ಚಿಕ್ಕಬಳ್ಳಾಪುರ: ಲಾಕ್ಡೌನ್ ಸಂಕಷ್ಟದಿಂದ ನೊಂದ ನೇಕಾರ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೈಯಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ವೆಂಕಟಲಕ್ಷ್ಮಮ್ಮ(55) ನೇಣಿಗೆ ಶರಣಾದ ಮಹಿಳೆ. ಈ ಕುಟುಂಬ ನೇಕಾರಿಕೆಯನ್ನೇ ವೃತ್ತಿಯಾಗಿಸಿಕೊಂಡು ಜೀವನ ನಿರ್ವಹಣೆ ಮಾಡುತ್ತಿತ್ತು. ಲಾಕ್ಡೌನ್ದಿಂದಾಗಿ ವ್ಯಾಪಾರ-ವಾಹಿವಾಟಿಲ್ಲದೆ ಜೀನವ ನಡೆಸಲು ಬ್ಯಾಂಕ್ ಸೇರಿದಂತೆ ಕೈ ಸಾಲ ಮಾಡಿಕೊಂಡಿದ್ದರು ಎನ್ನಲಾಗುತ್ತಿದೆ.
ಈ ನಡುವೆ ಮೃತ ಮಹಿಳೆ ಅನಾರೋಗ್ಯದಿಂದ ಬಳಲುತ್ತಿದ್ದು, ಔಷಧಿಗೂ ಹಣವಿಲ್ಲದೆ ನೊಂದಿದ್ದರು. ಇಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.