ETV Bharat / state

ಚಿಕ್ಕಮಗಳೂರು: ಬ್ಯಾಂಕ್​ನಲ್ಲಿ ಅಡವಿಟ್ಟ ಅಸಲಿ ಚಿನ್ನದ ಜಾಗದಲ್ಲಿ ನಕಲಿ ಬಂಗಾರ, ಗ್ರಾಹಕರಿಗೆ ಮಹಾ ವಂಚನೆ

author img

By ETV Bharat Karnataka Team

Published : Dec 2, 2023, 7:44 AM IST

Updated : Dec 2, 2023, 1:41 PM IST

ಬ್ಯಾಂಕ್ ಸಿಬ್ಬಂದಿಯಿಂಲೇ ಗ್ರಾಹಕರಿಗೆ ಮೋಸವಾಗಿರುವ ಕುರಿತು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Bank staff cheated customers
ಬ್ಯಾಂಕ್ ಸಿಬ್ಬಂದಿಯಿಂಲೇ ಗ್ರಾಹಕರಿಗೆ ಮೋಸ, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಚಿಕ್ಕಮಗಳೂರು: ಬ್ಯಾಂಕ್ ಸಿಬ್ಬಂದಿಯಿಂದಲೇ ಗ್ರಾಹಕರಿಗೆ ಕೋಟ್ಯಂತರ ರೂಪಾಯಿ ವಂಚಿಸಿರುವ ಘಟನೆ ಚಿಕ್ಕಮಗಳೂರು ನಗರದ ಐ.ಜಿ. ರಸ್ತೆಯಲ್ಲಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ನಡೆದಿದೆ. 6 ಕೋಟಿಗೂ ಅಧಿಕ ಹಣ ದುರುಪಯೋಗದ ಆರೋಪ ಕೇಳಿ ಬಂದಿದೆ. ಬ್ಯಾಂಕ್ ಮ್ಯಾನೇಜರ್ ಸಂದೀಪ್ ಕೊಲ್ಲೂರಿ, ಪ್ರಶಾಂತ್, ನಾರಾಯಣಸ್ವಾಮಿ, ಲಾವಣ್ಯ, ಶ್ವೇತಾ ವಿರುದ್ಧ ದೂರು ದಾಖಲಾಗಿದೆ.

ಗ್ರಾಹಕರು ಬ್ಯಾಂಕ್‌ನಲ್ಲಿಟ್ಟಿದ್ದ ಚಿನ್ನ, ಎಫ್​ಡಿ ಹಣವನ್ನು ಬ್ಯಾಂಕ್ ಸಿಬ್ಬಂದಿ ದುರುಪಯೋಗ ಪಡಿಸಿಕೊಂಡಿದ್ದಾರೆ. ಆರೋಪಿಗಳು ಗ್ರಾಹಕರ ಅಸಲಿ ಚಿನ್ನವನ್ನು ಮಾರಾಟ ಮಾಡಿ ನಕಲಿ‌ ಚಿನ್ನವನ್ನು ಬ್ಯಾಂಕ್ ಲಾಕರ್​ನಲ್ಲಿ ಇಟ್ಟಿದ್ದಾರೆ. ಬೆಂಗಳೂರು ಮುಖ್ಯ ಶಾಖೆ ಅಧಿಕಾರಿಗಳ ಪರಿಶೀಲನೆ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. 141 ಚಿನ್ನದ ಪ್ಯಾಕೆಟ್​ಗಳ ಪೈಕಿ 140 ಪ್ಯಾಕೆಟ್​ಗಳಲ್ಲಿ ನಕಲಿ ಚಿನ್ನ ಪತ್ತೆಯಾಗಿವೆ. ಬ್ಯಾಂಕ್ ಆಡಿಟ್​​ ವೇಳೆ ಕೋಟ್ಯಂತರ ರೂ. ವಂಚನೆ ಮಾಡಿರುವುದು ತಿಳಿದುಬಂದಿದೆ.

