ETV Bharat / state

ಚಿಕ್ಕಮಗಳೂರು: ಕಲ್ಲು ಕ್ವಾರಿಯಲ್ಲಿ ಡೈನಾಮೈಟ್ ಸ್ಫೋಟ, ಕಾಲು ಕಳೆದುಕೊಂಡ ವ್ಯಕ್ತಿ - ಡೈನಾಮೈಟ್ ಸ್ಫೋಟ

ಡೈನಾಮೈಟ್ ಸ್ಫೋಟಗೊಂಡು​ ವ್ಯಕ್ತಿಯೊಬ್ಬರು ಕಾಲು ಕಳೆದುಕೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಕಲ್ಲು ಕ್ವಾರಿಯಲ್ಲಿ ಡೈನಾಮೈಟ್ ಸ್ಫೋಟ
ಕಲ್ಲು ಕ್ವಾರಿಯಲ್ಲಿ ಡೈನಾಮೈಟ್ ಸ್ಫೋಟ
author img

By ETV Bharat Karnataka Team

Published : Oct 20, 2023, 9:24 PM IST

ಚಿಕ್ಕಮಗಳೂರು: ಕೃಷಿ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ವ್ಯಕ್ತಿ ಡೈನಾಮೈಟ್ ಸ್ಫೋಟದಿಂದ ಸಿಡಿದ ಕಲ್ಲಿನಿಂದ ಕಾಲು ಕಳೆದುಕೊಂಡಿರುವ ಘಟನೆ ಕಡೂರು ತಾಲೂಕಿನ ಸೇವಾಪುರ ಗ್ರಾಮದಲ್ಲಿ ನಡೆದಿದೆ. ಕೃಷಿ ಕೆಲಸ ಮುಗಿಸಿ ಜಮೀನಿನಿಂದ ಮನೆಗೆ ಬರುತ್ತಿದ್ದ ಸಿದ್ದಾನಾಯಕ್ ಎಂಬವರು ಕಲ್ಲು ಕ್ವಾರಿ ಬಳಿ ಬರುತ್ತಿದ್ದಂತೆ ಕ್ವಾರಿಯಲ್ಲಿಟ್ಟಿದ್ದ ಡೈನಾಮೈಟ್ ಸ್ಪೋಟಗೊಂಡು ಕಲ್ಲು ಸಿಡಿದಿವೆ. ಇದರಿಂದ ಸಿದ್ದಾನಾಯಕ್ ಕಾಲಿಗೆ ಗಂಭೀರವಾಗಿ ಗಾಯವಾಗಿದ್ದು, ಪ್ರಜ್ಞೆ ತಪ್ಪಿ ಇಡೀ ರಾತ್ರಿ ಅಲ್ಲೇ ಬಿದ್ದಿದ್ದಾರೆ.

ಬೆಳಿಗ್ಗೆ ಮನೆಯವರು ಹುಡುಕಿಕೊಂಡು ಹೋದಾಗ ಕ್ವಾರಿ ಬಳಿ ಪ್ರಜ್ಞಾಹೀನ ಸ್ಥತಿಯಲ್ಲಿ ಕಂಡು ಬಂದಿದ್ದಾರೆ. ಕಲ್ಲು ಸಿಡಿದ ರಭಸಕ್ಕೆ ಕೈ ಕಾಲು ಹಾಗೂ ಎದೆ ಭಾಗಕ್ಕೆ ತೀವ್ರ ಗಾಯವಾಗಿದ್ದು ಕಡೂರು ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಎಡ ಗಾಲು ಸಂಪೂರ್ಣ ಹಾನಿ ಆಗಿದೆ ಎಂದು ಹೇಳಿದ್ದಾರೆ.

