ETV Bharat / state

ಮೊಬೈಲ್ ಟವರ್ ತೆರವುಗೊಳಿಸದಿದ್ದರೆ ಸಾಮೂಹಿಕ ಆತ್ಮಹತ್ಯೆ... ಗ್ರಾಮಸ್ಥರ ಎಚ್ಚರಿಕೆ - undefined

ಶಿಡ್ಲಘಟ್ಟ ತಾಲೂಕು ಭಕ್ತರಹಳ್ಳಿಯ ದಲಿತ ಕಾಲೋನಿಯಲ್ಲಿ ನಿರ್ಮಾಣವಾಗಿರುವ ಮೊಬೈಲ್‌ ಟವರ್ ತೆರವುಗೊಳಿಸದಿದ್ದರೆ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಅಲ್ಲಿನ ನಿವಾಸಿಗಳು ಎಚ್ಚರಿಕೆ ರವಾನಿಸಿದ್ದಾರೆ.

ಮೊಬೈಲ್ ಟವರ್ ತೆರವಿಗೆ ಆಗ್ರಹಿಸಿದ ಗ್ರಾಮಸ್ಥರು
author img

By

Published : Apr 30, 2019, 8:38 PM IST

ಚಿಕ್ಕಬಳ್ಳಾಪುರ: ನಿರ್ಮಾಣವಾಗಿರುವ ಮೊಬೈಲ್‌ ಟವರ್​ನ್ನು ತೆರವುಗೊಳಿಸದಿದ್ದರೆ ಗ್ರಾಮಸ್ಥರೆಲ್ಲಾ ಸೇರಿ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಜಿಲ್ಲಾಧಿಕಾರಿಗೆ ಬೆದರಿಕೆ ಹಾಕಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಭಕ್ತರಹಳ್ಳಿಯಲ್ಲಿ ನಡೆದಿದೆ.

ಶಿಡ್ಲಘಟ್ಟ ಶಾಸಕ ವಿ. ಮುನಿಯಪ್ಪ ಅವರ ಸಂಬಂಧಿ ಬೈರಾರೆಡ್ಡಿ ದೌರ್ಜನ್ಯ ಮಾಡಿ ದಲಿತ ಕಾಲೋನಿಯಲ್ಲಿ ಮೊಬೈಲ್‌ ಟವರ್ ನಿರ್ಮಾಣಕ್ಕೆ ಕುಮ್ಮಕ್ಕು ನೀಡಿದ್ದಾರೆಂದು ದಲಿತರು ಆರೋಪಿಸಿದ್ದಾರೆ.

ಮೊಬೈಲ್ ಟವರ್ ತೆರವಿಗೆ ಆಗ್ರಹಿಸಿದ ಗ್ರಾಮಸ್ಥರು

ಇನ್ನು ನಿರ್ಮಾಣವಾಗಿರುವ ಟವರ್ ಕಾರ್ಯಾರಂಭ ಮಾಡಿದ್ರೆ ಮಕ್ಕಳ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಲಿದ್ದು, ತೊಂದರೆಗೆ ಒಳಗಾಗುವ ಸಾಧ್ಯತೆಯಿದೆ. ಟವರ್​ಗೆ ಅಳವಡಿಸಿದ ಜನರರೇಟರ್ ಶಬ್ದದಿಂದ‌ ಮಕ್ಕಳ ವಿದ್ಯಾಭ್ಯಾಸಕ್ಕೂ ತೊಂದರೆಯಾಗಲಿದೆ. ಇದರಿಂದ ನಿತ್ಯ ಕಿರುಕುಳ ಉಂಟಾಗುತ್ತದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಅಷ್ಟೇ ಅಲ್ಲದೇ, ಹೈವೋಲ್ಟೇಜ್ ವಿದ್ಯುತ್ ಶಾಕ್​ನಿಂದ‌ ಅಕ್ಕಪಕ್ಕದ ಕುಟುಂಬಗಳಿಗೆ ಪ್ರಾಣ ಭಯವಿದೆ. ಆದಷ್ಟು ಬೇಗ ಟವರ್ ತೆರವಿಗೊಳಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿಕೊಂಡಿದ್ದಾರೆ ಇಲ್ಲಿನ ಜನ.

