ETV Bharat / state

ನೂತನ ಶಿಕ್ಷಣ ನೀತಿ ಎಲ್ಲಾ ವರ್ಗದವರಿಗೂ ನ್ಯಾಯಯುತ ಶಿಕ್ಷಣ ಒದಗಿಸಲು ಅನುಕೂಲ : ಡಾ.ಕೆ.ಸುಧಾಕರ್

author img

By

Published : Aug 23, 2021, 5:08 PM IST

ಒಂದು ಕೊಠಡಿಯಲ್ಲಿ 20 ಮಕ್ಕಳು ಕೂರಲಿದ್ದಾರೆ. ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಸಹ ನೀಡಲಾಗಿದೆ. ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿಗಳ ಪಾಲನೆ ಮಾಡಬೇಕಾಗಿದೆ. ಇನ್ನ, ಸಿಬ್ಬಂದಿ, ಶಿಕ್ಷಕರಲ್ಲಿ ಕೋವಿಡ್ ಗುಣಲಕ್ಷಣಗಳು ಕಂಡು ಬಂದರೆ ತಕ್ಷಣ ಪರೀಕ್ಷೆ ಮಾಡಬೇಕಾಗಿದೆ..

minister Sudhakar statement on NEP in Bangalore
ಸಚಿವ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ : 18 ತಿಂಗಳಿನ ನಂತರ ಮಕ್ಕಳಿಗೆ ಇಂದಿನಿಂದ ತರಗತಿಗಳು ಪ್ರಾರಂಭವಾಗುತ್ತಿವೆ. ವಿದ್ಯಾರ್ಥಿಗಳಿಗೆ ಆರೋಗ್ಯ ಸಚಿವ ಹಾಗೂ ಜಿಲ್ಲೆಯ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಚಾಕೊಲೇಟ್ ಹಾಗೂ ಗುಲಾಬಿ ಹೂ ಕೊಟ್ಟು ತರಗತಿಗಳಿಗೆ ಬರಮಾಡಿಕೊಂಡಿದ್ದಾರೆ.

ಚಿಕ್ಕಬಳ್ಳಾಪುರ ನಗರದ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದ ಸಚಿವರು, ವಿದ್ಯಾರ್ಥಿಗಳಿಗೆ ಕೊರೊನಾ ಬಗ್ಗೆ ಆತ್ಮಸ್ಥೈರ್ಯ ತುಂಬಿದರು. ಕೋವಿಡ್ ಬಂದ ನಂತರ ಶಾಲೆಗಳ ಆರಂಭ ಆಗಿರಲಿಲ್ಲ‌. ಶಿಕ್ಷಣ ಕ್ಷೇತ್ರಕ್ಕೆ ಅಪಾರ ನಷ್ಟವಾಗಿದ್ದು, ವಿದ್ಯಾರ್ಥಿಗಳ ಭವಿಷ್ಯ ಮಂಕಾಗಿತ್ತು. ವಿದ್ಯಾರ್ಥಿಗಳ ಆರೋಗ್ಯದ ಜೊತೆಗೆ ಶೈಕ್ಷಣಿಕ ಬದುಕು ರೂಪಿಸೋದು ಸರ್ಕಾರದ ಜವಾಬ್ದಾರಿ ಎಂದರು.

ಶಾಲೆ-ಕಾಲೇಜುಗಳ ಪುನಾರಂಭ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಪ್ರತಿಕ್ರಿಯೆ..

