ETV Bharat / state

ಹಾಸ್ಟೆಲ್​ಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್; ಅವ್ಯವಸ್ಥೆ ಹಿನ್ನೆಲೆಯಲ್ಲಿ ಪಾಲಕಿಗೆ ಕ್ಲಾಸ್

ಬೆಳ್ಳಂಬೆಳಗ್ಗೆ ತಹಶೀಲ್ದಾರ್‌ ವಿಶ್ವನಾಥ್ ವಿದ್ಯಾರ್ಥಿನಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

author img

By

Published : Sep 14, 2019, 8:25 PM IST

ಹಾಸ್ಟೆಲ್​ಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

ಚಿಕ್ಕಬಳ್ಳಾಪುರ: ಚಿಂತಾಮಣಿ ನಗರದ ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ತಾಲೂಕು ದಂಡಾಧಿಕಾರಿಗಳು ದಿಢೀರ್ ಭೇಟಿ ನೀಡಿ ನಿಲಯದ ಅವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಹಾಸ್ಟೆಲ್​ಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

ಬೆಳ್ಳಂಬೆಳಗ್ಗೆ ತಹಶೀಲ್ದಾರ್‌ ವಿಶ್ವನಾಥ್ ಹಾಸ್ಟೆಲ್​ನಲ್ಲಿನ ಸ್ವಚ್ಛತೆ, ನಿಲಯ ನಿರ್ವಹಣೆ ಮತ್ತು ಮೂಲಭೂತ ಸೌಕರ್ಯಗಳು ಸೇರಿದಂತೆ ಇನ್ನಿತರ ಅವಶ್ಯಕತೆಗಳ ಬಗ್ಗೆ ಪರಿಶೀಲನೆ ಮಾಡಿದ್ದು, ನಿರ್ವಹಣೆಯನ್ನು ಕಂಡು ಬೆರಗಾಗಿದ್ದಾರೆ.

ಬಡ ಮಕ್ಕಳಿಗೆ ಕಡ್ಡಾಯ ಶಿಕ್ಷಣ ನೀಡುವ ಉದ್ದೇಶದಿಂದ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಗ್ರಾಮೀಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪನೆ ಮಾಡಿ ಹತ್ತು ಹಲವು ಸೌಲಭ್ಯಗಳನ್ನು ನೀಡುತ್ತಿದೆ. ನಗರದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ ನಿಲಯದಲ್ಲಿ ನಿಲಯ ಪಾಲಕರ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳಿಗೆ ಮೂಲಭೂತ ಸೌಲಭ್ಯಗಳು ಇಲ್ಲದರಿರುವುದು ಖೇದಕರ ಸಂಗತಿಯಾಗಿದೆ ಎಂದರು.

ವಿದ್ಯಾರ್ಥಿನಿಯರ ನಿಲಯದಲ್ಲಿ ಎಷ್ಟು ಮಕ್ಕಳಿದ್ದಾರೆ, ನಿಲಯಕ್ಕೆ ನೀಡಿರುವ ಸೌಲಭ್ಯಗಳ ಬಗ್ಗೆ ಸಕ್ರಿಯವಾದ ದಾಖಲೆಗಳ ನಿರ್ವಹಣೆ ನಿರ್ವಹಣೆ ಮಾಡಿಲ್ಲ. ಮಕ್ಕಳ ಸಂಖ್ಯೆ ಕಡಿಮೆ ಇದ್ದರೂ ಹಾಜರಾತಿ ಪುಸ್ತಕದಲ್ಲಿ ಮಾತ್ರ 186 ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಸಂಖ್ಯೆ ತೋರಿಸುವ ಮೂಲಕ ಸರ್ಕರಕ್ಕೆ ತಪ್ಪು ಲೆಕ್ಕಗಳನ್ನು ನೀಡುತ್ತಿರುವ ಬಗ್ಗೆ ಬೇಸರಗೊಡ ತಹಶೀಲ್ದಾರ್‌ ನಿಲಯ ಪಾಲಕಿ ಶೈಲಜಾ ಅವರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.

2019 ನೇ ವರ್ಷದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಇದುವರೆಗೆ ಭೇಟಿ ನೀಡಿಲ್ಲ. ಪುಸ್ತಕದಲ್ಲಿ ಸಮಾಜ ಕಲ್ಯಾಣ ಇಲಾಖೆಯವರು ಭೇಟಿ ನೀಡಿರುವ ಬರಹಗಳು ಇಲ್ಲ ಎಂದು ಜಿಲ್ಲಾಧಿಕಾರಿಗಳಿಗೆ ತಹಶೀಲ್ದಾರ್ ವಿಶ್ವನಾಥ್ ಪತ್ರ ಬರೆದಿದ್ದಾರೆ.