ತಂಗಲಿ ಗ್ರಾಮ ಪಂಚಾಯಿತಿಯಲ್ಲಿ ಅನುಮತಿ ಪಡೆಯದೇ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದಾರೆ ಎಂದು ಸ್ಥಳಿಯರು ಆರೋಪಿಸಿದ್ದಾರೆ. ಈ ಬಗ್ಗೆ ಇಂದು ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಪೊಲೀಸ್​ ಅಧಿಕಾರಿ ಪ್ರತಿಕ್ರಿಯೆ ನೀಡಿದ್ದು, ಸಿದ್ದನಾಯಕ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಅವರ ಆರೋಗ್ಯ ಸುಧಾರಿಸಿದ ನಂತರ ಅವರ ಬಳಿ ಮಾಹಿತಿ ಪಡೆದು ಮುಂದಿನ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರತ್ಯೇಕ ಘಟನೆ, ಚಾರ್ಮಾಡಿ ರಸ್ತೆಯಲ್ಲಿ ಅಪಘಾತ: ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ನಿಂತಿದ್ದ ಮಿನಿ ಗೂಡ್ಸ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದಿರುವ ಘಟನೆ ಇಂದು ನಡೆದಿದೆ. ಲಾರಿ ಡಿಕ್ಕಿಯ ರಭಸಕ್ಕೆ ಮಿನಿ ಗೂಡ್ಸ್ ವಾಹನ ಪಲ್ಟಿಯಾಗಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಲಾರಿ ಚಾಲಕನ ಅತಿ ವೇಗವೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಗೂಡ್ಸ್​ ವಾಹನಕ್ಕೆ ಡಿಕ್ಕಿ ಹೊಡೆದ ಕ್ಯಾಂಟರ್​
ಗೂಡ್ಸ್​ ವಾಹನಕ್ಕೆ ಡಿಕ್ಕಿ ಹೊಡೆದ ಕ್ಯಾಂಟರ್​

ಬೆಂಗಳೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಕೊರಿಯರ್ ಲಾರಿಯಿಂದ ಅವಘಡ ಜರುಗಿದೆ. ಅದೃಷ್ಟವಶಾತ್ ಗೂಡ್ಸ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಕೂಡಲೇ ಆತನನ್ನು ಸ್ಥಳೀಯರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಘಟನಾ ಸ್ಥಳಕ್ಕೆ ಬಣಕಲ್ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಚಾಕೊಲೆಟ್​ ತರಲು ಹೋಗಿ ಬೈಕ್‌ನಿಂದ ಬಿದ್ದು ಗರ್ಭಿಣಿ ಸಾವು: ಶವದ ಬಳಿ ರಾತ್ರಿ ಕಳೆದ ಮಗ

ಚಿಕ್ಕಮಗಳೂರು: ಕೃಷಿ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ವ್ಯಕ್ತಿ ಡೈನಾಮೈಟ್ ಸ್ಫೋಟದಿಂದ ಸಿಡಿದ ಕಲ್ಲಿನಿಂದ ಕಾಲು ಕಳೆದುಕೊಂಡಿರುವ ಘಟನೆ ಕಡೂರು ತಾಲೂಕಿನ ಸೇವಾಪುರ ಗ್ರಾಮದಲ್ಲಿ ನಡೆದಿದೆ. ಕೃಷಿ ಕೆಲಸ ಮುಗಿಸಿ ಜಮೀನಿನಿಂದ ಮನೆಗೆ ಬರುತ್ತಿದ್ದ ಸಿದ್ದಾನಾಯಕ್ ಎಂಬವರು ಕಲ್ಲು ಕ್ವಾರಿ ಬಳಿ ಬರುತ್ತಿದ್ದಂತೆ ಕ್ವಾರಿಯಲ್ಲಿಟ್ಟಿದ್ದ ಡೈನಾಮೈಟ್ ಸ್ಪೋಟಗೊಂಡು ಕಲ್ಲು ಸಿಡಿದಿವೆ. ಇದರಿಂದ ಸಿದ್ದಾನಾಯಕ್ ಕಾಲಿಗೆ ಗಂಭೀರವಾಗಿ ಗಾಯವಾಗಿದ್ದು, ಪ್ರಜ್ಞೆ ತಪ್ಪಿ ಇಡೀ ರಾತ್ರಿ ಅಲ್ಲೇ ಬಿದ್ದಿದ್ದಾರೆ.

