ಚಿಕ್ಕಮಗಳೂರು : ತಮಗೆ ಕೊರೊನಾ ಸೋಂಕು ತಗುಲಿದೆ. ಅದು ತನ್ನ ಮನೆಯವರಿಗೆ ಹರಡುತ್ತದೆ ಎಂದುಕೊಂಡು ನಿವೃತ್ತ ಉಪ ತಹಶೀಲ್ದಾರ್ವೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಬೇಲೇನಹಳ್ಳಿ ತಾಂಡ್ಯದಲ್ಲಿ ನಡೆದಿದೆ.
ನಿವೃತ್ತ ಉಪ ತಹಶೀಲ್ದಾರ್ ಸೋಮನಾಯಕ್ ಮೃತರು. ಡೆತ್ ನೋಟ್ ಬರೆದಿಟ್ಟು ತೋಟದಲ್ಲಿ ಗನ್ನಿಂದ ಶೂಟ್ ಮಾಡಿಕೊಂಡು ಸೂಸೈಡ್ ಮಾಡಿಕೊಂಡಿದ್ದಾರೆ.
ಸೋಮನಾಯಕ್ ಕಾರಿನಲ್ಲೇ ಕುಳಿತು ತಲೆಗೆ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ತರೀಕೆರೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.