ಅಸಲಿ ಚಿನ್ನವನ್ನು ಬೇರೆಡೆ ಅಡ ಇಟ್ಟು ಐವರು ಬ್ಯಾಂಕಿನ ಸಿಬ್ಬಂದಿ ಸಾಲ ಪಡೆದಿದ್ದಾರೆ. ಬ್ಯಾಂಕ್​​ನ ಬೆಂಗಳೂರು ಕಚೇರಿಯ ಹಿರಿಯ ಅಧಿಕಾರಿಗಳು ಶಾಖೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ವಂಚನೆ ಪ್ರಕರಣ ಬಯಲಾಗಿದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಬೆಂಗಳೂರು ಶಾಖೆಯ ವ್ಯವಸ್ಥಾಪಕರು ಆರೋಪಿಗಳ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬ್ಯಾಂಕ್​ನಲ್ಲಿ ನಡೆದಿದ್ದೇನು? ಗ್ರಾಹಕ ಮಲ್ಲಿಕಾರ್ಜುನ ಎಂಬುವರು 2017ರಲ್ಲಿ 13 ಲಕ್ಷ ರೂಪಾಯಿ ಬೆಲೆ ಬಾಳುವ ಚಿನ್ನ ಅಡವಿಟ್ಟು ಕೇವಲ 2 ಲಕ್ಷ ರೂ. ಸಾಲ ಪಡೆದಿದ್ದರು. ಅಂದಿನಿಂದ ಪ್ರತಿ ವರ್ಷ ಬ್ಯಾಂಕ್​ಗೆ ಬಂದು ಬಡ್ಡಿ ಕಟ್ಟುತ್ತಿದ್ದರು. ಸಾಲದ ವಿಚಾರಕ್ಕೆ ಸಂಬಂಧಿಸಿದಂತೆ ಮುಂಬೈ ಕೇಂದ್ರ ಕಚೇರಿಯಿಂದ ದೂರವಾಣಿ ಕರೆಬರುವುದು ನಿಂತಿದೆ. ಇದರಿಂದ ಬ್ಯಾಂಕ್​ನಿಂದ ಚಿನ್ನ ಬಿಡಿಸಿಕೊಳ್ಳಲು ಹೋದಾಗ ನಿಮ್ಮ ಸಾಲವನ್ನೇ ಕ್ಲೋಸ್ ಮಾಡಲಾಗಿದೆ ಎಂದು ಬ್ಯಾಂಕ್​ ಸಿಬ್ಬಂದಿ ತಿಳಿಸಿದ್ದಾರೆ. ಇದರಿಂದ ಗ್ರಾಹಕ ಮಲ್ಲಿಕಾರ್ಜುನ ಅವರು ಶಾಕ್ ಆಗಿದ್ದಾರೆ. ಅಡವಿಟ್ಟಿರುವ ಅಸಲಿ ಚಿನ್ನದ ಬದಲಾಗಿ, ನಕಲಿ ಚಿನ್ನ ಇಟ್ಟಿರುವುದು ತಿಳಿದಿದೆ. ಇದರ ಜೊತೆಗೆ ಹಲವು ಪ್ರಕರಣಗಳು ಬೆಳಕಿಗೆ ಬರುತ್ತಿದ್ದಂತೆ ಬೆಂಗಳೂರು ಶಾಖೆಯ ಬ್ಯಾಂಕ್​ ಹಿರಿಯ ಅಧಿಕಾರಿಗಳು ನಗರ ಠಾಣೆಯಲ್ಲಿ ದೂರು ಕೊಟ್ಟಿದ್ದಾರೆ. ಎಫ್​ಐಆರ್ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಇದನ್ನೂ ಓದಿ: ಪಂಜಾಬ್​ ನ್ಯಾಷನಲ್​ ಬ್ಯಾಂಕ್​ ದರೋಡೆ: ಬಂದೂಕು ತೋರಿಸಿ 19 ಕೋಟಿ ದೋಚಿ ಪರಾರಿಯಾದ ಖದೀಮರು

ಚಿಕ್ಕಮಗಳೂರು: ಬ್ಯಾಂಕ್ ಸಿಬ್ಬಂದಿಯಿಂದಲೇ ಗ್ರಾಹಕರಿಗೆ ಕೋಟ್ಯಂತರ ರೂಪಾಯಿ ವಂಚಿಸಿರುವ ಘಟನೆ ಚಿಕ್ಕಮಗಳೂರು ನಗರದ ಐ.ಜಿ. ರಸ್ತೆಯಲ್ಲಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ನಡೆದಿದೆ. 6 ಕೋಟಿಗೂ ಅಧಿಕ ಹಣ ದುರುಪಯೋಗದ ಆರೋಪ ಕೇಳಿ ಬಂದಿದೆ. ಬ್ಯಾಂಕ್ ಮ್ಯಾನೇಜರ್ ಸಂದೀಪ್ ಕೊಲ್ಲೂರಿ, ಪ್ರಶಾಂತ್, ನಾರಾಯಣಸ್ವಾಮಿ, ಲಾವಣ್ಯ, ಶ್ವೇತಾ ವಿರುದ್ಧ ದೂರು ದಾಖಲಾಗಿದೆ.

