ಬಗ್ಗೆ ತಲೆಬಿಸಿ ಮಾಡಿಕೊಂಡಿರುವ ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್​ ಟ್ವಿಟರ್​​​​​ನಲ್ಲಿ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿನ ಘಟನಾವಳಿಗಳಿಂದ ಆತಂಕ ಹೆಚ್ಚಾಗಿದೆ. ಇದರಿಂದ ನನಗೆ ನಿದ್ದೆಯೇ ಬರುತ್ತಿಲ್ಲ ಎಂದು ತಮ್ಮ‌ ಟ್ವಿಟರ್​​​​ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.

Medical Education Minister Sudhakar tweet about  outer state travelers
ಶಿಕ್ಷಣ ಸಚಿವ ಸುಧಾಕರ್​ ಟ್ವೀಟ್​​​

ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೇ ಮಹಾರಾಷ್ಟ್ರದಿಂದ ಸುಮಾರು 250 ಜನರನ್ನು 6 ಬಸ್​ನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಕಳುಹಿಸಿರುವುದು ದುರದೃಷ್ಟಕರ ಹಾಗೂ ದುಡುಕಿನ ನಿರ್ಧಾರ. ಹೊರರಾಜ್ಯದ ಪ್ರಯಾಣಿಕರಿಂದ ಸೋಂಕಿತರ ಸಂಖ್ಯೆ ಹೆಚ್ಚಳವಾಗಬಹುದೆಂಬ ಆತಂಕದಿಂದ ನಿದ್ದೆ ಬರುತ್ತಿಲ್ಲ. ಸದ್ಯ ಎಲ್ಲಾ ಜಿಲ್ಲಾಡಳಿತಗಳು ಎಚ್ಚರವಹಿಸಬೇಕು ಎಂದು ಟ್ವಿಟರ್​​​​​​ನಲ್ಲಿ ಮನವಿ ಮಾಡಿದ್ದಾರೆ.

Medical Education Minister Sudhakar tweet about  outer state travelers
ಅಸಾಯಕತೆ ವ್ಯಕ್ತಪಡಿಸಿದ ಶಿಕ್ಷಣ ಸಚಿವ ಸುಧಾಕರ್​

ಇನ್ನು ಈಗಾಗಲೇ ಮಖ್ಯ ಕಾರ್ಯದರ್ಶಿಯ ಜೊತೆ ಮಾತನಾಡಿದ್ದು, ಕಳೆದ ಎರಡು ದಿನಗಳಿಂದ ನಮ್ಮ ಗಡಿಯಲ್ಲಿ ಬಂದು ಕಾಯುತ್ತಿದ್ದರು. ಹೀಗಾಗಿ ಮಾನವೀಯತೆ ದೃಷ್ಟಿಯಿಂದ ಅವರನ್ನು ಬಿಡಬೇಕಾಯಿತೆಂದು ತಿಳಿಸಿದ್ದಾರೆ. ಇನ್ನು ಹೊರ ರಾಜ್ಯದಿಂದ ಬಂದ ಎಲ್ಲರನ್ನೂ ಕ್ವಾರಂಟೈನ್​ ಮಾಡಲಾಗುತ್ತಿದ್ದು, ಎಲ್ಲರ ಪರೀಕ್ಷೆಯನ್ನು ಮಾಡಲಾಗುತ್ತಿದೆ. ಜಿಲ್ಲೆಯ ಜನರು ಆತಂಕಪಡಬೇಕಿಲ್ಲ ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.