ETV Bharat / state

ಸಾಮೂಹಿಕ ದಯಾಮರಣಕ್ಕೆ ಒಪ್ಪಿಗೆ ನೀಡಿ.. ನರಸಿಂಹರಾಜಪುರ ತಾಲೂಕಿನ ಗ್ರಾಮಸ್ಥರಿಂದ ರಾಷ್ಟ್ರಪತಿಗೆ ಪತ್ರ

author img

By

Published : Jan 12, 2022, 2:01 PM IST

ಭದ್ರಾ ಹುಲಿ ಯೋಜನೆಯ ಬಫರ್ ಝೋನ್​ಗೆ ಸೇರಿಸುವುದನ್ನು ವಿರೋಧಿಸಿ ನರಸಿಂಹರಾಜಪುರ ತಾಲೂಕಿನ ಗ್ರಾಮಸ್ಥರು ಸಾಮೂಹಿಕ ದಯಾಮರಣಕ್ಕೆ ಆಗ್ರಹಿಸಿ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.

nr-pura-taluk-villager-wrote-letter-to-president-for-euthanasia
ನರಸಿಂಹರಾಜಪುರ ತಾಲೂಕಿನ ಗ್ರಾಮಸ್ಥರಿಂದ ರಾಷ್ಟ್ರಪತಿಗೆ ಪತ್ರ

ಚಿಕ್ಕಮಗಳೂರು: ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಸಾರ್ಯ, ಸಾಲೂರು, ಹೆನ್ನಂಗಿ, ಬೆಳ್ಳಂಗಿ, ಅಳೆಹಳ್ಳಿ, ಆಡುವಳ್ಳಿ, ಕೊಳಲೆ, ಮುದುಗುಣಿ, ಬಾಳೆಗದ್ದೆ, ನಂದಿಗಾವೆ, ಬೈರಾಪುರ ಗ್ರಾಮಗಳನ್ನು ಭದ್ರಾ ಹುಲಿ ಯೋಜನೆಯ ಬಫರ್ ಝೋನ್​ಗೆ ಸೇರಿಸುವುದನ್ನು ವಿರೋಧಿಸಿ ಅಲ್ಲಿನ ಗ್ರಾಮಸ್ಥರು ಸಾಮೂಹಿಕ ದಯಾಮರಣಕ್ಕೆ ಒಪ್ಪಿಗೆ ನೀಡುವಂತೆ ಆಗ್ರಹಿಸಿ ರಾಷ್ಟ್ರಪತಿಗಳಿಗೆ ಅಂಚೆ ಪತ್ರ ಬರೆದಿದ್ದಾರೆ.

ಗ್ರಾಮಸ್ಥರ ಅಳಲನ್ನು ಕೇಳಲು ಅರಣ್ಯ ಇಲಾಖೆ ಮತ್ತು ಸರ್ಕಾರ ಸಿದ್ಧವಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆಯೂ ಕೂಡ ಗ್ರಾಮಸ್ಥರು ಹುಲಿ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದರು.

NR pura taluk villager wrote letter to president for Euthanasia
ರಾಷ್ಟ್ರಪತಿಗೆ ಪತ್ರ

ಇದನ್ನೂ ಓದಿ: 18ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿದ ಅಳಿಲಿಗೆ ದಯಾಮರಣ ಶಿಕ್ಷೆ

ಈ ಹಿಂದೆ ಹಲವಾರು ಯೋಜನೆಗಳ ಮೂಲಕ ಜನರನ್ನು ಒಕ್ಕಲೆಬ್ಬಿಸಿ ಗ್ರಾಮಗಳಲ್ಲಿ ಪುನರ್ ವಸತಿ ಕಲ್ಪಿಸಲಾಗಿದೆ. ಆದರೆ, ಮೂಲ ಸೌಕರ್ಯ ಒದಗಿಸಲಾಗದ ಸರ್ಕಾರವು ನಮ್ಮ ಅನುಮತಿ ಇಲ್ಲದೇ ಮತ್ತೊಮ್ಮೆ ನಮ್ಮನ್ನು ಅತಂತ್ರ ಸ್ಥಿತಿಗೆ ತಂದು ನಿಲ್ಲಿಸಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಈ ಯೋಜನೆ ತಡೆ ಹಿಡಿಯಬೇಕು, ಇಲ್ಲವೇ ಸಾಮೂಹಿಕ ದಯಾಮರಣಕ್ಕೆ ಒಪ್ಪಿಗೆ ನೀಡಿ ಎಂದು ರೈತರು, ಗ್ರಾಮಸ್ಥರು ರಾಷ್ಟ್ರಪತಿಗೆ ಪತ್ರದ ಮೂಲಕ ಮನವಿ ಮಾಡಿದ್ಧಾರೆ.