ಬೆಳಿಗ್ಗೆ ಮನೆಯವರು ಹುಡುಕಿಕೊಂಡು ಹೋದಾಗ ಕ್ವಾರಿ ಬಳಿ ಪ್ರಜ್ಞಾಹೀನ ಸ್ಥತಿಯಲ್ಲಿ ಕಂಡು ಬಂದಿದ್ದಾರೆ. ಕಲ್ಲು ಸಿಡಿದ ರಭಸಕ್ಕೆ ಕೈ ಕಾಲು ಹಾಗೂ ಎದೆ ಭಾಗಕ್ಕೆ ತೀವ್ರ ಗಾಯವಾಗಿದ್ದು ಕಡೂರು ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಎಡ ಗಾಲು ಸಂಪೂರ್ಣ ಹಾನಿ ಆಗಿದೆ ಎಂದು ಹೇಳಿದ್ದಾರೆ.

ತಂಗಲಿ ಗ್ರಾಮ ಪಂಚಾಯಿತಿಯಲ್ಲಿ ಅನುಮತಿ ಪಡೆಯದೇ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದಾರೆ ಎಂದು ಸ್ಥಳಿಯರು ಆರೋಪಿಸಿದ್ದಾರೆ. ಈ ಬಗ್ಗೆ ಇಂದು ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಪೊಲೀಸ್​ ಅಧಿಕಾರಿ ಪ್ರತಿಕ್ರಿಯೆ ನೀಡಿದ್ದು, ಸಿದ್ದನಾಯಕ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಅವರ ಆರೋಗ್ಯ ಸುಧಾರಿಸಿದ ನಂತರ ಅವರ ಬಳಿ ಮಾಹಿತಿ ಪಡೆದು ಮುಂದಿನ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರತ್ಯೇಕ ಘಟನೆ, ಚಾರ್ಮಾಡಿ ರಸ್ತೆಯಲ್ಲಿ ಅಪಘಾತ: ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ನಿಂತಿದ್ದ ಮಿನಿ ಗೂಡ್ಸ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದಿರುವ ಘಟನೆ ಇಂದು ನಡೆದಿದೆ. ಲಾರಿ ಡಿಕ್ಕಿಯ ರಭಸಕ್ಕೆ ಮಿನಿ ಗೂಡ್ಸ್ ವಾಹನ ಪಲ್ಟಿಯಾಗಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಲಾರಿ ಚಾಲಕನ ಅತಿ ವೇಗವೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಗೂಡ್ಸ್​ ವಾಹನಕ್ಕೆ ಡಿಕ್ಕಿ ಹೊಡೆದ ಕ್ಯಾಂಟರ್​
ಗೂಡ್ಸ್​ ವಾಹನಕ್ಕೆ ಡಿಕ್ಕಿ ಹೊಡೆದ ಕ್ಯಾಂಟರ್​

ಬೆಂಗಳೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಕೊರಿಯರ್ ಲಾರಿಯಿಂದ ಅವಘಡ ಜರುಗಿದೆ. ಅದೃಷ್ಟವಶಾತ್ ಗೂಡ್ಸ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಕೂಡಲೇ ಆತನನ್ನು ಸ್ಥಳೀಯರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಘಟನಾ ಸ್ಥಳಕ್ಕೆ ಬಣಕಲ್ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಚಾಕೊಲೆಟ್​ ತರಲು ಹೋಗಿ ಬೈಕ್‌ನಿಂದ ಬಿದ್ದು ಗರ್ಭಿಣಿ ಸಾವು: ಶವದ ಬಳಿ ರಾತ್ರಿ ಕಳೆದ ಮಗ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.