ಈವರೆಗೂ ಸಾಕಷ್ಟು ಬಾರಿ ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದಿದ್ರೂ ಯಾವುದೇ ಪ್ರಯೋಜನವಾಗದ ಕಾರಣ ದಲಿತ ಕೇರಿಯ ನಿವಾಸಿಗಳು ಆತ್ಮಹತ್ಯೆ ನಿರ್ಧಾರಕ್ಕೆ ಬಂದಿದ್ದಾರೆ. ಅಷ್ಟೇ ಅಲ್ಲದೆ, ಟವರ್ ಏರಿ ಪ್ರತಿಭಟನೆಗೆ ಮುಂದಾಗಿದ್ದವರನ್ನು ಪೊಲೀಸರು ಸಮಾಧಾನ‌ಪಡಿಸಿ ಕೆಳಗಿಳಿಸಿದ್ದಾರೆ.

ಚಿಕ್ಕಬಳ್ಳಾಪುರ: ನಿರ್ಮಾಣವಾಗಿರುವ ಮೊಬೈಲ್‌ ಟವರ್​ನ್ನು ತೆರವುಗೊಳಿಸದಿದ್ದರೆ ಗ್ರಾಮಸ್ಥರೆಲ್ಲಾ ಸೇರಿ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಜಿಲ್ಲಾಧಿಕಾರಿಗೆ ಬೆದರಿಕೆ ಹಾಕಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಭಕ್ತರಹಳ್ಳಿಯಲ್ಲಿ ನಡೆದಿದೆ.

ಶಿಡ್ಲಘಟ್ಟ ಶಾಸಕ ವಿ. ಮುನಿಯಪ್ಪ ಅವರ ಸಂಬಂಧಿ ಬೈರಾರೆಡ್ಡಿ ದೌರ್ಜನ್ಯ ಮಾಡಿ ದಲಿತ ಕಾಲೋನಿಯಲ್ಲಿ ಮೊಬೈಲ್‌ ಟವರ್ ನಿರ್ಮಾಣಕ್ಕೆ ಕುಮ್ಮಕ್ಕು ನೀಡಿದ್ದಾರೆಂದು ದಲಿತರು ಆರೋಪಿಸಿದ್ದಾರೆ.

ಮೊಬೈಲ್ ಟವರ್ ತೆರವಿಗೆ ಆಗ್ರಹಿಸಿದ ಗ್ರಾಮಸ್ಥರು

ಇನ್ನು ನಿರ್ಮಾಣವಾಗಿರುವ ಟವರ್ ಕಾರ್ಯಾರಂಭ ಮಾಡಿದ್ರೆ ಮಕ್ಕಳ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಲಿದ್ದು, ತೊಂದರೆಗೆ ಒಳಗಾಗುವ ಸಾಧ್ಯತೆಯಿದೆ. ಟವರ್​ಗೆ ಅಳವಡಿಸಿದ ಜನರರೇಟರ್ ಶಬ್ದದಿಂದ‌ ಮಕ್ಕಳ ವಿದ್ಯಾಭ್ಯಾಸಕ್ಕೂ ತೊಂದರೆಯಾಗಲಿದೆ. ಇದರಿಂದ ನಿತ್ಯ ಕಿರುಕುಳ ಉಂಟಾಗುತ್ತದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಅಷ್ಟೇ ಅಲ್ಲದೇ, ಹೈವೋಲ್ಟೇಜ್ ವಿದ್ಯುತ್ ಶಾಕ್​ನಿಂದ‌ ಅಕ್ಕಪಕ್ಕದ ಕುಟುಂಬಗಳಿಗೆ ಪ್ರಾಣ ಭಯವಿದೆ. ಆದಷ್ಟು ಬೇಗ ಟವರ್ ತೆರವಿಗೊಳಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿಕೊಂಡಿದ್ದಾರೆ ಇಲ್ಲಿನ ಜನ.

ಈವರೆಗೂ ಸಾಕಷ್ಟು ಬಾರಿ ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದಿದ್ರೂ ಯಾವುದೇ ಪ್ರಯೋಜನವಾಗದ ಕಾರಣ ದಲಿತ ಕೇರಿಯ ನಿವಾಸಿಗಳು ಆತ್ಮಹತ್ಯೆ ನಿರ್ಧಾರಕ್ಕೆ ಬಂದಿದ್ದಾರೆ. ಅಷ್ಟೇ ಅಲ್ಲದೆ, ಟವರ್ ಏರಿ ಪ್ರತಿಭಟನೆಗೆ ಮುಂದಾಗಿದ್ದವರನ್ನು ಪೊಲೀಸರು ಸಮಾಧಾನ‌ಪಡಿಸಿ ಕೆಳಗಿಳಿಸಿದ್ದಾರೆ.

