ETV Bharat / state

ವಿದ್ಯಾರ್ಥಿನಿ ಸಾವು ಖಂಡಿಸಿ ಮೂಡಿಗೆರೆಯಲ್ಲಿ ಎಬಿವಿಪಿ ಪ್ರತಿಭಟನೆ - ವಿದ್ಯಾರ್ಥಿನಿ ಸಾವು ಖಂಡಿಸಿ ಎಬಿವಿಪಿ ಪ್ರತಿಭಟನೆ

ನಗರದ ಡಿಎಸ್​ಬಿಜಿ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ರಶ್ಮಿ (19) ವರ್ಷ, ಜನವರಿ 4ರಂದು ಕಾಲೇಜು ಮುಗಿಸಿಕೊಂಡು ಮನೆಗೆ ಹೋಗುವ ವೇಳೆ ಚೇತನ್ ಎಂಬಾತ ತನ್ನ ಆಟೋದಲ್ಲಿ ಹತ್ತಿಸಿಕೊಂಡು ಹೋಗಿ ಪ್ರೀತಿಸುವಂತೆ ಕಿರುಕುಳ ಕೊಟ್ಟಿದ್ದ. ಇದಕ್ಕೆ ರಶ್ಮಿ ಒಪ್ಪದಿದ್ದಾಗ ಆಕೆಯನ್ನು ಆಟೋದಿಂದ ಕೆಳಗೆ ತಳ್ಳಿದ್ದಾನೆ.

ABVP protests at Moodigere
ವಿದ್ಯಾರ್ಥಿನಿ ಸಾವು ಖಂಡಿಸಿ ಮೂಡಿಗೆರೆಯಲ್ಲಿ ಎಬಿವಿಪಿ ಪ್ರತಿಭಟನೆ
author img

By

Published : Feb 5, 2020, 7:18 PM IST

ಚಿಕ್ಕಮಗಳೂರು: ಪ್ರೀತಿ ನಿರಾಕರಿಸಿದ್ದಕ್ಕಾಗಿ ಕಾಲೇಜು ವಿದ್ಯಾರ್ಥಿಯನ್ನು ಆಟೋದಿಂದ ಕೆಳಗೆ ತಳ್ಳಿ ಕೊಲೆ ಮಾಡಿದ ಪ್ರಕರಣವನ್ನು ಖಂಡಿಸಿ ನೂರಾರು ಎಬಿವಿಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಡಿಎಸ್​ಬಿಜಿ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ರಶ್ಮಿ (19) ವರ್ಷ, ಜನವರಿ 4ರಂದು ಕಾಲೇಜು ಮುಗಿಸಿಕೊಂಡು ಮನೆಗೆ ಹೋಗುವ ವೇಳೆ ಚೇತನ್ ಎಂಬಾತ ತನ್ನ ಆಟೋದಲ್ಲಿ ಹತ್ತಿಸಿಕೊಂಡು ಹೋಗಿ ಪ್ರೀತಿಸುವಂತೆ ಕಿರುಕುಳ ಕೊಟ್ಟಿದ್ದ. ಇದಕ್ಕೆ ರಶ್ಮಿ ಒಪ್ಪದಿದ್ದಾಗ ಆಕೆಯನ್ನು ಆಟೋದಿಂದ ಕೆಳಗೆ ತಳ್ಳಿದ್ದಾನೆ. ಗಂಭೀರ ಗಾಯಗೊಂಡಿದ್ದ ಯುವತಿಯನ್ನು ತಕ್ಷಣ ಹಾಸನದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ಮಾರ್ಗ ಮಧ್ಯೆ ರಶ್ಮಿ ಕೊನೆಯುಸಿರೆಳೆದಿದ್ದಾಳೆ. ಈ ಬಗ್ಗೆ ಆಟೋ ಚಾಲಕ ಚೇತನ್​ ವಿರುದ್ಧ ಸಂಬಂಧಿಕರು ಪೊಲೀಸರಿಗೆ ದೂರು ನೀಡಿ ನ್ಯಾಯಕ್ಕಾಗಿ ಒತ್ತಾಯಸಿದ್ದಾರೆ.