ಗ್ರಾಹಕರು ಬ್ಯಾಂಕ್‌ನಲ್ಲಿಟ್ಟಿದ್ದ ಚಿನ್ನ, ಎಫ್​ಡಿ ಹಣವನ್ನು ಬ್ಯಾಂಕ್ ಸಿಬ್ಬಂದಿ ದುರುಪಯೋಗ ಪಡಿಸಿಕೊಂಡಿದ್ದಾರೆ. ಆರೋಪಿಗಳು ಗ್ರಾಹಕರ ಅಸಲಿ ಚಿನ್ನವನ್ನು ಮಾರಾಟ ಮಾಡಿ ನಕಲಿ‌ ಚಿನ್ನವನ್ನು ಬ್ಯಾಂಕ್ ಲಾಕರ್​ನಲ್ಲಿ ಇಟ್ಟಿದ್ದಾರೆ. ಬೆಂಗಳೂರು ಮುಖ್ಯ ಶಾಖೆ ಅಧಿಕಾರಿಗಳ ಪರಿಶೀಲನೆ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. 141 ಚಿನ್ನದ ಪ್ಯಾಕೆಟ್​ಗಳ ಪೈಕಿ 140 ಪ್ಯಾಕೆಟ್​ಗಳಲ್ಲಿ ನಕಲಿ ಚಿನ್ನ ಪತ್ತೆಯಾಗಿವೆ. ಬ್ಯಾಂಕ್ ಆಡಿಟ್​​ ವೇಳೆ ಕೋಟ್ಯಂತರ ರೂ. ವಂಚನೆ ಮಾಡಿರುವುದು ತಿಳಿದುಬಂದಿದೆ.

ಅಸಲಿ ಚಿನ್ನವನ್ನು ಬೇರೆಡೆ ಅಡ ಇಟ್ಟು ಐವರು ಬ್ಯಾಂಕಿನ ಸಿಬ್ಬಂದಿ ಸಾಲ ಪಡೆದಿದ್ದಾರೆ. ಬ್ಯಾಂಕ್​​ನ ಬೆಂಗಳೂರು ಕಚೇರಿಯ ಹಿರಿಯ ಅಧಿಕಾರಿಗಳು ಶಾಖೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ವಂಚನೆ ಪ್ರಕರಣ ಬಯಲಾಗಿದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಬೆಂಗಳೂರು ಶಾಖೆಯ ವ್ಯವಸ್ಥಾಪಕರು ಆರೋಪಿಗಳ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬ್ಯಾಂಕ್​ನಲ್ಲಿ ನಡೆದಿದ್ದೇನು? ಗ್ರಾಹಕ ಮಲ್ಲಿಕಾರ್ಜುನ ಎಂಬುವರು 2017ರಲ್ಲಿ 13 ಲಕ್ಷ ರೂಪಾಯಿ ಬೆಲೆ ಬಾಳುವ ಚಿನ್ನ ಅಡವಿಟ್ಟು ಕೇವಲ 2 ಲಕ್ಷ ರೂ. ಸಾಲ ಪಡೆದಿದ್ದರು. ಅಂದಿನಿಂದ ಪ್ರತಿ ವರ್ಷ ಬ್ಯಾಂಕ್​ಗೆ ಬಂದು ಬಡ್ಡಿ ಕಟ್ಟುತ್ತಿದ್ದರು. ಸಾಲದ ವಿಚಾರಕ್ಕೆ ಸಂಬಂಧಿಸಿದಂತೆ ಮುಂಬೈ ಕೇಂದ್ರ ಕಚೇರಿಯಿಂದ ದೂರವಾಣಿ ಕರೆಬರುವುದು ನಿಂತಿದೆ. ಇದರಿಂದ ಬ್ಯಾಂಕ್​ನಿಂದ ಚಿನ್ನ ಬಿಡಿಸಿಕೊಳ್ಳಲು ಹೋದಾಗ ನಿಮ್ಮ ಸಾಲವನ್ನೇ ಕ್ಲೋಸ್ ಮಾಡಲಾಗಿದೆ ಎಂದು ಬ್ಯಾಂಕ್​ ಸಿಬ್ಬಂದಿ ತಿಳಿಸಿದ್ದಾರೆ. ಇದರಿಂದ ಗ್ರಾಹಕ ಮಲ್ಲಿಕಾರ್ಜುನ ಅವರು ಶಾಕ್ ಆಗಿದ್ದಾರೆ. ಅಡವಿಟ್ಟಿರುವ ಅಸಲಿ ಚಿನ್ನದ ಬದಲಾಗಿ, ನಕಲಿ ಚಿನ್ನ ಇಟ್ಟಿರುವುದು ತಿಳಿದಿದೆ. ಇದರ ಜೊತೆಗೆ ಹಲವು ಪ್ರಕರಣಗಳು ಬೆಳಕಿಗೆ ಬರುತ್ತಿದ್ದಂತೆ ಬೆಂಗಳೂರು ಶಾಖೆಯ ಬ್ಯಾಂಕ್​ ಹಿರಿಯ ಅಧಿಕಾರಿಗಳು ನಗರ ಠಾಣೆಯಲ್ಲಿ ದೂರು ಕೊಟ್ಟಿದ್ದಾರೆ. ಎಫ್​ಐಆರ್ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಇದನ್ನೂ ಓದಿ: ಪಂಜಾಬ್​ ನ್ಯಾಷನಲ್​ ಬ್ಯಾಂಕ್​ ದರೋಡೆ: ಬಂದೂಕು ತೋರಿಸಿ 19 ಕೋಟಿ ದೋಚಿ ಪರಾರಿಯಾದ ಖದೀಮರು

Last Updated : Dec 2, 2023, 1:41 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.