ETV Bharat / state

ಪ್ರವಾಸೋದ್ಯಮ ಅಭಿವೃದ್ಧಿಗೆ ಸಿಂಗಾಪುರ ಮಾದರಿ ಲವ್​ ಯುವರ್​ ನೇಟಿವ್​ ಯೋಜನೆ: ಸಿ.ಟಿ. ರವಿ

ಅಧಿಕಾರಿಗಳು ಹಾಗೂ ಪರಿಸರವಾದಿಗಳ ಜೊತೆ ಸಭೆ ನಡೆಸಿದ ಸಿ ಟಿ ರವಿ, ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು.

author img

By

Published : May 27, 2020, 10:52 AM IST

meeting
meeting

ಚಿಕ್ಕಮಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರವಾಸೋದ್ಯಮ ನೀತಿಗೆ ಪೂರಕವಾಗಿ, ಜೂನ್ ಅಂತ್ಯದ ಒಳಗೆ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದ ನಿಯಮಗಳನ್ನು ರೂಪಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ ಟಿ ರವಿ ಹೇಳಿದ್ದಾರೆ.

ಸಚಿವ ಸಿ.ಟಿ. ರವಿ

ಈ ಕುರಿತು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳು ಹಾಗೂ ಪರಿಸರವಾದಿಗಳ ಜೊತೆ ಚರ್ಚೆ ನಡೆಸಿದ ಸಿ ಟಿ ರವಿ, ಕೊರೊನಾ ವೈರಸ್​ನಿಂದ ಅನೇಕ ವಲಯಗಳು ನಷ್ಟ ಅನುಭವಿಸಿದ್ದು, ಅದರಲ್ಲಿ ಪ್ರವಾಸೋದ್ಯಮ ಇಲಾಖೆಯು ಒಂದಾಗಿದೆ. ಇದರ ಅಭಿವೃದ್ಧಿಗಾಗಿ ರಾಜ್ಯದಲ್ಲಿ ಪ್ರವಾಸೋದ್ಯಮ ನೀತಿಗಳನ್ನು ಜಾರಿಗೆ ತರುವ ಅವಶ್ಯಕತೆ ಇದ್ದು, ನಮ್ಮ ರಾಜ್ಯ ಹಲವು ವೈವಿಧ್ಯತೆಗೆ ಹೆಸರಾಗಿದೆ. ಪ್ರವಾಸೋದ್ಯಮ ಬೆಳವಣಿಗೆಯ ನಿಟ್ಟಿನಲ್ಲಿ, ಕಳೆದ ಕೆಲ ತಿಂಗಳಿನಿಂದ ಪ್ರವಾಸೋದ್ಯಮ ಕರಡು ರೂಪಿಸಲಾಗುತ್ತಿದೆ. ಜೂನ್ ಅಂತ್ಯದೊಳಗೆ ರಾಜ್ಯದಲ್ಲಿ ಇದು ಜಾರಿಗೆ ಬರಲಿದೆ ಎಂದರು.

ಪ್ರವಾಸೋದ್ಯಮ ಚೇತರಿಕೆ ಉದ್ದೇಶದಿಂದ ಹಲವು ಹಂತಗಳಲ್ಲಿ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಆರಂಭದಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ಸಿಂಗಾಪುರ ಮಾದರಿಯಂತೆ ಲವ್ ಯುವರ್ ನೇಟಿವ್ ಕಾರ್ಯಕ್ರಮ ಅಳವಡಿಸುವುದು. ಜಿಲ್ಲಾ ಪ್ರವಾಸಿ ತಾಣಗಳ ಬಗ್ಗೆ ಮಾಹಿತಿ ನೀಡಿ, ಸಾಮಾಜಿಕ ಜಾಲತಾಣಗಳಲ್ಲಿ ಅದನ್ನು ಪ್ರಚಾರ ಮಾಡುವುದು. ನಮ್ಮ ರಾಜ್ಯದ ಜನರ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ಅಂತಾರಾಷ್ಟ್ರೀಯ ಪ್ರವಾಸಿಗರನ್ನು ಹಂತ ಹಂತವಾಗಿ ರಾಜ್ಯದ ಪ್ರವಾಸಕ್ಕೆ ಸೆಳೆಯುವಂತೆ ಮಾಡುವ ಯೋಜನೆಯ ರೂಪಿಸಲಾಗುತ್ತದೆ ಎಂದರು.

