ETV Bharat / state

ಗೌರಿಬಿದನೂರಿನಲ್ಲಿ ಇಂದು ಅದ್ಧೂರಿ ವಾಲ್ಮೀಕಿ ಜಯಂತಿ ಆಚರಣೆ..

author img

By

Published : Oct 15, 2019, 8:08 PM IST

Updated : Oct 16, 2019, 3:37 AM IST

ಗೌರಿಬಿದನೂರಿನಲ್ಲಿ ಇಂದು ವಾಲ್ಮೀಕಿ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯ್ತು. ವಾಲ್ಮೀಕಿ ಮಹರ್ಷಿಗಳ ಭಾವಚಿತ್ರವನ್ನು ಪಲ್ಲಕ್ಕಿಯಲ್ಲಿಟ್ಟು ನಗರದ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯ್ತು. ಮೆರವಣಿಗೆಯಲ್ಲಿ ತಮಟೆ ಹಾಗೂ ವಾದ್ಯದ ಸದ್ದಿಗೆ ಯುವಕರು ದಾರಿಯುದ್ದಕ್ಕೂ ಕುಣಿದು ಕುಪ್ಪಳಿಸಿದರು.

ಗೌರಿಬಿದನೂರಿನಲ್ಲಿ ಇಂದು ಅದ್ಧೂರಿ ವಾಲ್ಮೀಕಿ ಜಯಂತಿ ಆಚರಣೆ

ಗೌರಿಬಿದನೂರು: ತಾಲೂಕಿನಾದ್ಯಂತ ಇಂದು ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯ್ತು. ತಾಲೂಕಿನ ವಿವಿಧ ಹಳ್ಳಿಗಳ ಜನರು ಹೂವಿನ ಪಲ್ಲಕ್ಕಿಯಲ್ಲಿ ವಾಲ್ಮೀಕಿ ಭಾವಚಿತ್ರವನ್ನು ಇಟ್ಟು ನಗರದ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು.

ಮೆರವಣಿಗೆಯಲ್ಲಿ ತಮಟೆ ಹಾಗೂ ವಾದ್ಯದ ಸದ್ದಿಗೆ ಯುವಕರು ದಾರಿಯುದ್ದಕ್ಕೂ ಕುಣಿದು ಕುಪ್ಪಳಿಸಿದರು. ಬಳಿಕ ನಡೆದ ಕಾರ್ಯಕ್ರಮದಲ್ಲಿ ಮಾಜಿ ಕೃಷಿ ಸಚಿವ ಹಾಗೂ ಹಾಲಿ ಶಾಸಕ ಎನ್ ಹೆಚ್ ಶಿವಶಂಕರರೆಡ್ಡಿ ಮಾತನಾಡಿ, ವಾಲ್ಮೀಕಿ ಸಮುದಾಯ ಮಹಾನ್ ವ್ಯಕ್ತಿಯ ಸಮುದಾಯವಾಗಿದ್ದು, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದೆ. ಈ ಹಿನ್ನೆಲೆಯಲ್ಲಿ ಸಮುದಾಯದ ಏಳಿಗೆಗಾಗಿ ಸರ್ಕಾರಗಳು ಶ್ರಮಿಸುತ್ತಿವೆ ಎಂದರು.

ಗೌರಿಬಿದನೂರಿನಲ್ಲಿ ಅದ್ಧೂರಿ ವಾಲ್ಮೀಕಿ ಜಯಂತಿ ಆಚರಣೆ..

ಸಮುದಾಯದ ಹಿರಿಯ ಮುಖಂಡ ಅಶೋಕ್ ಕುಮಾರ್ ಮಾತನಾಡಿ, ಮಹರ್ಷಿ ವಾಲ್ಮೀಕಿಯವರ ಆದರ್ಶದಂತೆ, ನಾವೆಲ್ಲರೂ ದುಷ್ಚಟಗಳನ್ನು ಬಿಟ್ಟು ಬದಲಾಗಬೇಕು. ನಮ್ಮ ಸಮುದಾಯದ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸುವ ಮೂಲಕ ಉನ್ನತ ಸ್ಥಾನದಲ್ಲಿ ಇರಲು ಸಾಧ್ಯವಾಗುತ್ತದೆ ಎಂದರು.

