ETV Bharat / state

56 ಇಂಚಿನ ಎದೆಯಲ್ಲಿ ಮಾತೃ ಹೃದಯ ಇರಬೇಕು: ಮೋದಿಗೆ ಸಿದ್ದು ಗುದ್ದು - former cm blame to prime minister narendra modi

56 ಇಂಚಿನ ಎದೆಯಲ್ಲಿ ಮಾತೃ ಹೃದಯ ಕಾಣುತ್ತಿಲ್ಲ. ರಾಜ್ಯದಲ್ಲಿ ನೆರೆ ಪರಿಹಾರ ಕೈಗೊಳ್ಳುವುದನ್ನು ಬಿಟ್ಟು ಅವರು ಅಮೆರಿಕ ಅಧ್ಯಕ್ಷ ಟ್ರಂಪ್​ ಪರ ಚುನಾವಣೆ ಪ್ರಚಾರ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ರು.

ಮಾಜಿ ಸಿಎಂ ಸಿದ್ದರಾಮಯ್ಯ
author img

By

Published : Oct 13, 2019, 12:45 PM IST

ಚಿಕ್ಕಮಗಳೂರು: ರಾಜ್ಯದ 22 ಜಿಲ್ಲೆಗಳು ನೆರೆ ಹಾವಳಿಯಿಂದ ತತ್ತರಿಸಿ 60 ದಿನಗಳು ಕಳೆದಿವೆ. ಕೇಂದ್ರ ಸರ್ಕಾರ ಕೇವಲ 1200 ಕೋಟಿ ರೂ ಹಣ ಬಿಡುಗಡೆ ಮಾಡಿದೆ. 56 ಇಂಚು ಅಗಲದ ಎದೆಯಲ್ಲಿ ಮಾತೃ ಹೃದಯ ಇರಬೇಕು ಎಂದು ಪ್ರಧಾನಿ ಮೋದಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ರು.

ಮಾಜಿ ಸಿಎಂ ಸಿದ್ದರಾಮಯ್ಯ

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಂದಾಯ ಸಚಿವ ಆರ್​.ಅಶೋಕ್ ಒಪ್ಪಿಕೊಂಡಂತೆ ರಾಜ್ಯದಲ್ಲಿ ಬರ ಹಾಗೂ ಪ್ರವಾಹ ಎರಡೂ ಇದೆ. ಪ್ರಧಾನಿ ಮಾತ್ರ ಅಮೆರಿಕಾದ ಅಧ್ಯಕ್ಷ ಟ್ರಂಪ್​ ಪರ ಚುನಾವಣೆ ಪ್ರಚಾರ ಮಾಡುತ್ತಿದ್ದಾರೆ. ದೇಶ ಸುತ್ತುವ ಮೋದಿಗೆ ರಾಜ್ಯದ ನೋವು, ಸಂಕಟ ಅರ್ಥವಾಗುವುದಿಲ್ಲ ಎಂದು ಕಿಡಿಕಾರಿದರು.

ಪ್ರವಾಹದಿಂದ ಅರ್ಧ ರಾಜ್ಯವೇ ನೆಲಕಚ್ಚಿದೆ. ಕೇಂದ್ರ ಸರ್ಕಾರ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಲ್ಲಿ, ಸ್ಪಂದಿಸುವಲ್ಲಿ ಮಲತಾಯಿ ಧೋರಣೆ ತೋರಿಸುತ್ತಿದೆ ಎಂದರು.

ಚಿಕ್ಕಮಗಳೂರು: ರಾಜ್ಯದ 22 ಜಿಲ್ಲೆಗಳು ನೆರೆ ಹಾವಳಿಯಿಂದ ತತ್ತರಿಸಿ 60 ದಿನಗಳು ಕಳೆದಿವೆ. ಕೇಂದ್ರ ಸರ್ಕಾರ ಕೇವಲ 1200 ಕೋಟಿ ರೂ ಹಣ ಬಿಡುಗಡೆ ಮಾಡಿದೆ. 56 ಇಂಚು ಅಗಲದ ಎದೆಯಲ್ಲಿ ಮಾತೃ ಹೃದಯ ಇರಬೇಕು ಎಂದು ಪ್ರಧಾನಿ ಮೋದಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ರು.

