ETV Bharat / state

ಯು.ಟಿ.ಖಾದರ್​​ ಬಂಧಿಸುವಂತೆ ಬಿಜೆಪಿ ಮುಖಂಡರಿಂದ ಎಸ್ಪಿಗೆ ಮನವಿ - ಮಂಗಳೂರಿನಲ್ಲಿ ಇಬ್ಬರ ಸಾವಿಗೆ ಕಾರಣ

ಮಂಗಳೂರಿನ ಪ್ರತಿಭಟನೆಯಲ್ಲಿ ಘರ್ಷಣೆಯುಂಟಾಗಿ ಇಬ್ಬರು ಮೃತಪಡಲು ಕಾಂಗ್ರೆಸ್ ಶಾಸಕ ಯು.ಟಿ.ಖಾದರ್​ ಕಾರಣ. ಆದ್ದರಿಂದ ಅವರ​ ಮೇಲೆ ಈ ಕೂಡಲೇ ಕ್ರಿಮಿನಲ್​ ಪ್ರಕರಣ ಹೂಡಿ ಬಂಧಿಸಬೇಕು ಎಂದು ಚಿಕ್ಕಮಗಳೂರು ಬಿಜೆಪಿ ಮುಖಂಡರು ಎಸ್​ಪಿಗೆ ಮನವಿ ಸಲ್ಲಿಸಿದ್ದಾರೆ.

appealing for the arrest of U.T.Khadar
ಯು.ಟಿ.ಖಾದರ್​​ನನ್ನು ಬಂಧಿಸುವಂತೆ ಮನವಿ
author img

By

Published : Dec 20, 2019, 5:36 PM IST

ಚಿಕ್ಕಮಗಳೂರು: ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಿ ಈ ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಚಿಕ್ಕಮಗಳೂರು ಜಿಲ್ಲೆಯ ಬಿಜೆಪಿ ಮುಖಂಡರು ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಹರೀಶ್ ಪಾಂಡೆ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಶಾಸಕ ಯು.ಟಿ.ಖಾದರ್, ಪೌರತ್ವ ಕಾಯ್ದೆ ರಾಜ್ಯದಲ್ಲಿ ಜಾರಿಯಾದರೆ ಇಡೀ ರಾಜ್ಯವೆ ಹೊತ್ತಿ ಉರಿಯಲಿದೆ ಎಂದು ಪ್ರತಿಭಟನೆ ಮಾಡುವ ಸಂದರ್ಭದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಈ ಮೂಲಕ ಮಂಗಳೂರಿನಲ್ಲಿ ಇಬ್ಬರ ಸಾವಿಗೆ ಕಾರಣರಾಗಿದ್ದಾರೆ. ಖಾದರ್ ಅವರು ಉದ್ದೇಶ ಪೂರ್ವಕವಾಗಿ ಈ ಹೇಳಿಕೆ ನೀಡಿದ್ದು, ಅವರ ವಿರುದ್ದ ಐಪಿಸಿ ಸೆಕ್ಷನ್‌ 123ಎ, 153ಎ,153 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಬಂಧಿಸಬೇಕು ಎಂದು ಆಗ್ರಹಿಸಿದರು.

ಚಿಕ್ಕಮಗಳೂರು: ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಿ ಈ ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಚಿಕ್ಕಮಗಳೂರು ಜಿಲ್ಲೆಯ ಬಿಜೆಪಿ ಮುಖಂಡರು ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಹರೀಶ್ ಪಾಂಡೆ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಶಾಸಕ ಯು.ಟಿ.ಖಾದರ್, ಪೌರತ್ವ ಕಾಯ್ದೆ ರಾಜ್ಯದಲ್ಲಿ ಜಾರಿಯಾದರೆ ಇಡೀ ರಾಜ್ಯವೆ ಹೊತ್ತಿ ಉರಿಯಲಿದೆ ಎಂದು ಪ್ರತಿಭಟನೆ ಮಾಡುವ ಸಂದರ್ಭದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಈ ಮೂಲಕ ಮಂಗಳೂರಿನಲ್ಲಿ ಇಬ್ಬರ ಸಾವಿಗೆ ಕಾರಣರಾಗಿದ್ದಾರೆ. ಖಾದರ್ ಅವರು ಉದ್ದೇಶ ಪೂರ್ವಕವಾಗಿ ಈ ಹೇಳಿಕೆ ನೀಡಿದ್ದು, ಅವರ ವಿರುದ್ದ ಐಪಿಸಿ ಸೆಕ್ಷನ್‌ 123ಎ, 153ಎ,153 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಬಂಧಿಸಬೇಕು ಎಂದು ಆಗ್ರಹಿಸಿದರು.

