ಚಿಕ್ಕಮಗಳೂರು: ಬೈಕ್ ಮತ್ತು ಕಾರು ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ನೀರ್ಗಂಡಿ ಗ್ರಾಮದಲ್ಲಿ ನಡೆದಿದೆ.
ಸಂತೋಷ್ (55) ಮೃತ ದುರ್ದೈವಿ. ಮತ್ತೊಬ್ಬ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಲ್ಲಿ ಕಾರು ಮತ್ತು ಬೈಕ್ ಸಂಪೂರ್ಣ ಜಖಂ ಆಗಿವೆ. ಬಣಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.