ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಬಳಿ ಅನಾಥೆ ವೃದ್ಧೆವೋರ್ವಳು ಮೃತಪಟ್ಟಿದ್ದು, ಸ್ಥಳೀಯ ಯುವಕರು ಈ ವೃದ್ಧೆಯ ಅಂತ್ಯಸಂಸ್ಕಾರ ನಡೆಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಅನಾಥ ವೃದ್ಧೆಯ ಅಂತ್ಯಸಂಸ್ಕಾರ: ಮಾನವೀಯತೆ ಮೆರೆದ ತರೀಕೆರೆ ಯುವಕರು
ಅನಾರೋಗ್ಯಕ್ಕೆ ತುತ್ತಾಗಿ ಪಾಳುಬಿದ್ದ ಕಟ್ಟಡವೊಂದರಲ್ಲಿ ವಾಸಿಸುತ್ತಿದ್ದ ವೃದ್ಧೆಯೋರ್ವಳನ್ನು 15 ದಿನಗಳ ಕಾಲ ಆರೈಕೆ ಮಾಡಿಕ ಯುವಕರು, ಇದೀಗ ಆಕೆ ಮೃತಪಟ್ಟ ನಂತರ ಅಂತ್ಯಸಂಸ್ಕಾರ ನೆರವೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
![ಅನಾಥ ವೃದ್ಧೆಯ ಅಂತ್ಯಸಂಸ್ಕಾರ: ಮಾನವೀಯತೆ ಮೆರೆದ ತರೀಕೆರೆ ಯುವಕರು Funeral of Orphan Corpse](https://etvbharatimages.akamaized.net/etvbharat/prod-images/768-512-9082166-thumbnail-3x2-vicky.jpg?imwidth=3840)
ಕಳೆದ 15 ದಿನಗಳಿಂದ ವೃದ್ಧೆ ಅನಾರೋಗ್ಯಕ್ಕೆ ತುತ್ತಾಗಿ ಲಿಂಗದಹಳ್ಳಿ ಪಟ್ಟಣದ ಪಾಳು ಬಿದ್ದ ಕಟ್ಟಡವೊಂದರಲ್ಲಿ ತಂಗಿದ್ದರು. ಇದನ್ನು ಗಮನಿಸಿದ ಸ್ಥಳೀಯ ಯುವಕರು, ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆದರೆ ಈ ವೃದ್ಧೆ ಬಗ್ಗೆ ಯಾವೊಬ್ಬ ಅಧಿಕಾರಿಯೂ ಗಮನ ಹರಿಸದ ಹಿನ್ನೆಲೆ, ಅಭಿಷೇಕ್, ವಿಕ್ಕಿ, ಯೂನಸ್, ಪರ್ವೇಜ್ ಎಂಬ ನಾಲ್ವರು ಯುವಕರು 15 ದಿನಗಳ ಕಾಲ ಆರೈಕೆ ಮಾಡಿದ್ದಾರೆ.
ವೃದ್ಧೆಯ ಆರೋಗ್ಯ ಸಂಪೂರ್ಣ ಹದಗೆಟ್ಟ ಹಿನ್ನೆಲೆ, ಆಸ್ಪತ್ರೆಗೆ ದಾಖಲಿಸಲು ಈ ಯುವಕರು ಮುಂದಾಗಿದ್ದರು. ಆದರೆ ಕೊರೊನಾ ಕಾರಣದಿಂದಾಗಿ ಯಾವುದೇ ಆಸ್ಪತ್ರೆಯಲ್ಲಿ ದಾಖಲಿಸಿಕೊಳ್ಳದ ಕಾರಣ ವೃದ್ಧೆ ಮೃತಪಟ್ಟಿದ್ದಾಳೆ. ಇಂದು ವಿಧಿ ವಿಧಾನಗಳ ಮೂಲಕ ಈ ಯುವಕರು ಆಕೆಯ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.
ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಬಳಿ ಅನಾಥೆ ವೃದ್ಧೆವೋರ್ವಳು ಮೃತಪಟ್ಟಿದ್ದು, ಸ್ಥಳೀಯ ಯುವಕರು ಈ ವೃದ್ಧೆಯ ಅಂತ್ಯಸಂಸ್ಕಾರ ನಡೆಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಕಳೆದ 15 ದಿನಗಳಿಂದ ವೃದ್ಧೆ ಅನಾರೋಗ್ಯಕ್ಕೆ ತುತ್ತಾಗಿ ಲಿಂಗದಹಳ್ಳಿ ಪಟ್ಟಣದ ಪಾಳು ಬಿದ್ದ ಕಟ್ಟಡವೊಂದರಲ್ಲಿ ತಂಗಿದ್ದರು. ಇದನ್ನು ಗಮನಿಸಿದ ಸ್ಥಳೀಯ ಯುವಕರು, ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆದರೆ ಈ ವೃದ್ಧೆ ಬಗ್ಗೆ ಯಾವೊಬ್ಬ ಅಧಿಕಾರಿಯೂ ಗಮನ ಹರಿಸದ ಹಿನ್ನೆಲೆ, ಅಭಿಷೇಕ್, ವಿಕ್ಕಿ, ಯೂನಸ್, ಪರ್ವೇಜ್ ಎಂಬ ನಾಲ್ವರು ಯುವಕರು 15 ದಿನಗಳ ಕಾಲ ಆರೈಕೆ ಮಾಡಿದ್ದಾರೆ.
ವೃದ್ಧೆಯ ಆರೋಗ್ಯ ಸಂಪೂರ್ಣ ಹದಗೆಟ್ಟ ಹಿನ್ನೆಲೆ, ಆಸ್ಪತ್ರೆಗೆ ದಾಖಲಿಸಲು ಈ ಯುವಕರು ಮುಂದಾಗಿದ್ದರು. ಆದರೆ ಕೊರೊನಾ ಕಾರಣದಿಂದಾಗಿ ಯಾವುದೇ ಆಸ್ಪತ್ರೆಯಲ್ಲಿ ದಾಖಲಿಸಿಕೊಳ್ಳದ ಕಾರಣ ವೃದ್ಧೆ ಮೃತಪಟ್ಟಿದ್ದಾಳೆ. ಇಂದು ವಿಧಿ ವಿಧಾನಗಳ ಮೂಲಕ ಈ ಯುವಕರು ಆಕೆಯ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.
TAGGED:
ಅನಾಥ ವೃದ್ಧೆಯ ಅಂತ್ಯಸಂಸ್ಕಾರ