ವಿದ್ಯಾರ್ಥಿನಿ ಸಾವು ಖಂಡಿಸಿ ಮೂಡಿಗೆರೆಯಲ್ಲಿ ಎಬಿವಿಪಿ ಪ್ರತಿಭಟನೆ

ರಶ್ಮಿ ಸಾವಿನ ಹಿನ್ನಲೆ ಇಂದು ನೂರಾರು ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಮೂಡಿಗೆರೆಯಲ್ಲಿ ಪ್ರತಿಭಟನೆ ನಡೆಸಿದರು. ಮೃತ ರಶ್ಮಿ ಭಾವ ಚಿತ್ರ ಹಿಡಿದು ನಗರದ ಎಂಜಿಎಂ ಆಸ್ವತ್ರೆಯಿಂದ ತಹಶೀಲ್ಡಾರ್ ಕಚೇರಿಯ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ವಿದ್ಯಾರ್ಥಿನಿ ರಶ್ಮಿ ಸಾವಿಗೆ ಕಾರಣವಾಗಿರುವ ಆರೋಪಿ ಚೇತನ್​ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ತಹಶೀಲ್ಡಾರ್​ಗೆ ಮನವಿ ಸಲ್ಲಿಸಿದರು.

ಚಿಕ್ಕಮಗಳೂರು: ಪ್ರೀತಿ ನಿರಾಕರಿಸಿದ್ದಕ್ಕಾಗಿ ಕಾಲೇಜು ವಿದ್ಯಾರ್ಥಿಯನ್ನು ಆಟೋದಿಂದ ಕೆಳಗೆ ತಳ್ಳಿ ಕೊಲೆ ಮಾಡಿದ ಪ್ರಕರಣವನ್ನು ಖಂಡಿಸಿ ನೂರಾರು ಎಬಿವಿಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಡಿಎಸ್​ಬಿಜಿ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ರಶ್ಮಿ (19) ವರ್ಷ, ಜನವರಿ 4ರಂದು ಕಾಲೇಜು ಮುಗಿಸಿಕೊಂಡು ಮನೆಗೆ ಹೋಗುವ ವೇಳೆ ಚೇತನ್ ಎಂಬಾತ ತನ್ನ ಆಟೋದಲ್ಲಿ ಹತ್ತಿಸಿಕೊಂಡು ಹೋಗಿ ಪ್ರೀತಿಸುವಂತೆ ಕಿರುಕುಳ ಕೊಟ್ಟಿದ್ದ. ಇದಕ್ಕೆ ರಶ್ಮಿ ಒಪ್ಪದಿದ್ದಾಗ ಆಕೆಯನ್ನು ಆಟೋದಿಂದ ಕೆಳಗೆ ತಳ್ಳಿದ್ದಾನೆ. ಗಂಭೀರ ಗಾಯಗೊಂಡಿದ್ದ ಯುವತಿಯನ್ನು ತಕ್ಷಣ ಹಾಸನದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ಮಾರ್ಗ ಮಧ್ಯೆ ರಶ್ಮಿ ಕೊನೆಯುಸಿರೆಳೆದಿದ್ದಾಳೆ. ಈ ಬಗ್ಗೆ ಆಟೋ ಚಾಲಕ ಚೇತನ್​ ವಿರುದ್ಧ ಸಂಬಂಧಿಕರು ಪೊಲೀಸರಿಗೆ ದೂರು ನೀಡಿ ನ್ಯಾಯಕ್ಕಾಗಿ ಒತ್ತಾಯಸಿದ್ದಾರೆ.

ವಿದ್ಯಾರ್ಥಿನಿ ಸಾವು ಖಂಡಿಸಿ ಮೂಡಿಗೆರೆಯಲ್ಲಿ ಎಬಿವಿಪಿ ಪ್ರತಿಭಟನೆ

ರಶ್ಮಿ ಸಾವಿನ ಹಿನ್ನಲೆ ಇಂದು ನೂರಾರು ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಮೂಡಿಗೆರೆಯಲ್ಲಿ ಪ್ರತಿಭಟನೆ ನಡೆಸಿದರು. ಮೃತ ರಶ್ಮಿ ಭಾವ ಚಿತ್ರ ಹಿಡಿದು ನಗರದ ಎಂಜಿಎಂ ಆಸ್ವತ್ರೆಯಿಂದ ತಹಶೀಲ್ಡಾರ್ ಕಚೇರಿಯ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ವಿದ್ಯಾರ್ಥಿನಿ ರಶ್ಮಿ ಸಾವಿಗೆ ಕಾರಣವಾಗಿರುವ ಆರೋಪಿ ಚೇತನ್​ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ತಹಶೀಲ್ಡಾರ್​ಗೆ ಮನವಿ ಸಲ್ಲಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.