Intro:ಮೊಬೈಲ್‌ ಟವರ್ ನಿರ್ಮಾಣವಾದ್ರೆ ಗ್ರಾಮಸ್ಥರೆಲ್ಲಾ ಸೇರಿ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಜಿಲ್ಲಾಧಿಕಾರಿಗಳಿಗೆ ಬೆದರಿಕೆ ಹಾಕಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಭಕ್ತರಹಳ್ಳಿಯಲ್ಲಿ ನಡೆದಿದೆ.
Body:
ಶಿಡ್ಲಘಟ್ಟ ಶಾಸಕ ವಿ ಮುನಿಯಪ್ಪ ಸಂಭಂದಿ‌ ಬೈರಾರೆಡ್ಡಿ ದೌರ್ಜನ್ಯ ಮಾಡಿ ದಲಿತ ಕಾಲೋನಿಯಲ್ಲಿ ಮೊಬೈಲ್‌ ಟವರ್ ನಿರ್ಮಾಣಕ್ಕೆ ಕುಮ್ಮಕ್ಕು ನೀಡಿದ್ದಾರೆಂದು ದಲಿತ ವಾಸಿಗಳು ಆರೋಪಿಸಿದ್ದಾರೆ.

ಇನ್ನೂ ಟವರ್ ನಿರ್ಮಾಣ ವಾದ್ರೆ ಮಕ್ಕಳ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಲಿದ್ದು ತೊಂದರೆಗೆ ಒಳಗಾಗುವ ಸಾಧ್ಯತೆಯಿದೆ.ಟವರ್ ಗೆ ಅಳವಡಿಸಿದ ಜನರೆಟರ್ ಶಬ್ದದಿಂದ‌ ಮಕ್ಕಳ ವಿದ್ಯಾಭ್ಯಾಸಕ್ಕೂ ತೊಂದರೆಯಾಗಲಿದೆ. ಇದರಿಂದ ನಿತ್ಯ ಕಿರುಕುಳ ಉಂಟಾಗುತ್ತದೆ ಎಂದು ಎಂದು ದಲಿತ ಕೇರಿ ನಿವಾಸಿಗಳು ಆರೋಪಿಸಿದ್ದಾರೆ.

ಅಷ್ಟೇ ಅಲ್ಲದೇ ಹೈ ಹೋಲ್ಟೇಜ್ ವಿದ್ಯುತ್ ಶಾಕ್ ನಿಂದ‌ ಅಕ್ಕಪಕ್ಕದ ಕುಟುಂಭಗಳಿಗೆ ಪ್ರಾಣಭಯವಿದ್ದು ಆದಷ್ಟು ಬೇಗ ಟವರ್ ತೆರವಿಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.ಇದುವರೆಗೂ ಸಾಕಷ್ಟು ಬಾರೀ ಅಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಉಪಯೋಗ ವಾಗದ ಕಾರಣ ತೆರವುಗೊಳಿಸಿದ ಪಕ್ಷದಲ್ಲಿ ದಲಿತ ಕೇರಿಯ ನಿವಾಸಿಗಳು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ನೀಡಿದ್ದಾರೆ.ಅಷ್ಟೇ ಅಲ್ಲದೆ ಟವರ್ ಏರಿ ಪ್ರತಿಭಟನೆ ನಡೆಸಲು ಸಿದ್ದರಿಂದ ಕೆಲ ಯುವಕರನ್ನು ಪೊಲೀಸರು ಸಮಾಧಾನ‌ ಪಡಿಸಿ ಕೆಳಗಿಳಿಸಿದ್ದಾರೆ.

ಸದ್ಯ ಸವರ್ಣಿಯರು ದಲಿತರ ಮೇಲಿನ ದೌರ್ಜನ್ಯ ದಿಂದ ಮೊಬೈಲ್ ಟವರ್ ನಿರ್ಮಾಣ ಮಾಡಲಾಗುತ್ತಿದೆ ಎಂದು ಆರೋಪಿಸುತ್ತಿದ್ದು ಜಿಲ್ಲಾಡಳಿತ ಟವರ್ ತೆರವಿಗೆ ಸ್ಪಂದಿಸುತ್ತೋ ಇಲ್ಲವೋ‌ಕಾದು ನೋಡಬೇಕಾಗಿದೆ.
Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.