ಚಿಕ್ಕಬಳ್ಳಾಪುರ: ನಂದಿ ಗಿರಿಧಾಮವನ್ನು ಅಂತಾರಾಷ್ಟ್ರೀಯ ಪ್ರವಾಸೋದ್ಯಮ ತಾಣವಾಗಿ ಗುರುತಿಸುವ ಸಲುವಾಗಿ ಸಚಿವ ಸುಧಾಕರ್ ಇಂದು ನಂದಿ ಬೆಟ್ಟದಲ್ಲಿ ಅಧಿಕಾರಿಗಳ ಸಭೆ ನಡೆಸಿದರು.
ಬಳಿಕ ಮಾಧ್ಯಮಗಳೊಂದಿಗೆ ಮಾತಾನಾಡಿದ ಅವರು, ನಂದಿ ಗಿರಿಧಾಮಕ್ಕೆ ಐತಿಹಾಸಿಕವಾಗಿ ಹಾಗೂ ಧಾರ್ಮಿಕವಾಗಿ ಸಾಕಷ್ಟು ಇತಿಹಾಸವಿದೆ. ಇದರ ಸಲುವಾಗಿಯೇ ಇಲ್ಲಿನ ಅಭಿವೃದ್ಧಿಗಾಗಿ ಸರ್ಕಾರ 10 ಕೋಟಿ ರೂ. ಅನುದಾನ ನೀಡಿದೆ ಎಂದು ತಿಳಿಸಿದರು.
ಕಳೆದ 15 ವರ್ಷಗಳಿಂದ ಪ್ರವಾಸಿಗರು ಹಾಗೂ ಸ್ಥಳೀಯರು ರೋಪ್ ವೇ ನಿರ್ಮಾಣಕ್ಕೆ ಸಾಕಷ್ಟು ನಿರೀಕ್ಷೆ ಹೊಂದಿದ್ದರು. ನಾನು ಸಹ ಇದಕ್ಕಾಗಿ ಸಾಕಷ್ಟು ಪ್ರಯತ್ನ ಮಾಡಿದ್ದೆ. ಇದೀಗ ಮುಖ್ಯಮಂತ್ರಿ ಯಡಿಯೂರಪ್ಪನವರು ನಂದಿ ಗಿರಿಧಾಮದ ಅಭಿವೃದ್ಧಿಗೆ ಭರವಸೆ ಕೊಟ್ಟು ರೋಪ್ ವೇ ಕನಸು ನನಸು ಮಾಡಲಿದ್ದಾರೆಂದು ತಿಳಿಸಿದರು.