ETV Bharat / state

ಶಿಕ್ಷಕನ ಮತ್ತೊಂದು ಶಾಲೆಗೆ ನಿಯೋಜಿಸಲು ಲಂಚ; ಲೋಕಾಯುಕ್ತ ಬಲೆಗೆ ಬಿದ್ದ ಕಡೂರು ಬಿಇಓ

author img

By

Published : Oct 19, 2022, 8:32 PM IST

Updated : Oct 19, 2022, 10:28 PM IST

ಕಡೂರು ತಾಲೂಕಿನ ಜಿ ತಿಮ್ಮಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿಯೋಜನೆಯ ಮೇರೆಗೆ ಶಿಕ್ಷಕರಾಗಿದ್ದ ರಾಜಪ್ಪ ಅವರನ್ನು ಗರ್ಜೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವರ್ಗಾವಣೆ ಮಾಡಲು ಬಿಇಓ 15 ಸಾವಿರ ರೂ. ಲಂಚ ಕೇಳಿದ್ದರಂತೆ.

ಜಿ ತಿಮ್ಮಾಪುರ
ಜಿ ತಿಮ್ಮಾಪುರ

ಚಿಕ್ಕಮಗಳೂರು: ಒಂದು ಶಾಲೆಯ ಶಿಕ್ಷಕನನ್ನು ಮತ್ತೊಂದು ಶಾಲೆಗೆ ನಿಯೋಜನೆ ಮಾಡಲು 15 ಸಾವಿರ ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಿಲ್ಲೆಯ ಕಡೂರು ತಾಲೂಕಿನ ಬಿಇಓ ಕೆ ಎನ್ ರಾಜಣ್ಣ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಜಿ ತಿಮ್ಮಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿಯೋಜನೆಯ ಮೇರೆಗೆ ಶಿಕ್ಷಕರಾಗಿದ್ದ ರಾಜಪ್ಪ ಅವರನ್ನು ಗರ್ಜೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವರ್ಗಾಯಿಸಲು ಬಿಇಓ ಹಣ ಕೇಳಿದ್ದರು.

ಜಿ ತಿಮ್ಮಾಪುರ ಗೇಟ್ ಬಳಿ ಇಂದು ಮಧ್ಯಾಹ್ನ ಹಣ ಪಡೆಯುವಾಗ ಲೋಕಾಯುಕ್ತ ಡಿವೈಎಸ್​ಪಿ ತಿರುಮಲೇಶ್ ಹಾಗೂ ಸಿಬ್ಬಂದಿ ಆರೋಪಿಯನ್ನು ವಶಕ್ಕೆ ಪಡೆದರು.

ಸಂಜೆವರೆಗೂ ವಿಚಾರಣೆ ನಡೆಸಿದ ಲೋಕಾಯುಕ್ತ ಪೊಲೀಸರು ನಂತರ ಆರೋಪಿ ಅಧಿಕಾರಿಯನ್ನು ನ್ಯಾಯಾಂಗ ಬಂಧನಕ್ಕಾಗಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.

ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಿಲ್ಲಾಧಿಕಾರಿ ಮನೆ ಮೇಲೆ ಇಡಿ ದಾಳಿ

ಚಿಕ್ಕಮಗಳೂರು: ಒಂದು ಶಾಲೆಯ ಶಿಕ್ಷಕನನ್ನು ಮತ್ತೊಂದು ಶಾಲೆಗೆ ನಿಯೋಜನೆ ಮಾಡಲು 15 ಸಾವಿರ ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಿಲ್ಲೆಯ ಕಡೂರು ತಾಲೂಕಿನ ಬಿಇಓ ಕೆ ಎನ್ ರಾಜಣ್ಣ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಜಿ ತಿಮ್ಮಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿಯೋಜನೆಯ ಮೇರೆಗೆ ಶಿಕ್ಷಕರಾಗಿದ್ದ ರಾಜಪ್ಪ ಅವರನ್ನು ಗರ್ಜೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವರ್ಗಾಯಿಸಲು ಬಿಇಓ ಹಣ ಕೇಳಿದ್ದರು.

ಜಿ ತಿಮ್ಮಾಪುರ ಗೇಟ್ ಬಳಿ ಇಂದು ಮಧ್ಯಾಹ್ನ ಹಣ ಪಡೆಯುವಾಗ ಲೋಕಾಯುಕ್ತ ಡಿವೈಎಸ್​ಪಿ ತಿರುಮಲೇಶ್ ಹಾಗೂ ಸಿಬ್ಬಂದಿ ಆರೋಪಿಯನ್ನು ವಶಕ್ಕೆ ಪಡೆದರು.

ಸಂಜೆವರೆಗೂ ವಿಚಾರಣೆ ನಡೆಸಿದ ಲೋಕಾಯುಕ್ತ ಪೊಲೀಸರು ನಂತರ ಆರೋಪಿ ಅಧಿಕಾರಿಯನ್ನು ನ್ಯಾಯಾಂಗ ಬಂಧನಕ್ಕಾಗಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.

ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಿಲ್ಲಾಧಿಕಾರಿ ಮನೆ ಮೇಲೆ ಇಡಿ ದಾಳಿ

Last Updated : Oct 19, 2022, 10:28 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.