ಇದನ್ನೂ ಓದಿ: ರಸ್ತೆ ಅಪಘಾತದಲ್ಲಿ ಮೃತಪಟ್ಟ ಅಣ್ಣನ ಮೃತದೇಹ ನೋಡಿ ಹೃದಯಾಘಾತದಿಂದ ತಂಗಿಯೂ ಸಾವು

ಚಿಕ್ಕಮಗಳೂರು: ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಸಾರ್ಯ, ಸಾಲೂರು, ಹೆನ್ನಂಗಿ, ಬೆಳ್ಳಂಗಿ, ಅಳೆಹಳ್ಳಿ, ಆಡುವಳ್ಳಿ, ಕೊಳಲೆ, ಮುದುಗುಣಿ, ಬಾಳೆಗದ್ದೆ, ನಂದಿಗಾವೆ, ಬೈರಾಪುರ ಗ್ರಾಮಗಳನ್ನು ಭದ್ರಾ ಹುಲಿ ಯೋಜನೆಯ ಬಫರ್ ಝೋನ್​ಗೆ ಸೇರಿಸುವುದನ್ನು ವಿರೋಧಿಸಿ ಅಲ್ಲಿನ ಗ್ರಾಮಸ್ಥರು ಸಾಮೂಹಿಕ ದಯಾಮರಣಕ್ಕೆ ಒಪ್ಪಿಗೆ ನೀಡುವಂತೆ ಆಗ್ರಹಿಸಿ ರಾಷ್ಟ್ರಪತಿಗಳಿಗೆ ಅಂಚೆ ಪತ್ರ ಬರೆದಿದ್ದಾರೆ.

ಗ್ರಾಮಸ್ಥರ ಅಳಲನ್ನು ಕೇಳಲು ಅರಣ್ಯ ಇಲಾಖೆ ಮತ್ತು ಸರ್ಕಾರ ಸಿದ್ಧವಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆಯೂ ಕೂಡ ಗ್ರಾಮಸ್ಥರು ಹುಲಿ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದರು.

NR pura taluk villager wrote letter to president for Euthanasia
ರಾಷ್ಟ್ರಪತಿಗೆ ಪತ್ರ

ಇದನ್ನೂ ಓದಿ: 18ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿದ ಅಳಿಲಿಗೆ ದಯಾಮರಣ ಶಿಕ್ಷೆ

ಈ ಹಿಂದೆ ಹಲವಾರು ಯೋಜನೆಗಳ ಮೂಲಕ ಜನರನ್ನು ಒಕ್ಕಲೆಬ್ಬಿಸಿ ಗ್ರಾಮಗಳಲ್ಲಿ ಪುನರ್ ವಸತಿ ಕಲ್ಪಿಸಲಾಗಿದೆ. ಆದರೆ, ಮೂಲ ಸೌಕರ್ಯ ಒದಗಿಸಲಾಗದ ಸರ್ಕಾರವು ನಮ್ಮ ಅನುಮತಿ ಇಲ್ಲದೇ ಮತ್ತೊಮ್ಮೆ ನಮ್ಮನ್ನು ಅತಂತ್ರ ಸ್ಥಿತಿಗೆ ತಂದು ನಿಲ್ಲಿಸಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಈ ಯೋಜನೆ ತಡೆ ಹಿಡಿಯಬೇಕು, ಇಲ್ಲವೇ ಸಾಮೂಹಿಕ ದಯಾಮರಣಕ್ಕೆ ಒಪ್ಪಿಗೆ ನೀಡಿ ಎಂದು ರೈತರು, ಗ್ರಾಮಸ್ಥರು ರಾಷ್ಟ್ರಪತಿಗೆ ಪತ್ರದ ಮೂಲಕ ಮನವಿ ಮಾಡಿದ್ಧಾರೆ.

ಇದನ್ನೂ ಓದಿ: ರಸ್ತೆ ಅಪಘಾತದಲ್ಲಿ ಮೃತಪಟ್ಟ ಅಣ್ಣನ ಮೃತದೇಹ ನೋಡಿ ಹೃದಯಾಘಾತದಿಂದ ತಂಗಿಯೂ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.