ಗೌರಿಬಿದನೂರು: ತಾಲೂಕಿನಾದ್ಯಂತ ಇಂದು ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯ್ತು. ತಾಲೂಕಿನ ವಿವಿಧ ಹಳ್ಳಿಗಳ ಜನರು ಹೂವಿನ ಪಲ್ಲಕ್ಕಿಯಲ್ಲಿ ವಾಲ್ಮೀಕಿ ಭಾವಚಿತ್ರವನ್ನು ಇಟ್ಟು ನಗರದ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು.

ಮೆರವಣಿಗೆಯಲ್ಲಿ ತಮಟೆ ಹಾಗೂ ವಾದ್ಯದ ಸದ್ದಿಗೆ ಯುವಕರು ದಾರಿಯುದ್ದಕ್ಕೂ ಕುಣಿದು ಕುಪ್ಪಳಿಸಿದರು. ಬಳಿಕ ನಡೆದ ಕಾರ್ಯಕ್ರಮದಲ್ಲಿ ಮಾಜಿ ಕೃಷಿ ಸಚಿವ ಹಾಗೂ ಹಾಲಿ ಶಾಸಕ ಎನ್ ಹೆಚ್ ಶಿವಶಂಕರರೆಡ್ಡಿ ಮಾತನಾಡಿ, ವಾಲ್ಮೀಕಿ ಸಮುದಾಯ ಮಹಾನ್ ವ್ಯಕ್ತಿಯ ಸಮುದಾಯವಾಗಿದ್ದು, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದೆ. ಈ ಹಿನ್ನೆಲೆಯಲ್ಲಿ ಸಮುದಾಯದ ಏಳಿಗೆಗಾಗಿ ಸರ್ಕಾರಗಳು ಶ್ರಮಿಸುತ್ತಿವೆ ಎಂದರು.

ಗೌರಿಬಿದನೂರಿನಲ್ಲಿ ಅದ್ಧೂರಿ ವಾಲ್ಮೀಕಿ ಜಯಂತಿ ಆಚರಣೆ..

ಸಮುದಾಯದ ಹಿರಿಯ ಮುಖಂಡ ಅಶೋಕ್ ಕುಮಾರ್ ಮಾತನಾಡಿ, ಮಹರ್ಷಿ ವಾಲ್ಮೀಕಿಯವರ ಆದರ್ಶದಂತೆ, ನಾವೆಲ್ಲರೂ ದುಷ್ಚಟಗಳನ್ನು ಬಿಟ್ಟು ಬದಲಾಗಬೇಕು. ನಮ್ಮ ಸಮುದಾಯದ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸುವ ಮೂಲಕ ಉನ್ನತ ಸ್ಥಾನದಲ್ಲಿ ಇರಲು ಸಾಧ್ಯವಾಗುತ್ತದೆ ಎಂದರು.

Intro:ತಾಲೂಕುನಾದ್ಯಂತ ವಿಶೇಷವಾಗಿ ವಾಲ್ಮೀಕಿ ಜಯಂತಿ Body:ಬೈಟ್ :ಸಮುದಾಯದ ಹಿರಿಯ ಮುಖಂಡ ಅಶೋಕ್ ಕುಮಾರ್

ಬೈಟ್ :ಮಾಜಿ ಕೃಷಿ ಸಚಿವ ಹಾಗೂ ಹಾಲಿ ಶಾಸಕ ಎನ್ ಹೆಚ್ ಶಿವಶಂಕರರೆಡ್ಡಿConclusion:ಗೌರಿಬಿದನೂರು: ವಿಶೇಷವಾಗಿ ತಾಲೂಕುನಾದ್ಯಂತ ವಾಲ್ಮೀಕಿ ಜಯಂತಿ ಆಚರಣೆ. ತಾಲೂಕಿನ ಹಳ್ಳಿಗಳಿಂದ ಸುಮಾರು 50 ಕ್ಕೂ ಹೆಚ್ಚು ಹೂವಿನ ಪಲ್ಲಕ್ಕಿನ ಮದ್ಯೆ ವಾಲ್ಮೀಕಿ ಭಾವಚಿತ್ರವನ್ನು ಇಟ್ಟು ನಗರದ ಮುಖ್ಯ ರಸ್ತೆಗಳಲ್ಲಿ ಮೆರೆವಣಿಗೆ ಮಾಡಲಾಯಿತು. ತಮಟೆ ವಾದ್ಯ ಮತ್ತು ಡಿಜೆ ಹಾಡುಗಳಿಗೆ ಯುವಕರು ದಾರಿಯುದ್ದಕ್ಕೂ ಕುಣಿದು ಕುಪ್ಪಳಿಸಿದರು. ಇಂದು ತಾಲೂಕಿನಲ್ಲಿ ವಾಲ್ಮೀಕಿ ಜನಾಂಗದವರಿಗೆ ಹಬ್ಬದ ಸಂಭ್ರಮವಾಗಿದೆ.