ಕೊರೊನಾ ಮುನ್ನೆಚ್ಚರಿಕಾ ಕ್ರಮಗಳ ಜೊತೆಗೆ ಶಾಲೆಗಳು ಆರಂಭವಾಗುತ್ತಿವೆ. ಪ್ರಾರಂಭದಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಅವಕಾಶ ಕೊಟ್ಟಿದ್ದೆವು. ತದ ನಂತರ ಉನ್ನತ ಶಿಕ್ಷಣಕ್ಕೆ ಅವಕಾಶ ಕೊಟ್ಟಿದ್ದೀವಿ. ಈಗ 9 ರಿಂದ 12ರವರೆಗಿನ ಶಾಲಾ-ಕಾಲೇಜುಗಳ ಆರಂಭ ಮಾಡಲಾಗುತ್ತಿದೆ. ಮಕ್ಕಳಿಗೆ ಮಾನಸಿಕ ಸ್ಥೈರ್ಯ ತುಂಬಿ ನೈತಿಕ ಸ್ಥೈರ್ಯ ತುಂಬಲು ಶಾಲೆಗಳಿಗೆ ಭೇಟಿ ನೀಡುತ್ತಿರುವುದಾಗಿ ತಿಳಿಸಿದರು.

ಒಂದು ಕೊಠಡಿಯಲ್ಲಿ 20 ಮಕ್ಕಳು ಕೂರಲಿದ್ದಾರೆ. ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಸಹ ನೀಡಲಾಗಿದೆ. ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿಗಳ ಪಾಲನೆ ಮಾಡಬೇಕಾಗಿದೆ. ಇನ್ನ, ಸಿಬ್ಬಂದಿ, ಶಿಕ್ಷಕರಲ್ಲಿ ಕೋವಿಡ್ ಗುಣಲಕ್ಷಣಗಳು ಕಂಡು ಬಂದರೆ ತಕ್ಷಣ ಪರೀಕ್ಷೆ ಮಾಡಬೇಕಾಗಿದೆ ಎಂದು ಹೇಳಿದರು.

ಇದೇ ವೇಳೆ ರಾಷ್ಟ್ರೀಯ ಶಿಕ್ಷಣ ನೀತಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಅಪಸ್ವರ ಎತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸ್ವಾತಂತ್ರ್ಯ ಬಂದ ಮೇಲೆ ಹೊಸ ಶಿಕ್ಷಣ ನೀತಿ ಬಿಡುಗಡೆ ಮಾಡುವ ಮೊದಲು 2-3 ವರ್ಷಗಳ ಕಾಲ ಬಹಿರಂಗ ಚರ್ಚೆಗೆ ಅವಕಾಶವಿತ್ತು. ಅದು ಸಾರ್ವಜನಿಕ ದಾಖಲೆ ಆಗಿತ್ತು. ಯಾವುದೇ ಅನುಮಾನ, ಅಪಸ್ವರ ಇದ್ರೆ ಸಲಹೆಗಳನ್ನು ಕೊಡಬಹುದಿತ್ತು ಎಂದರು.

ಎಲ್ಲಾ ವರ್ಗದವರಿಗೂ ನ್ಯಾಯಯುತವಾದ ಶಿಕ್ಷಣ ಸಿಗಬೇಕು. ಶಿಕ್ಷಣ ವಂಚಿತರಾದ ಕೆಳ ವರ್ಗದ ಮಕ್ಕಳಿಗೂ ಕೂಡ ಶಿಕ್ಷ ಸಿಗುವ ನಿಟ್ಟಿನಲ್ಲಿ ಹೊಸ ಶಿಕ್ಷಣ ನೀತಿ ಜಾರಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ತರಗತಿಗಳ ಪ್ರಾರಂಭಕ್ಕೆ ತಾಂತ್ರಿಕ ಸಲಹಾ ಸಮಿತಿ ಜೊತೆ ಚರ್ಚೆ ಮಾಡಿ ಮುಂದಿನ ತೀರ್ಮಾನ ಮಾಡಲಾಗುತ್ತದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಉನ್ನತ ಶಿಕ್ಷಣ ಮಾತ್ರ ರಾಷ್ಟ್ರೀಯ ಶಿಕ್ಷಣ ನೀತಿಗೆ ಸೇರುತ್ತಿದೆ. ಅದರ ಜೊತೆಗೆ ಪ್ರಾಥಮಿಕ ಹಾಗೂ ಮಾಧ್ಯಮ ಶಿಕ್ಷಣ ಸೇರಿದರೆ ಪರಿಣಾಮಕಾರಿ. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ತಿಳಿಸಿದರು.

