ಚಿಕ್ಕಮಗಳೂರು: ನಗರದ ಜಿಲ್ಲಾಸ್ಪತ್ರೆ ವೀಕ್ಷಣೆಗೆ ಬಂದಿದ್ದ ಸಚಿವ ಸಿ. ಟಿ. ರವಿ ಮುಂದೆ ಆಸ್ಪತ್ರೆಯ ಡಿ ದರ್ಜೆ ಗುತ್ತಿಗೆ ನೌಕರರಾಗಿರುವ ಮಹಿಳೆಯರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆಯೊಡ್ಡಿದ ಘಟನೆ ನಡೆದಿದೆ.
ಜಿಲ್ಲಾಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ 17 ಜನ ಹೊರಗುತ್ತಿಗೆ ನೌಕರರನ್ನು ಕೆಲಸದಿಂದ ವಜಾಗೊಳಿಸಿದ ಹಿನ್ನೆಲೆ ಸಚಿವರಿಗೆ ಮನವಿ ನೀಡಲು ಬಂದಿದ್ದ ಮಹಿಳಾ ನೌಕರರು, ತಮಗೆ ನ್ಯಾಯ ಸಿಗದಿದ್ದರೆ ಸಾಯುವುದಾಗಿ ಬೆದರಿಕೆಯೊಡ್ಡಿದರು.
ಈ ರೀತಿಯ ಬ್ಲ್ಯಾಕ್ಮೇಲ್ ನನ್ನ ಬಳಿ ನಡೆಯಲ್ಲ, ಇದನ್ನು ನನ್ನ ಬಳಿ ಇಟ್ಟುಕೊಳ್ಳಬೇಡಿ. ಹೇಳುವುದನ್ನು ಸರಿಯಾಗಿ ಹೇಳಿ, ಬ್ಲ್ಯಾಕ್ಮೇಲ್ ಒಳ್ಳೆಯದಲ್ಲ. ನಾನು ನಿಮ್ಮ ಗರಡಿಯಲ್ಲಿ ಬೆಳೆದು ಬಂದವನು ಎಂದು ಸಚಿವ ಸಿ. ಟಿ. ರವಿ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ರು. ಅಲ್ಲದೆ, ಈ ಕುರಿತು ಅಧಿಕಾರಿಗಳ ಜೊತೆ ಮಾತನಾಡುವುದಾಗಿಯೂ ತಿಳಿಸಿದ್ರು.