ಚಿಕ್ಕಮಗಳೂರು: ಚರಂಡಿ ನೀರು ಬಾವಿಗೆ ಸೇರುತ್ತಿರುವ ಬಗ್ಗೆ ಪರಿಶೀಲನೆ ನಡೆಸಲು ತಾಲೂಕು ಪಂಚಾಯತ್ನ ಇಒ ಸ್ಥಳಕ್ಕೆ ಹೋದಾಗ, ಸ್ಥಳೀಯ ನಿವಾಸಿಗಳು ಅವರ ಮೇಲೆ ದಬ್ಬಾಳಿಕೆ ನಡೆಸಿ, ಹಲ್ಲೆಗೆ ಯತ್ನ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಇಒ ನವೀನ್ ಕುಮಾರ್ ಅವರಿಗೆ ಈ ಬಗ್ಗೆ ದೂರು ಬಂದ ಹಿನ್ನೆಲೆ ಕಾರಿನಲ್ಲಿ ಪರಿಶೀಲನೆಗಾಗಿ ಹೋಗುತ್ತಿದ್ದರು. ಇವರು ಗ್ರಾಮದ ಸಮೀಪಕ್ಕೆ ಹೋಗುತ್ತಿದ್ದಂತೆ ಕೆಲವರು ಕಾರನ್ನು ತಡೆದು, ಕಾರಿನ ಕೀ ಕಿತ್ತುಕೊಂಡು ಹಲ್ಲೆಗೆ ಮುಂದಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ತಮ್ಮನ್ನು ತಳ್ಳಾಡಿದ್ದಲ್ಲದೇ ಏಕ ವಚನದಲ್ಲಿ ಕೆಲ ಸ್ಥಳೀಯರು ಮಾತನಾಡಿದ್ದಾರೆ ಎಂದು ನವೀನ್ ಕುಮಾರ್ ಆರೋಪ ಮಾಡಿದ್ದಾರೆ. ಘಟನೆ ಸಂಬಂಧ ಹರಿಹರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.