ಓದಿ: ಕಾಲೇಜಿನಲ್ಲಿ ಶೌಚಾಲಯದ ಕೊರತೆ: ಗ್ರಾ.ಪಂ. ಸದಸ್ಯನಿಗೆ ಸಚಿವ ಗೋಪಾಲಯ್ಯ ತರಾಟೆ

ಚಿಕ್ಕಬಳ್ಳಾಪುರ : 18 ತಿಂಗಳಿನ ನಂತರ ಮಕ್ಕಳಿಗೆ ಇಂದಿನಿಂದ ತರಗತಿಗಳು ಪ್ರಾರಂಭವಾಗುತ್ತಿವೆ. ವಿದ್ಯಾರ್ಥಿಗಳಿಗೆ ಆರೋಗ್ಯ ಸಚಿವ ಹಾಗೂ ಜಿಲ್ಲೆಯ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಚಾಕೊಲೇಟ್ ಹಾಗೂ ಗುಲಾಬಿ ಹೂ ಕೊಟ್ಟು ತರಗತಿಗಳಿಗೆ ಬರಮಾಡಿಕೊಂಡಿದ್ದಾರೆ.

ಚಿಕ್ಕಬಳ್ಳಾಪುರ ನಗರದ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದ ಸಚಿವರು, ವಿದ್ಯಾರ್ಥಿಗಳಿಗೆ ಕೊರೊನಾ ಬಗ್ಗೆ ಆತ್ಮಸ್ಥೈರ್ಯ ತುಂಬಿದರು. ಕೋವಿಡ್ ಬಂದ ನಂತರ ಶಾಲೆಗಳ ಆರಂಭ ಆಗಿರಲಿಲ್ಲ‌. ಶಿಕ್ಷಣ ಕ್ಷೇತ್ರಕ್ಕೆ ಅಪಾರ ನಷ್ಟವಾಗಿದ್ದು, ವಿದ್ಯಾರ್ಥಿಗಳ ಭವಿಷ್ಯ ಮಂಕಾಗಿತ್ತು. ವಿದ್ಯಾರ್ಥಿಗಳ ಆರೋಗ್ಯದ ಜೊತೆಗೆ ಶೈಕ್ಷಣಿಕ ಬದುಕು ರೂಪಿಸೋದು ಸರ್ಕಾರದ ಜವಾಬ್ದಾರಿ ಎಂದರು.

ಶಾಲೆ-ಕಾಲೇಜುಗಳ ಪುನಾರಂಭ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಪ್ರತಿಕ್ರಿಯೆ..

ಕೊರೊನಾ ಮುನ್ನೆಚ್ಚರಿಕಾ ಕ್ರಮಗಳ ಜೊತೆಗೆ ಶಾಲೆಗಳು ಆರಂಭವಾಗುತ್ತಿವೆ. ಪ್ರಾರಂಭದಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಅವಕಾಶ ಕೊಟ್ಟಿದ್ದೆವು. ತದ ನಂತರ ಉನ್ನತ ಶಿಕ್ಷಣಕ್ಕೆ ಅವಕಾಶ ಕೊಟ್ಟಿದ್ದೀವಿ. ಈಗ 9 ರಿಂದ 12ರವರೆಗಿನ ಶಾಲಾ-ಕಾಲೇಜುಗಳ ಆರಂಭ ಮಾಡಲಾಗುತ್ತಿದೆ. ಮಕ್ಕಳಿಗೆ ಮಾನಸಿಕ ಸ್ಥೈರ್ಯ ತುಂಬಿ ನೈತಿಕ ಸ್ಥೈರ್ಯ ತುಂಬಲು ಶಾಲೆಗಳಿಗೆ ಭೇಟಿ ನೀಡುತ್ತಿರುವುದಾಗಿ ತಿಳಿಸಿದರು.