ಚಿಕ್ಕಬಳ್ಳಾಪುರ: ಚಿಂತಾಮಣಿ ನಗರದ ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ತಾಲೂಕು ದಂಡಾಧಿಕಾರಿಗಳು ದಿಢೀರ್ ಭೇಟಿ ನೀಡಿ ನಿಲಯದ ಅವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಹಾಸ್ಟೆಲ್​ಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

ಬೆಳ್ಳಂಬೆಳಗ್ಗೆ ತಹಶೀಲ್ದಾರ್‌ ವಿಶ್ವನಾಥ್ ಹಾಸ್ಟೆಲ್​ನಲ್ಲಿನ ಸ್ವಚ್ಛತೆ, ನಿಲಯ ನಿರ್ವಹಣೆ ಮತ್ತು ಮೂಲಭೂತ ಸೌಕರ್ಯಗಳು ಸೇರಿದಂತೆ ಇನ್ನಿತರ ಅವಶ್ಯಕತೆಗಳ ಬಗ್ಗೆ ಪರಿಶೀಲನೆ ಮಾಡಿದ್ದು, ನಿರ್ವಹಣೆಯನ್ನು ಕಂಡು ಬೆರಗಾಗಿದ್ದಾರೆ.

ಬಡ ಮಕ್ಕಳಿಗೆ ಕಡ್ಡಾಯ ಶಿಕ್ಷಣ ನೀಡುವ ಉದ್ದೇಶದಿಂದ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಗ್ರಾಮೀಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪನೆ ಮಾಡಿ ಹತ್ತು ಹಲವು ಸೌಲಭ್ಯಗಳನ್ನು ನೀಡುತ್ತಿದೆ. ನಗರದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ ನಿಲಯದಲ್ಲಿ ನಿಲಯ ಪಾಲಕರ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳಿಗೆ ಮೂಲಭೂತ ಸೌಲಭ್ಯಗಳು ಇಲ್ಲದರಿರುವುದು ಖೇದಕರ ಸಂಗತಿಯಾಗಿದೆ ಎಂದರು.

ವಿದ್ಯಾರ್ಥಿನಿಯರ ನಿಲಯದಲ್ಲಿ ಎಷ್ಟು ಮಕ್ಕಳಿದ್ದಾರೆ, ನಿಲಯಕ್ಕೆ ನೀಡಿರುವ ಸೌಲಭ್ಯಗಳ ಬಗ್ಗೆ ಸಕ್ರಿಯವಾದ ದಾಖಲೆಗಳ ನಿರ್ವಹಣೆ ನಿರ್ವಹಣೆ ಮಾಡಿಲ್ಲ. ಮಕ್ಕಳ ಸಂಖ್ಯೆ ಕಡಿಮೆ ಇದ್ದರೂ ಹಾಜರಾತಿ ಪುಸ್ತಕದಲ್ಲಿ ಮಾತ್ರ 186 ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಸಂಖ್ಯೆ ತೋರಿಸುವ ಮೂಲಕ ಸರ್ಕರಕ್ಕೆ ತಪ್ಪು ಲೆಕ್ಕಗಳನ್ನು ನೀಡುತ್ತಿರುವ ಬಗ್ಗೆ ಬೇಸರಗೊಡ ತಹಶೀಲ್ದಾರ್‌ ನಿಲಯ ಪಾಲಕಿ ಶೈಲಜಾ ಅವರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.

2019 ನೇ ವರ್ಷದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಇದುವರೆಗೆ ಭೇಟಿ ನೀಡಿಲ್ಲ. ಪುಸ್ತಕದಲ್ಲಿ ಸಮಾಜ ಕಲ್ಯಾಣ ಇಲಾಖೆಯವರು ಭೇಟಿ ನೀಡಿರುವ ಬರಹಗಳು ಇಲ್ಲ ಎಂದು ಜಿಲ್ಲಾಧಿಕಾರಿಗಳಿಗೆ ತಹಶೀಲ್ದಾರ್ ವಿಶ್ವನಾಥ್ ಪತ್ರ ಬರೆದಿದ್ದಾರೆ.

Intro:ಚಿಂತಾಮಣಿ ನಗರದ ಬಿ.ಆರ್ ಅಂಬೇಡ್ಕರ್ ಮೇಟ್ರಿಕ್ ಪೂರ್ವ ವಿದ್ಯಾರ್ಥಿನಿ ನಿಲಯಕ್ಕೆ ತಾಲೂಕು ದಂಡಾಧಿಕಾರಿಗಳು ದಿಢೀರ್ ಭೇಟಿ ನೀಡಿ ನಿಲಯದ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.Body:ಬೆಳಂಬೆಳಗ್ಗೆ ತಹಶೀಲ್ದಾರ್‌ ವಿಶ್ವನಾಥ್ ಹಾಸ್ಟಲ್ ನಲ್ಲಿನ ಸ್ವಚ್ಛತೆ , ನಿಲಯ ನಿರ್ವಹಣೆ ಮತ್ತು ಮೂಲಭೂತ ಸೌಕರ್ಯಗಳು , ಸ್ವಚ್ಛತೆ ಸೇರಿದಂತೆ ಇನ್ನಿತರ ಅವಶಕತೆಗಳ ಬಗ್ಗೆ ಪರಿಶೀಲನೆ ಮಾಡಿದ್ದು ನಿರ್ವಹಣೆಯನ್ನು ಕಂಡು ಬೇರಗಾಗಿದ್ದಾರೆ.

