ಚಿಕ್ಕಮಗಳೂರು: ಬೈಕ್ನ ಮಾಸ್ಕ್ ಮೇಲೆ ಇದ್ದ ಶಿವಾಜಿ ಭಾವಚಿತ್ರಕ್ಕೆ ಅಸ್ಸಾಂ ಮೂಲದ ಯುವಕನೊಬ್ಬ ಅವಮಾನ ಮಾಡಿದ್ದಾನೆ ಎಂದು ಆರೋಪಿಸಿ ಆತನನ್ನು ಹಿಡಿದು ಥಳಿಸಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ತಲಗಾರು ಗ್ರಾಮದಲ್ಲಿ ನಡೆದಿದೆ.
ಕಾಫಿ ತೋಟದ ಕೆಲಸಕ್ಕೆ ಬಂದಿರುವ ಅಸ್ಸಾಂ ಯುವಕ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಶಿವಾಜಿ ಭಾವಚಿತ್ರಕ್ಕೆ ಅವಮಾನ ಮಾಡುತ್ತಿರುವುದನ್ನು ಗಮನಿಸಿದ ಸ್ಥಳೀಯ ಯುವಕರು, ಅಸ್ಸಾಂ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅಷ್ಟೇ ಅಲ್ಲದೆ ಶಿವಾಜಿ ಭಾವಚಿತ್ರಕ್ಕೆ ನಮಸ್ಕಾರ ಮಾಡಿಸಿ, ಮಂದೆ ಇಂತಹ ತಪ್ಪು ನಡೆಯದಂತೆ ಎಚ್ಚರಿಕೆ ವಹಿಸು ಎಂದು ಹೇಳಿ ಕಳಿಸಿದ್ದಾರೆ.