Intro:Kn_Ckm_03_Bjp_manavi_av_7202347Body:ಚಿಕ್ಕಮಗಳೂರು :-

ಶಾಸಕ ಯು ಟಿ ಖಾದರ್ ವಿರುದ್ದ ಕ್ರಿಮಿನಲ್ ಮೊಕದ್ದಮೆ ಹೂಡೆ ಕೂಡಲೇ ಬಂಧನ ಮಾಡಬೇಕು ಎಂದೂ ಆಗ್ರಹಿಸಿ ಚಿಕ್ಕಮಗಳೂರು ಜಿಲ್ಲೆಯ ಬಿಜೆಪಿ ಮುಖಂಡರು ಜಿಲ್ಲಾ ಎಸ್ವಿ ಹರೀಶ್ ಪಾಂಡೇ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.ಶಾಸಕ ಯು ಟಿ ಖಾದರ್ ಪೌರತ್ವ ಕಾಯ್ಡೆ ರಾಜ್ಯದಲ್ಲಿ ಜಾರಿಯಾದರೇ ಕರ್ನಾಟಕ ರಾಜ್ಯ ಹೊತ್ತಿ ಉರಿಯಲಿದೆ ಎಂದೂ ಕಳೆದ ಎರಡೂ ದಿನಗಳ ಹಿಂದೇ ಪ್ರತಿಭಟನೆ ಮಾಡುವ ಸಂದರ್ಭದಲ್ಲಿ ಪ್ರಚೋದನಕಾರಿ ಬಾಷಣ ಮಾಡುವುದರ ಮೂಲಕ ಮಂಗಳೂರಿನಲ್ಲಿ ಇಬ್ಬರೂ ಸಾವಿಗೆ ಕಾರಣಕರ್ತರಾಗಿದ್ದಾರೆ.ಯು ಟಿ ಖಾದರ್ ಅವರು ಉದ್ದೇಶ ಪೂರ್ವಕವಾಗಿ ಸರ್ಕಾರಕ್ಕೆ ಕೆಟ್ಟ ಸಂದೇಶವಾಗಲಿ ಎಂದೂ ಹೇಳಿಕೆ ನೀಡಿದ್ದು ಅವರ ವಿರುದ್ದ 123ಎ, 153ಎ,153 ಸೇಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಅವರನ್ನು ಬಂಧಿಸಬೇಕು. ಮಂಗಳೂರಿನಲ್ಲಿ 144 ಸೆಕ್ಷನ್ ಜಾರಿಯಿದ್ದರೂ ಪ್ರತಿಭಟನೆ ಮಾಡಿ ಪೋಲಿಸರ ಮೇಲೆ ಹಲ್ಲೆ ಇಬ್ಬರ ಸಾವಿಗೆ ಕಾರಣಾರಾದ ಯು ಟಿ ಖಾದರ್ ಅವರನ್ನು ಬಂಧಿಸಿ ರಾಜ್ಯದಿಂದಾ ಗಡಿಪಾರು ಮಾಡಿ ರಾಷ್ಟ್ರದ್ರೋಹಿ ಎಂದೂ ಪರಿಗಣಿಸಿ ಅವರಿಗೆ ಶಿಕ್ಷೆ ವಿಧಿಸಬೇಕು ಎಂದೂ ಆಗ್ರಹಿಸಿ ಜಿಲ್ಲಾ ಎಸ್ವಿ ಹರೀಶ್ ಪಾಂಡೇ ಅವರ ಕಚೇರಿಯಲ್ಲಿ ಬಿಜೆಪಿ ಮುಖಂಡರು ಮನವಿ ಸಲ್ಲಿಸಿದರು....

Conclusion:ರಾಜಕುಮಾರ್....
ಈ ಟಿವಿ ಭಾರತ್...
ಚಿಕ್ಕಮಗಳೂರು....
ETV Bharat Logo

Copyright © 2025 Ushodaya Enterprises Pvt. Ltd., All Rights Reserved.