ETV Bharat / state

ಶೋಭಾ ಕರಂದ್ಲಾಜೆ ಮೇಲೆ ಹಲ್ಲೆಗೆ ಯತ್ನ ಆರೋಪ: ಎಸ್​ಪಿಗೆ ಬಿಜೆಪಿ ದೂರು - ಚಿಕ್ಕಮಗಳೂರಿನಲ್ಲಿ ಶೋಭಾ ಕರಂದ್ಲಾಜೆ ಮೇಲೆ ಹಲ್ಲೆ

ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಎದುರು ಶೋಭಾ ಕರಂದ್ಲಾಜೆ ಮೇಲೆ ಕಾಂಗ್ರೆಸ್​ ಮುಖಂಡರು ಹಲ್ಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.

Attempt to attack MP Shobha Karandlaje in chikkamagaluru
ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗೆ ಮನವಿ
author img

By

Published : Jan 8, 2020, 8:47 AM IST

ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿ ಮುಂಭಾಗದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಮನವಿ ಕೊಡುವ ನೆಪದಲ್ಲಿ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕರು ಜಿಲ್ಲಾ ಎಸ್ಪಿಗೆ ದೂರು ನೀಡಿದ್ದಾರೆ.

Attempt to attack MP Shobha Karandlaje in chikkamagaluru
ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗೆ ದೂರು

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಸಭೆ ನಡೆಸಲು ಸಂಸದೆ ಶೋಭಾ ಕರಂದ್ಲಾಜೆ ಅವರು ತೆರಳುವ ವೇಳೆ ಜಿಲ್ಲಾ ಪಂಚಾಯಿತಿ ಎದುರು ಜಮಾಯಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಹಲ್ಲೆಗೆ ಯತ್ನಿಸಿದ್ದಾರೆ ಎಂದು ದೂರಿದ್ದಾರೆ.

ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯಿತ್ರಿ ಶಾಂತೇಗೌಡ, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಎಲ್.ಮೂರ್ತಿ, ನಗರಸಭಾ ಮಾಜಿ ಸದಸ್ಯ ಸಂದೀಪ್, ಪವನ್ ಕುಮಾರ್, ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ ಸೇರಿದಂತೆ ಇತರರನ್ನು ಬಂಧಿಸಬೇಕು. ಸೂಕ್ತ ಭದ್ರತೆ ನೀಡಲು ವಿಫಲರಾದ ಪೊಲೀಸ್​ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿ ಮುಂಭಾಗದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಮನವಿ ಕೊಡುವ ನೆಪದಲ್ಲಿ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕರು ಜಿಲ್ಲಾ ಎಸ್ಪಿಗೆ ದೂರು ನೀಡಿದ್ದಾರೆ.

Attempt to attack MP Shobha Karandlaje in chikkamagaluru
ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗೆ ದೂರು

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಸಭೆ ನಡೆಸಲು ಸಂಸದೆ ಶೋಭಾ ಕರಂದ್ಲಾಜೆ ಅವರು ತೆರಳುವ ವೇಳೆ ಜಿಲ್ಲಾ ಪಂಚಾಯಿತಿ ಎದುರು ಜಮಾಯಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಹಲ್ಲೆಗೆ ಯತ್ನಿಸಿದ್ದಾರೆ ಎಂದು ದೂರಿದ್ದಾರೆ.

ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯಿತ್ರಿ ಶಾಂತೇಗೌಡ, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಎಲ್.ಮೂರ್ತಿ, ನಗರಸಭಾ ಮಾಜಿ ಸದಸ್ಯ ಸಂದೀಪ್, ಪವನ್ ಕುಮಾರ್, ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ ಸೇರಿದಂತೆ ಇತರರನ್ನು ಬಂಧಿಸಬೇಕು. ಸೂಕ್ತ ಭದ್ರತೆ ನೀಡಲು ವಿಫಲರಾದ ಪೊಲೀಸ್​ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Intro:Kn_Ckm_06_Bjp_Complint_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರಿನ ಜಿಲ್ಲಾ ಪಂಚಾಯತ್ ಮುಂಭಾಗದಲ್ಲಿ ಕಾಂಗ್ರೇಸ್ ಮುಖಂಡರು ಹಾಗೂ ಕಾರ್ಯಕರ್ತರು ಸಂಸದೆ ಶೋಭ ಕರಂದ್ಲಾಜ್ಞೆ ಅವರಿಗೆ ಮನವಿ ಕೊಡುವ ನೆಪದಲ್ಲಿ ಹಲ್ಲೆಗೆ ಮುಂದಾಗಿದ್ದಾರೆ ಎಂದೂ ಆರೋಪ ಮಾಡಿ ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮರುಡಪ್ಪ ಜಿಲ್ಲಾ ಎಸ್ವಿಗೆ ದೂರು ನೀಡಿದ್ದಾರೆ.ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಸಭೆ ನಡೆಸಲು ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭ ಕರಂದ್ಲಾಜ್ಞೆ ಅವರು ಹೋಗುವ ವೇಳೆ ಜಿಲ್ಲಾ ಪಂಚಾಯತ್ ಮುಂಭಾಗದಲ್ಲಿ ಜಮಾಯಿಸಿದ್ದ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರಾದ ಮಾಜಿ ವಿಧಾನ ಪರಿಷತ್ ಸದಸ್ಯೆ ಗಾಯಿತ್ರಿ ಶಾಂತೇಗೌಡ,ಮಾಜಿ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಎಂ ಎಲ್ ಮೂರ್ತಿ,ಮಾಜಿ ನಗರಸಭಾ ಸದಸ್ಯ ಸಂದೀಪ್, ಪವನ್ ಕುಮಾರ್, ಜಿಲ್ಲಾ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಮಂಜೇಗೌಡ, ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಅಂಶುಮಾನ್ ಇವರ ನೇತೃತ್ವದ ಪ್ರತಿಭಟನಾ ತಂಡ ಸಂಸದೆ ಶೋಭ ಕರಂದ್ಲಾಜ್ಞೆ ಅವರಿಗೆ ಮನವಿ ಸಲ್ಲಿಸುವ ನೆಪದಲ್ಲಿ ಹಲ್ಲೆ ಮಾಡಿದ್ದು ಇವರು ವಿರುದ್ದ ದೂರು ದಾಖಲಿಸಿಕೊಂಡು ಕೂಡಲೇ ಬಂಧಿಸಬೇಕು ಹಾಗೂ ಜಿಲ್ಲಾ ಪಂಚಾಯತ್ ಮುಂಭಾಗದಲ್ಲಿ ಕರ್ತವ್ಯ ನಿರ್ವಹಿಸಲು ವಿಫಲರಾಗಿರುವ ಪೋಲಿಸ್ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡು ಅಮಾನತ್ತು ಮಾಡಬೇಕು ಎಂದೂ ಆಗ್ರಹಿಸಿ ಬಿಜೆಪಿ ಮುಖಂಡರು ಜಿಲ್ಲಾ ಎಸ್ವಿ ಹರೀಶ್ ಪಾಂಡೇ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.....

Conclusion:ರಾಜಕುಮಾರ್....
ಈ ಟಿವಿ ಭಾರತ್....
ಚಿಕ್ಕಮಗಳೂರು.....

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.