ಮಾಜಿ ಸಿಎಂ ಸಿದ್ದರಾಮಯ್ಯ

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಂದಾಯ ಸಚಿವ ಆರ್​.ಅಶೋಕ್ ಒಪ್ಪಿಕೊಂಡಂತೆ ರಾಜ್ಯದಲ್ಲಿ ಬರ ಹಾಗೂ ಪ್ರವಾಹ ಎರಡೂ ಇದೆ. ಪ್ರಧಾನಿ ಮಾತ್ರ ಅಮೆರಿಕಾದ ಅಧ್ಯಕ್ಷ ಟ್ರಂಪ್​ ಪರ ಚುನಾವಣೆ ಪ್ರಚಾರ ಮಾಡುತ್ತಿದ್ದಾರೆ. ದೇಶ ಸುತ್ತುವ ಮೋದಿಗೆ ರಾಜ್ಯದ ನೋವು, ಸಂಕಟ ಅರ್ಥವಾಗುವುದಿಲ್ಲ ಎಂದು ಕಿಡಿಕಾರಿದರು.

ಪ್ರವಾಹದಿಂದ ಅರ್ಧ ರಾಜ್ಯವೇ ನೆಲಕಚ್ಚಿದೆ. ಕೇಂದ್ರ ಸರ್ಕಾರ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಲ್ಲಿ, ಸ್ಪಂದಿಸುವಲ್ಲಿ ಮಲತಾಯಿ ಧೋರಣೆ ತೋರಿಸುತ್ತಿದೆ ಎಂದರು.

Intro:Kn_ckm_01_Siddaramaiah_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರಿನಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೋದಿ ವಿರುದ್ದ ಕಿಡಿ ಕಾರಿದ್ದಾರೆ. ರಾಜ್ಯದಲ್ಲಿ ಈ ಭಾರೀ ಪ್ರವಾಹ, ಬರ ಎರಡು ಇದೆ. ಇದನ್ನು ಕಂದಾಯ ಸಚಿವ ಆರ್ ಅಶೋಕ್ ಒಪ್ಪಿಕೊಂಡಿದ್ದಾರೆ ಕೇಂದ್ರ ಸರ್ಕಾರ 16 ದಿನದ ನಂತರ 1200 ಕೋಟಿ ಪರಿಹಾರ ನೀಡಿದೆ ಒಂದು ಲಕ್ಷ ಕೋಟಿ ಯಷ್ಟು ಹಾನಿಯಾಗಿದೆ ಆದರೆ 1200 ಕೋಟಿ ಕೊಟ್ಟಿದ್ದಾರೆ ನರೇಂದ್ರ ಮೋದಿ ಟ್ರಂಪ್ ಗೆ ಚುನಾವಣೆ ಪ್ರಚಾರ ಮಾಡಲು ಹೋಗಿದ್ದರು. ಮೋದಿ ಬರೀ ದೇಶ ಸುತ್ತುವುದೇ ಆಯ್ತು ಕರ್ನಾಟಕದಲ್ಲಿ ಪ್ರವಾಹಕ್ಕೆ ತುತ್ತಾಗಿ 90 ಜನ ಸಾವನ್ನಪ್ಪಿದ್ದು ಲಕ್ಷಾಂತರ ಕೋಟಿ ನಷ್ಟ ಆಗಿದೆ ಆದರೆ ಮೋದಿ ಇತ್ತ ತಿರುಗಿಯೂ ನೋಡಿಲ್ಲ ಮೋದಿಗೆ 56 ಇಂಚಿನ ಎದೆ ಇದ್ರೆ ಏನು, ಮಾತೃ ಹೃದಯ ಇಲ್ಲ. ರಾಜ್ಯದ ಜನ 25 ಜನ ಎಂ ಪಿ ಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ ಆ ಶೋಭಾ ಕರಂದ್ಲಾಜೆಗೆ ಕ್ಷೇತ್ರದ ಜನ ಚುನಾವಣೆಯ ಸಂದರ್ಭದಲ್ಲಿ ಗೋ ಬ್ಯಾಕ್ ಅಂತಿದ್ರುಆದ್ರೆ ಜನ ಚುನಾವಣೆಯಲ್ಲಿ ಅದೇಗೆ ಗೆಲ್ಲಿಸಿದ್ರೋ? ಆಯಮ್ಮ ಇನ್ನು ಐದು ವರ್ಷ ಇತ್ತ ತಲೆ ಹಾಕಲ್ಲ ಇಂದು ಚಿಕ್ಕಮಗಳೂರಿನಲ್ಲಿ ವಿಪಕ್ಷ ನಾಯಕ‌ ಸಿದ್ದರಾಮಯ್ಯ ಹೇಳಿದರು....

Conclusion:ರಾಜಕುಮಾರ್....
ಈಟಿವಿ ಭಾರತ್....
ಚಿಕ್ಕಮಗಳೂರು....

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.