ಬಡಮಕ್ಕಳಿಗೆ ಕಡ್ಡಾಯ ಶಿಕ್ಷಣ ನೀಡುವ ಉದ್ದೇಶದಿಂದ ಕೋಟ್ಯಾಂತರ ರೂ ವೆಚ್ಚ ಮಾಡಿ ಗ್ರಾಮೀಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪನೆ ಮಾಡಿ ಹತ್ತು ಹಲವು ಸೌಲಭ್ಯಗಳನ್ನು ನೀಡುತ್ತಿದ್ದರೆ ನಗರದ ಡಾ . ಬಿ . ಆರ್ . ಅಂಬೇಡ್ಕರ್ ಮೇಟ್ರಿಕ್ ಪೂರ್ವ ವಿದ್ಯಾರ್ಥಿನಿ ನಿಲಯದಲ್ಲಿ ನಿಲಯ ಪಾಲಕರ ನಿರ್ಲಕ್ಷದಿಂದ ವಿದ್ಯಾರ್ಥಿನಿಗಳಿಗೆ ಮೂಲಭೂತ ಸೌಲಭ್ಯಗಳು ಇಲ್ಲದರಿರುವುದು ಖೇದಕರ ಸಂಗತಿಯಾಗಿದೆ ಎಂದು ತಹಶೀಲ್ದಾರ್ ವಿಶ್ವನಾಥ್ ಬೇಸರ ವ್ಯಕ್ತಪಡಿಸಿದರು .

ವಿದ್ಯಾರ್ಥಿನಿ ನಿಲಯದಲ್ಲಿ ಎಷ್ಟು ಮಕ್ಕಳಿದ್ದಾರೆ , ನಿಲಯಕ್ಕೆ ಎಷ್ಟು ಸಾಮಗ್ರಿಗಳು ಹಾಗೂ ವಿದ್ಯಾರ್ಥಿನಿಗಳಿಗೆ ಸೌಲಭ್ಯಗಳು ಸರ್ಕಾರ ನೀಡುತ್ತಿದೆ ಎಂಬುವುದರ ಬಗ್ಗೆ ಸಕ್ರಿಯವಾದ ದಾಖಲೆಗಳ ನಿರ್ವಹಣೆ ಇಲ್ಲದಿರುವ ಬಗ್ಗೆ ಹಾಗೂ ಮಕ್ಕಳ ಸಂಖ್ಯೆ ಕಡಿಮೆ ಇದ್ದರೂ ಹಾಜರಾತಿ ಪುಸ್ತಕದಲ್ಲಿ ಮಾತ್ರ 186 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಹಾಜರಾತಿಯನ್ನು ತೋರಿಸುವ ಮೂಲಕ ಸರ್ಕರಕ್ಕೆ ತಪ್ಪು ಲೆಕ್ಕಗಳನ್ನು ನೀಡುತ್ತಿರುವ ಬಗ್ಗೆ ಬೇಸರಗೊಡ ತಹಶೀಲ್ದಾರ್‌ ನಿಲಯ ಪಾಲಕರಾದ ಶೈಲಜಾ ಅವರಿಗೆ ತರಾಟೆಗೆ ತೆಗೆದುಕೊಂಡರು.

2019 ನೇ ವರ್ಷದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಇದುವರೆಗೆ ಭೇಟಿ ನೀಡಿಲ್ಲ ಹಾಗೂ ಪುಸ್ತಕದಲ್ಲಿ ಸಮಾಜ ಕಲ್ಯಾಣ ಇಲಾಖೆ ಭೇಟಿ ನೀಡಿರುವ ಬರಹಗಳು ಇಲ್ಲ ಎಂದು ಜಿಲ್ಲಾಧಿಕಾರಿಗಳಿಗೆ ತಹಸೀಲ್ದಾರ್ ವಿಶ್ವನಾಥ್ ಪತ್ರ ಬರೆದಿದ್ದಾರೆ.

ಈ ಸಂದರ್ಭದಲ್ಲಿ ತಾಲೂಕಿನ ಸಿಲ್ಕ್ ದಾರ್ ಶೋಭಾ, ಉಪತಹಸೀಲ್ದಾರ್ ಮೋಹನ್ ಕುಮಾರ್ ಮತ್ತು ಸೆಕ್ರೆಟರಿ ಚಂದ್ರಶೇಖರ್ ಉಪಸ್ಥಿತಿ ಇದ್ದರು..Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.