ಈ ಕುರಿತು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳು ಮತ್ತು ಪರಿಸರವಾದಿಗಳ ಜೊತೆ ಜಿಲ್ಲಾ ಉಸ್ತುವಾರಿ ಸಚಿವ ಸಿ ಟಿ ರವಿ ಚರ್ಚೆ ನಡೆಸಿದರು.

ಚಿಕ್ಕಮಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರವಾಸೋದ್ಯಮ ನೀತಿಗೆ ಪೂರಕವಾಗಿ, ಜೂನ್ ಅಂತ್ಯದ ಒಳಗೆ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದ ನಿಯಮಗಳನ್ನು ರೂಪಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ ಟಿ ರವಿ ಹೇಳಿದ್ದಾರೆ.

ಸಚಿವ ಸಿ.ಟಿ. ರವಿ

ಈ ಕುರಿತು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳು ಹಾಗೂ ಪರಿಸರವಾದಿಗಳ ಜೊತೆ ಚರ್ಚೆ ನಡೆಸಿದ ಸಿ ಟಿ ರವಿ, ಕೊರೊನಾ ವೈರಸ್​ನಿಂದ ಅನೇಕ ವಲಯಗಳು ನಷ್ಟ ಅನುಭವಿಸಿದ್ದು, ಅದರಲ್ಲಿ ಪ್ರವಾಸೋದ್ಯಮ ಇಲಾಖೆಯು ಒಂದಾಗಿದೆ. ಇದರ ಅಭಿವೃದ್ಧಿಗಾಗಿ ರಾಜ್ಯದಲ್ಲಿ ಪ್ರವಾಸೋದ್ಯಮ ನೀತಿಗಳನ್ನು ಜಾರಿಗೆ ತರುವ ಅವಶ್ಯಕತೆ ಇದ್ದು, ನಮ್ಮ ರಾಜ್ಯ ಹಲವು ವೈವಿಧ್ಯತೆಗೆ ಹೆಸರಾಗಿದೆ. ಪ್ರವಾಸೋದ್ಯಮ ಬೆಳವಣಿಗೆಯ ನಿಟ್ಟಿನಲ್ಲಿ, ಕಳೆದ ಕೆಲ ತಿಂಗಳಿನಿಂದ ಪ್ರವಾಸೋದ್ಯಮ ಕರಡು ರೂಪಿಸಲಾಗುತ್ತಿದೆ. ಜೂನ್ ಅಂತ್ಯದೊಳಗೆ ರಾಜ್ಯದಲ್ಲಿ ಇದು ಜಾರಿಗೆ ಬರಲಿದೆ ಎಂದರು.

ಪ್ರವಾಸೋದ್ಯಮ ಚೇತರಿಕೆ ಉದ್ದೇಶದಿಂದ ಹಲವು ಹಂತಗಳಲ್ಲಿ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಆರಂಭದಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ಸಿಂಗಾಪುರ ಮಾದರಿಯಂತೆ ಲವ್ ಯುವರ್ ನೇಟಿವ್ ಕಾರ್ಯಕ್ರಮ ಅಳವಡಿಸುವುದು. ಜಿಲ್ಲಾ ಪ್ರವಾಸಿ ತಾಣಗಳ ಬಗ್ಗೆ ಮಾಹಿತಿ ನೀಡಿ, ಸಾಮಾಜಿಕ ಜಾಲತಾಣಗಳಲ್ಲಿ ಅದನ್ನು ಪ್ರಚಾರ ಮಾಡುವುದು. ನಮ್ಮ ರಾಜ್ಯದ ಜನರ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ಅಂತಾರಾಷ್ಟ್ರೀಯ ಪ್ರವಾಸಿಗರನ್ನು ಹಂತ ಹಂತವಾಗಿ ರಾಜ್ಯದ ಪ್ರವಾಸಕ್ಕೆ ಸೆಳೆಯುವಂತೆ ಮಾಡುವ ಯೋಜನೆಯ ರೂಪಿಸಲಾಗುತ್ತದೆ ಎಂದರು.

ಈ ಕುರಿತು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳು ಮತ್ತು ಪರಿಸರವಾದಿಗಳ ಜೊತೆ ಜಿಲ್ಲಾ ಉಸ್ತುವಾರಿ ಸಚಿವ ಸಿ ಟಿ ರವಿ ಚರ್ಚೆ ನಡೆಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.