ETV Bharat / state

ತಾಲೂಕು ಕಚೇರಿಯೊಳಗೆ ನುಗ್ಗಿದ ಮಳೆ ನೀರು: ದಾಖಲೆಗಳು ನೀರಿಗಾಹುತಿ - Shidlaghatta government offices

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನಲ್ಲಿ ಭಾರೀ ಮಳೆ ಸುರಿದು ನೀರು ಜನನ- ಮರಣ ಕಛೇರಿ ಹಾಗೂ ಆಹಾರ ಇಲಾಖೆಯ ಕೊಠಡಿಗಳಿಗೆ ನುಗ್ಗಿದ ಪರಿಣಾಮ ದಾಖಲೆಗಳು ನೀರಿಗಾಹುತಿಯಾದ ಘಟನೆ ನಡೆದಿದೆ.

Rainwater rushed inside taluk office as a result records got wet
ತಾಲೂಕು ಕಚೇರಿಯೊಳಗೆ ನುಗ್ಗಿದ ಮಳೆ ನೀರು: ದಾಖಲೆಗಳು ನೀರಿಗಾಹುತಿ..
author img

By

Published : Oct 1, 2020, 7:30 PM IST

ಶಿಡ್ಲಘಟ್ಟ(ಚಿಕ್ಕಬಳ್ಳಾಪುರ): ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ತಾಲೂಕಿನ ಜನನ- ಮರಣ ಕಛೇರಿ ಹಾಗೂ ಆಹಾರ ಇಲಾಖೆಯ ಕೊಠಡಿಗಳಿಗೆ ನೀರು ನುಗ್ಗಿದ ಪರಿಣಾಮ ದಾಖಲೆಗಳು ನೀರಿಗಾಹುತಿಯಾದ ಘಟನೆ ನಡೆದಿದೆ.

ಮಂಗಳವಾರ ರಾತ್ರಿ ಸುರಿದ ಮಳೆಗೆ ಶಿಡ್ಲಘಟ್ಟದ ತಾಲ್ಲೂಕು ಕಚೇರಿಯ ಆಹಾರ ಇಲಾಖೆ ಕೊಠಡಿ ಹಾಗೂ ಜನನ ಮರಣದ ಕೊಠಡಿಯೊಳಗೆ ನೀರು ನುಗ್ಗಿ ಕಚೇರಿಯೊಳಗಿದ್ದ ಕಂಪ್ಯೂಟರ್‌ಗಳ ಸೇರಿದಂತೆ ಎಲ್ಲಾ ದಾಖಲೆಗಳು ನೀರಿಗಾಹುತಿಯಾಗಿವೆ. ಇನ್ನೂ ಕಚೇರಿ ಸ್ವಚ್ಛ ಮಾಡುವಷ್ಟರಲ್ಲಿ ಸಿಬ್ಬಂದಿ ಹರಸಾಹಸ ಪಡುವಂತಾಗಿತ್ತು.

ಆಹಾರ ಇಲಾಖೆಯ ಕೊಠಡಿಯಲ್ಲಿನ ಕಂಪ್ಯೂಟರ್ ಗಳು ಪೂರ್ತಿ ನೆನೆದಿದ್ದು, ಶಾರ್ಟ್ ಸರ್ಕ್ಯೂಟ್ ಭಯದಿಂದ ಆನ್​ ಮಾಡಲೂ ಹಿಂದೆ ಮುಂದೆ ನೋಡುವಂತಾಗಿದೆ. ಆದರೆ, ಮೇಲಾಧಿಕಾರಿಗಳು ಮಾತ್ರ ತಮಗೇನು ಸಂಭಂದವಿಲ್ಲವೆಂಬಂತೆ ನಿರ್ಲಕ್ಷ್ಯ ಧೋರಣೆ ತಳೆದಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಶಿಡ್ಲಘಟ್ಟ(ಚಿಕ್ಕಬಳ್ಳಾಪುರ): ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ತಾಲೂಕಿನ ಜನನ- ಮರಣ ಕಛೇರಿ ಹಾಗೂ ಆಹಾರ ಇಲಾಖೆಯ ಕೊಠಡಿಗಳಿಗೆ ನೀರು ನುಗ್ಗಿದ ಪರಿಣಾಮ ದಾಖಲೆಗಳು ನೀರಿಗಾಹುತಿಯಾದ ಘಟನೆ ನಡೆದಿದೆ.

ಮಂಗಳವಾರ ರಾತ್ರಿ ಸುರಿದ ಮಳೆಗೆ ಶಿಡ್ಲಘಟ್ಟದ ತಾಲ್ಲೂಕು ಕಚೇರಿಯ ಆಹಾರ ಇಲಾಖೆ ಕೊಠಡಿ ಹಾಗೂ ಜನನ ಮರಣದ ಕೊಠಡಿಯೊಳಗೆ ನೀರು ನುಗ್ಗಿ ಕಚೇರಿಯೊಳಗಿದ್ದ ಕಂಪ್ಯೂಟರ್‌ಗಳ ಸೇರಿದಂತೆ ಎಲ್ಲಾ ದಾಖಲೆಗಳು ನೀರಿಗಾಹುತಿಯಾಗಿವೆ. ಇನ್ನೂ ಕಚೇರಿ ಸ್ವಚ್ಛ ಮಾಡುವಷ್ಟರಲ್ಲಿ ಸಿಬ್ಬಂದಿ ಹರಸಾಹಸ ಪಡುವಂತಾಗಿತ್ತು.

ಆಹಾರ ಇಲಾಖೆಯ ಕೊಠಡಿಯಲ್ಲಿನ ಕಂಪ್ಯೂಟರ್ ಗಳು ಪೂರ್ತಿ ನೆನೆದಿದ್ದು, ಶಾರ್ಟ್ ಸರ್ಕ್ಯೂಟ್ ಭಯದಿಂದ ಆನ್​ ಮಾಡಲೂ ಹಿಂದೆ ಮುಂದೆ ನೋಡುವಂತಾಗಿದೆ. ಆದರೆ, ಮೇಲಾಧಿಕಾರಿಗಳು ಮಾತ್ರ ತಮಗೇನು ಸಂಭಂದವಿಲ್ಲವೆಂಬಂತೆ ನಿರ್ಲಕ್ಷ್ಯ ಧೋರಣೆ ತಳೆದಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.