ಒಂದು ಕೊಠಡಿಯಲ್ಲಿ 20 ಮಕ್ಕಳು ಕೂರಲಿದ್ದಾರೆ. ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಸಹ ನೀಡಲಾಗಿದೆ. ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿಗಳ ಪಾಲನೆ ಮಾಡಬೇಕಾಗಿದೆ. ಇನ್ನ, ಸಿಬ್ಬಂದಿ, ಶಿಕ್ಷಕರಲ್ಲಿ ಕೋವಿಡ್ ಗುಣಲಕ್ಷಣಗಳು ಕಂಡು ಬಂದರೆ ತಕ್ಷಣ ಪರೀಕ್ಷೆ ಮಾಡಬೇಕಾಗಿದೆ ಎಂದು ಹೇಳಿದರು.

ಇದೇ ವೇಳೆ ರಾಷ್ಟ್ರೀಯ ಶಿಕ್ಷಣ ನೀತಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಅಪಸ್ವರ ಎತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸ್ವಾತಂತ್ರ್ಯ ಬಂದ ಮೇಲೆ ಹೊಸ ಶಿಕ್ಷಣ ನೀತಿ ಬಿಡುಗಡೆ ಮಾಡುವ ಮೊದಲು 2-3 ವರ್ಷಗಳ ಕಾಲ ಬಹಿರಂಗ ಚರ್ಚೆಗೆ ಅವಕಾಶವಿತ್ತು. ಅದು ಸಾರ್ವಜನಿಕ ದಾಖಲೆ ಆಗಿತ್ತು. ಯಾವುದೇ ಅನುಮಾನ, ಅಪಸ್ವರ ಇದ್ರೆ ಸಲಹೆಗಳನ್ನು ಕೊಡಬಹುದಿತ್ತು ಎಂದರು.

ಎಲ್ಲಾ ವರ್ಗದವರಿಗೂ ನ್ಯಾಯಯುತವಾದ ಶಿಕ್ಷಣ ಸಿಗಬೇಕು. ಶಿಕ್ಷಣ ವಂಚಿತರಾದ ಕೆಳ ವರ್ಗದ ಮಕ್ಕಳಿಗೂ ಕೂಡ ಶಿಕ್ಷ ಸಿಗುವ ನಿಟ್ಟಿನಲ್ಲಿ ಹೊಸ ಶಿಕ್ಷಣ ನೀತಿ ಜಾರಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ತರಗತಿಗಳ ಪ್ರಾರಂಭಕ್ಕೆ ತಾಂತ್ರಿಕ ಸಲಹಾ ಸಮಿತಿ ಜೊತೆ ಚರ್ಚೆ ಮಾಡಿ ಮುಂದಿನ ತೀರ್ಮಾನ ಮಾಡಲಾಗುತ್ತದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಉನ್ನತ ಶಿಕ್ಷಣ ಮಾತ್ರ ರಾಷ್ಟ್ರೀಯ ಶಿಕ್ಷಣ ನೀತಿಗೆ ಸೇರುತ್ತಿದೆ. ಅದರ ಜೊತೆಗೆ ಪ್ರಾಥಮಿಕ ಹಾಗೂ ಮಾಧ್ಯಮ ಶಿಕ್ಷಣ ಸೇರಿದರೆ ಪರಿಣಾಮಕಾರಿ. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ತಿಳಿಸಿದರು.

ಓದಿ: ಕಾಲೇಜಿನಲ್ಲಿ ಶೌಚಾಲಯದ ಕೊರತೆ: ಗ್ರಾ.ಪಂ. ಸದಸ್ಯನಿಗೆ ಸಚಿವ ಗೋಪಾಲಯ್ಯ ತರಾಟೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.