ETV Bharat / state

ಬಾಗೇಪಲ್ಲಿ ವ್ಯಾಪಾರಿ ಮಳಿಗೆಯಲ್ಲಿ ವಿದ್ಯುತ್‌ ಅವಘಡ​: ಸುಟ್ಟುಹೋದ ನೋಟಿನ ಕಂತೆಗಳು

author img

By

Published : Jul 18, 2021, 6:49 PM IST

ಬಾಗೇಪಲ್ಲಿಯ ಮಾರಾಟ ಮಳಿಗೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಅಂಗಡಿಯಲ್ಲಿದ್ದ ಹಣ ಸೇರಿದಂತೆ ಬಹುತೇಕ ಸಾಮಗ್ರಿಗಳು ಸುಟ್ಟು ಕರಕಲಾಗಿವೆ.

Money
ಅಂಗಡಿಯಲ್ಲಿ ಶಾರ್ಟ್​ ಸರ್ಕ್ಯೂಟ್​

ಚಿಕ್ಕಬಳ್ಳಾಪುರ/ಬಾಗೇಪಲ್ಲಿ: ಪಟ್ಟಣದಲ್ಲಿ ಸುರಿದ ಭಾರೀ ಮಳೆಗೆ ಶಾರ್ಟ್​ ಸರ್ಕ್ಯೂಟ್​ನಿಂದ ಉಂಟಾದ ಅಗ್ನಿ ಅವಘಡದಲ್ಲಿ ಅಂಗಡಿಯಲ್ಲಿಟ್ಟಿದ್ದ ಕಂತೆ ಕಂತೆ ಹಣ ಬೆಂಕಿಯಲ್ಲಿ ಸುಟ್ಟು ಕರಕಲಾದ ಘಟನೆ ಪಟ್ಟಣದ ಡಿವಿಜಿ ಮುಖ್ಯರಸ್ತೆಯಲ್ಲಿರುವ ಬಾಲಾಜಿ ಪ್ರಾವಿಜನ್‌ ಸ್ಟೋರ್‌ನಲ್ಲಿ ನಡೆದಿದೆ.

Money
ಅಂಗಡಿಯಲ್ಲಿ ಶಾರ್ಟ್​ ಸರ್ಕ್ಯೂಟ್​

ಬೆಂಕಿಯಿಂದಾಗಿ ಮಳಿಗೆಯಲ್ಲಿದ್ದ ಕಂಪ್ಯೂಟರ್ ಮತ್ತು ಕರೆನ್ಸಿ ಎಣಿಕೆ ಯಂತ್ರದ ಜತೆಗೆ ಅಂಗಡಿಯಲ್ಲಿರುವ ,ಆಹಾರ ಸಾಮಗ್ರಿಗಳು,ಇತರೆ ಸರಕುಗಳೂ ಬಹುತೇಕ ಸುಟ್ಟು ಭಸ್ಮವಾಗಿವೆ. 500 ರೂ. ಮುಖಬೆಲೆ ಹಣದ ಕಂತೆಗಳು ಬೆಂಕಿಯಲ್ಲಿ ಬಹುತೇಕ ಬೆಂದು ಹೋಗಿವೆ. ಒಟ್ಟಾರೆ 10 ರಿಂದ 15 ಲಕ್ಷ ರೂ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಬಾಗೇಪಲ್ಲಿ ಪಟ್ಟಣದ ಅತಿದೊಡ್ಡ ಸಗಟು ಮಾರಾಟ ಮಳಿಗೆಗಳಲ್ಲಿ ಬಾಲಾಜಿ ಪ್ರಾವಿಜನ್‌ ಸ್ಟೋರ್‌ ಸಹ ಒಂದಾಗಿದ್ದು, ದಿನಕ್ಕೆ ಲಕ್ಷಾಂತರ ರೂ. ವ್ಯವಹಾರ ನಡೆಯುತ್ತದೆ.

