ETV Bharat / state

ಹಿಂಬದಿಯಿಂದ ಕಾರಿಗೆ ಡಿಕ್ಕಿ ಹೊಡೆದ ಲಾರಿ, ಮೂವರು ಸ್ಥಳದಲ್ಲೇ ದಾರುಣ ಸಾವು

author img

By

Published : Sep 15, 2020, 5:44 PM IST

ಸ್ವಿಫ್ಟ್ ಕಾರಿನಲ್ಲಿ ನಾಲ್ವರು ಬೆಂಗಳೂರಿನಿಂದ ಹೈದರಾಬಾದ್ ಕಡೆ ಹೊರಟಿದ್ದರು. ಆಗ ಲಾರಿಯೊಂದು ಇವರ ಪಾಲಿಗೆ ಯಮನಂತೆ ಬಂದಿದೆ..

three-were-died in car-and-lorry-accident at Chikkaballapura
ಕಾರಿಗೆ ಡಿಕ್ಕಿ ಹೊಡೆದ ಲಾರಿ

ಚಿಕ್ಕಬಳ್ಳಾಪುರ : ಹಿಂಬದಿಯಿಂದ ಲಾರಿ ಗುದ್ದಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ದೊಡ್ಡಪೈಲಗುರ್ಕಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ನಡೆದಿದೆ.

ಹೈದರಾಬಾದ್ ಮೂಲದ ಜಯಶ್ರೀ (55), ಅಕ್ಷಯ್(28) ಹಾಗೂ ಅರ್ಷು (24) ಎಂಬುವರು ಮೃತ ದುರ್ದೈವಿಗಳು. ಸ್ವಿಫ್ಟ್ ಕಾರಿನಲ್ಲಿ ನಾಲ್ವರು ಬೆಂಗಳೂರಿನಿಂದ ಹೈದರಾಬಾದ್ ಕಡೆ ಹೊರಟಿದ್ದರು. ಈ ವೇಳೆ ತಾಲೂಕಿನ ದೊಡ್ಡಪೈಲಗುರ್ಕಿ ಇಳಿಜಾರು ರಸ್ತೆಯಲ್ಲಿ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ.

ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ದಿನೇಶ್ (55) ಎಂಬುವರು ಗಂಭೀರ ಗಾಯಗೊಂಡು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಿಕ್ಕಬಳ್ಳಾಪುರ : ಹಿಂಬದಿಯಿಂದ ಲಾರಿ ಗುದ್ದಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ದೊಡ್ಡಪೈಲಗುರ್ಕಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ನಡೆದಿದೆ.

ಹೈದರಾಬಾದ್ ಮೂಲದ ಜಯಶ್ರೀ (55), ಅಕ್ಷಯ್(28) ಹಾಗೂ ಅರ್ಷು (24) ಎಂಬುವರು ಮೃತ ದುರ್ದೈವಿಗಳು. ಸ್ವಿಫ್ಟ್ ಕಾರಿನಲ್ಲಿ ನಾಲ್ವರು ಬೆಂಗಳೂರಿನಿಂದ ಹೈದರಾಬಾದ್ ಕಡೆ ಹೊರಟಿದ್ದರು. ಈ ವೇಳೆ ತಾಲೂಕಿನ ದೊಡ್ಡಪೈಲಗುರ್ಕಿ ಇಳಿಜಾರು ರಸ್ತೆಯಲ್ಲಿ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ.

ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ದಿನೇಶ್ (55) ಎಂಬುವರು ಗಂಭೀರ ಗಾಯಗೊಂಡು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.