ಚಿಂತಾಮಣಿ : ತಾಲೂಕಿನ ಆನೂರು ಗ್ರಾಮದಲ್ಲಿ ವಿವಿಧ ಕಾಮಗಾರಿಗಳ ಗುದ್ದಲಿ ಪೂಜಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕ್ಷೇತ್ರದ ಶಾಸಕ ಜೆ ಕೆ ಕೃಷ್ಣಾರೆಡ್ಡಿ ಪೂಜೆ ನೆರವೇರಿಸಿದ ನಂತರ ಅಲ್ಲಿನ ಚರಂಡಿಗಳಲ್ಲಿ ಕಸ-ಕಡ್ಡಿಗಳು ಕಣ್ಣಾರೆ ಕಂಡು ಪಿಡಿಒಗೆ ಸಖತ್ ಕ್ಲಾಸ್ ತಗೆದುಕೊಂಡರು.
ಗ್ರಾಮದಲ್ಲಿ ಸ್ವಚ್ಛತೆ ಮರೆಯಾಗಿದ್ದನ್ನು ಗಮನಿಸಿದ ಶಾಸಕ ವಾಸನೆ ಅಲ್ಲಿನ ಪಿಡಿಒ ಮೇಲೆ ಕಿಡಿ ಕಾರಿದರು. ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದರೂ ಗ್ರಾಮಗಳಲ್ಲಿ ತಿಂಗಳಿನಿಂದ ಚರಂಡಿಗಳನ್ನು ಸ್ವಚ್ಛತೆ ಮಾಡದೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದರಿಂದ ಕೂಡಲೇ ಸ್ವಚ್ಛ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.