ಅಗ್ನಿಶಾಮಕ ಸಿಬ್ಬಂದಿಗೆ ಗಾಯ:

ಬೆಂಕಿ ನಂದಿಸುವ ಕಾರ್ಯಾಚರಣೆ ವೇಳೆ ಅಗ್ನಿಶಾಮಕ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಿಬ್ಬಂದಿಯಾದ ನಾರಾಯಣಸ್ವಾಮಿ ಅವರ ಮೇಲೆ ಮೇಲ್ಛಾವಣಿಯ ಪಿಓಪಿ ಬಿದ್ದು ಅವರಿಗೆ ಸಣ್ಣಪುಟ್ಟ ಗಾಯವಾದರೆ, ಜಯಪ್ಪ ನಾಯಕ್ ಎಂಬುವವರ ಬೆರಳಿಗೆ ಮೊಳೆ ಚುಚ್ಚಿ ರಕ್ತಸ್ರಾವವಾಗಿದೆ. ಇದ್ಯಾವುದನ್ನೂ ಲೆಕ್ಕಿಸದೆ ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಚಿಕ್ಕಬಳ್ಳಾಪುರ/ಬಾಗೇಪಲ್ಲಿ: ಪಟ್ಟಣದಲ್ಲಿ ಸುರಿದ ಭಾರೀ ಮಳೆಗೆ ಶಾರ್ಟ್​ ಸರ್ಕ್ಯೂಟ್​ನಿಂದ ಉಂಟಾದ ಅಗ್ನಿ ಅವಘಡದಲ್ಲಿ ಅಂಗಡಿಯಲ್ಲಿಟ್ಟಿದ್ದ ಕಂತೆ ಕಂತೆ ಹಣ ಬೆಂಕಿಯಲ್ಲಿ ಸುಟ್ಟು ಕರಕಲಾದ ಘಟನೆ ಪಟ್ಟಣದ ಡಿವಿಜಿ ಮುಖ್ಯರಸ್ತೆಯಲ್ಲಿರುವ ಬಾಲಾಜಿ ಪ್ರಾವಿಜನ್‌ ಸ್ಟೋರ್‌ನಲ್ಲಿ ನಡೆದಿದೆ.

Money
ಅಂಗಡಿಯಲ್ಲಿ ಶಾರ್ಟ್​ ಸರ್ಕ್ಯೂಟ್​

ಬೆಂಕಿಯಿಂದಾಗಿ ಮಳಿಗೆಯಲ್ಲಿದ್ದ ಕಂಪ್ಯೂಟರ್ ಮತ್ತು ಕರೆನ್ಸಿ ಎಣಿಕೆ ಯಂತ್ರದ ಜತೆಗೆ ಅಂಗಡಿಯಲ್ಲಿರುವ ,ಆಹಾರ ಸಾಮಗ್ರಿಗಳು,ಇತರೆ ಸರಕುಗಳೂ ಬಹುತೇಕ ಸುಟ್ಟು ಭಸ್ಮವಾಗಿವೆ. 500 ರೂ. ಮುಖಬೆಲೆ ಹಣದ ಕಂತೆಗಳು ಬೆಂಕಿಯಲ್ಲಿ ಬಹುತೇಕ ಬೆಂದು ಹೋಗಿವೆ. ಒಟ್ಟಾರೆ 10 ರಿಂದ 15 ಲಕ್ಷ ರೂ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಬಾಗೇಪಲ್ಲಿ ಪಟ್ಟಣದ ಅತಿದೊಡ್ಡ ಸಗಟು ಮಾರಾಟ ಮಳಿಗೆಗಳಲ್ಲಿ ಬಾಲಾಜಿ ಪ್ರಾವಿಜನ್‌ ಸ್ಟೋರ್‌ ಸಹ ಒಂದಾಗಿದ್ದು, ದಿನಕ್ಕೆ ಲಕ್ಷಾಂತರ ರೂ. ವ್ಯವಹಾರ ನಡೆಯುತ್ತದೆ.

ಅಗ್ನಿಶಾಮಕ ಸಿಬ್ಬಂದಿಗೆ ಗಾಯ:

ಬೆಂಕಿ ನಂದಿಸುವ ಕಾರ್ಯಾಚರಣೆ ವೇಳೆ ಅಗ್ನಿಶಾಮಕ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಿಬ್ಬಂದಿಯಾದ ನಾರಾಯಣಸ್ವಾಮಿ ಅವರ ಮೇಲೆ ಮೇಲ್ಛಾವಣಿಯ ಪಿಓಪಿ ಬಿದ್ದು ಅವರಿಗೆ ಸಣ್ಣಪುಟ್ಟ ಗಾಯವಾದರೆ, ಜಯಪ್ಪ ನಾಯಕ್ ಎಂಬುವವರ ಬೆರಳಿಗೆ ಮೊಳೆ ಚುಚ್ಚಿ ರಕ್ತಸ್ರಾವವಾಗಿದೆ. ಇದ್ಯಾವುದನ್ನೂ ಲೆಕ್ಕಿಸದೆ ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.