ಮಾಜಿ ಕೃಷಿ ಸಚಿವ ಹಾಗೂ ಹಾಲಿ ಶಾಸಕ ಎನ್ ಹೆಚ್ ಶಿವಶಂಕರರೆಡ್ಡಿ ಮಾತನಾಡಿ ವಾಲ್ಮೀಕಿ ಸಮುದಾಯ ಮಹಾನ್ ವ್ಯಕ್ತಿಯ ಸಮುದಾಯವಾಗಿದ್ದು ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದ್ದು ಸಮುದಾಯದ ಏಳಿಗೆಗಾಗಿ ಸರ್ಕಾರಗಳು ಶ್ರಮಿಸುತ್ತಿವೆ ಎಂದರು.
ತಾಲ್ಲೂಕಿನಲ್ಲಿ ಸಮುದಾಯದ ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ನಿಲಯಗಳನ್ನು ವಿಶೇಷವಾಗಿ ಹೆಣ್ಣು ಮಕ್ಕಳಿಗಾಗಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ನಿಲಯವನ್ನು ನಿರ್ಮಾಣ ಮಾಡಿದ್ದು ವಸತಿ ಶಾಲೆಯಲ್ಲಿ ಸಮುದಾಯದ ಅನೇಕ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ ಎಂದ ಅವರು ಕೆಂದ್ರ ಸರ್ಕಾರದ ಏಕಲವ್ಯ ಶಾಲೆಯನ್ನು ತಾಲ್ಲೂಕಿನಲ್ಲಿ ಮಂಜೂರು ಮಾಡುವಂತೆ ಈಗಾಗಲೇ ಪ್ರಸ್ತಾವನೆ ಕಳುಹಿಸಿದ್ದು ಏಕಲವ್ಯ ಶಾಲೆಯನ್ನು ಮಂಜೂರು ಮಾಡಿಸಲಾಗುವುದು ಎಂದರು.
ಸಮುದಾಯದವರು ಸರ್ಕಾರದಿಂದ ಬರುವ ಸವಲತ್ತುಗಳನ್ನು ಸದುಪಯೋಗಪಡಿಸಿಕೊಂಡು ಜೀವನ ನಿರ್ವಹಣೆ ಮಾಡಿದಾಗ ಸಮುದಾಯವು ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಬಲಗೊಳ್ಳುತ್ತದೆ ಎಂದರು.
ವಾಲ್ಮೀಕಿ ಜಯಂತಿಯ ಅಂಗವಾಗಿ ಅತ್ಯನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

ಸಮುದಾಯದ ಹಿರಿಯ ಮುಖಂಡ ಅಶೋಕ್ ಕುಮಾರ್ ಮಾತನಾಡಿ ಮಹರ್ಷಿ ವಾಲ್ಮೀಕಿಯವರಂತಹ ಮಹಾನ್ ಪುರುಷರ ಸಮುದಾಯದವರು ನಾವಾಗಿದ್ದು ದುಷ್ಚಟಗಳನ್ನು ಬಿಟ್ಟು ಬದಲಾಗಬೇಕು ಎಂದ ಅವರು ನಮ್ಮ ಸಮುದಾಯದವರು ಮಕ್ಕಳಿಗೆ ವಿದ್ಯಾಭ್ಯಾಸವನ್ನು ಕೊಡಿಸುವ ಮೂಲಕ ಉನ್ನತ ಸ್ಥಾನದಲ್ಲಿ ಇರಲು ಸಾಧ್ಯವಾಗುತ್ತದೆ ಎಂದರು.
Last Updated : Oct 16, 2019, 3:37 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.