ETV Bharat / state

ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣನ ಆರ್ಭಟ... ಮೈದುಂಬಿದ ನದಿಗಳು - ಚಿಕ್ಕಮಗಳೂರು ಮಳೆ, ಧಾರಕಾರ ಮಳೆ, ಜನಜೀವನ ಅಸ್ಥವ್ಯಸ್ತ, ತುಂಬಿದ ನದಿಗಳು,

ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯ ನದಿಗಳೆಲ್ಲ ಮೈದುಂಬಿ ಹರಿಯುತ್ತಿವೆ. ಮತ್ತೊಂದೆಡೆ ಜನಜೀವನ ಅಸ್ತವ್ಯಸ್ತವಾಗಿದೆ.

ಮೈದುಂಬಿ ಹರಿಯುತ್ತಿರುವ ನದಿಗಳು
author img

By

Published : Jul 10, 2019, 12:39 PM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇಂದೂ ಕೂಡ ಧಾರಾಕಾರ ಮಳೆ ಮುಂದುವರೆದಿದ್ದು, ನದಿಗಳು ತುಂಬಿ ಹರಿಯುತ್ತಿವೆ.

ಜಿಲ್ಲೆಯ ಮಲೆನಾಡು ಪ್ರದೇಶ ಹಾಗೂ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಕಳಸ ಮತ್ತು ಹೊರನಾಡು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಮುಳುಗಡೆಯಾಗಲು ಕೇವಲ ಒಂದು ಅಡಿ ಮಾತ್ರ ಬಾಕಿ ಉಳಿದಿದೆ. ಇದೇ ರೀತಿಯಾಗಿ ಮಳೆ ಮುಂದುವರೆದರೆ ಸೇತುವೆ ಮುಳುಗಡೆಯಾಗುವ ಸಾಧ್ಯತೆಯಿದೆ.

ಮೈದುಂಬಿ ಹರಿಯುತ್ತಿರುವ ನದಿಗಳು

ನಿರಂತರ ಮಳೆಯಿಂದ ಜಿಲ್ಲೆಯ ಎಲ್ಲಾ ನದಿಗಳು ಮೈದುಂಬಿ ಹರಿಯುತ್ತಿದ್ದು, ಹೊರ ಮತ್ತು ಒಳ ಹರಿವಿನ ಪ್ರಮಾಣದಲ್ಲಿ ಭಾರಿ ಏರಿಕೆಯಾಗಿದೆ. ಕುದುರೆ ಮುಖ, ಕಳಸ, ಸಂಸೆ, ಬಾಳೆಹೊಳೆ, ಬಸ್ರೀಕಟ್ಟೆ, ತನಿಕೋಡು, ಚಾರ್ಮಾಡಿ ಘಾಟ್, ಕೊಟ್ಟಿಗೆಹಾರ, ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿಯೂ ಧಾರಾಕಾರ ಮಳೆಯಾಗುತ್ತಿದೆ. ಶೃಂಗೇರಿ, ಎನ್ ಆರ್ ಪುರ, ಮೂಡಿಗೆರೆ, ಕೊಪ್ಪದಲ್ಲಿಯೂ ನಿರಂತರ ಮಳೆ ಮುಂದುವರೆದಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇಂದೂ ಕೂಡ ಧಾರಾಕಾರ ಮಳೆ ಮುಂದುವರೆದಿದ್ದು, ನದಿಗಳು ತುಂಬಿ ಹರಿಯುತ್ತಿವೆ.

ಜಿಲ್ಲೆಯ ಮಲೆನಾಡು ಪ್ರದೇಶ ಹಾಗೂ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಕಳಸ ಮತ್ತು ಹೊರನಾಡು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಮುಳುಗಡೆಯಾಗಲು ಕೇವಲ ಒಂದು ಅಡಿ ಮಾತ್ರ ಬಾಕಿ ಉಳಿದಿದೆ. ಇದೇ ರೀತಿಯಾಗಿ ಮಳೆ ಮುಂದುವರೆದರೆ ಸೇತುವೆ ಮುಳುಗಡೆಯಾಗುವ ಸಾಧ್ಯತೆಯಿದೆ.

ಮೈದುಂಬಿ ಹರಿಯುತ್ತಿರುವ ನದಿಗಳು

ನಿರಂತರ ಮಳೆಯಿಂದ ಜಿಲ್ಲೆಯ ಎಲ್ಲಾ ನದಿಗಳು ಮೈದುಂಬಿ ಹರಿಯುತ್ತಿದ್ದು, ಹೊರ ಮತ್ತು ಒಳ ಹರಿವಿನ ಪ್ರಮಾಣದಲ್ಲಿ ಭಾರಿ ಏರಿಕೆಯಾಗಿದೆ. ಕುದುರೆ ಮುಖ, ಕಳಸ, ಸಂಸೆ, ಬಾಳೆಹೊಳೆ, ಬಸ್ರೀಕಟ್ಟೆ, ತನಿಕೋಡು, ಚಾರ್ಮಾಡಿ ಘಾಟ್, ಕೊಟ್ಟಿಗೆಹಾರ, ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿಯೂ ಧಾರಾಕಾರ ಮಳೆಯಾಗುತ್ತಿದೆ. ಶೃಂಗೇರಿ, ಎನ್ ಆರ್ ಪುರ, ಮೂಡಿಗೆರೆ, ಕೊಪ್ಪದಲ್ಲಿಯೂ ನಿರಂತರ ಮಳೆ ಮುಂದುವರೆದಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

Intro:Kn_Ckm_02_Hebbale bridge_av_7202347Body:

ಚಿಕ್ಕಮಗಳೂರು :-

ಚಿಕ್ಕಮಗಳೂರಿನಲ್ಲಿ ಇಂದೂ ಕೂಡ ಧಾರಕಾರ ಮಳೆ ಮುಂದುವರೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಪ್ರದೇಶ ಹಾಗೂ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆ ಸುರಿಯುತ್ತಿದ್ದು ನಿರಂತರ ಮಳೆಯಿಂದಾ ಎಲ್ಲಾ ನದಿಗಳು ತುಂಬಿ ಹರಿಯುತ್ತಿವೆ. ಕಳಸ ಮತ್ತು ಹೊರನಾಡು ಶ್ರೀ ಕ್ಷೇತ್ರಕ್ಕೆ ಸಂಪರ್ಕ ಕಲ್ವಿಸುವಂತಹ ಹೆಬ್ಬಾಳೆ ಸೇತುವೆ ಮುಳುಗಡೆಯಾಗಲು ಕೇವಲ ಒಂದು ಅಡಿ ಮಾತ್ರ ಬಾಕಿ ಉಳಿದಿದ್ದು ಇಂದೂ ಮತ್ತು ನಾಳೆ ಇದೇ ರೀತಿಯಾಗಿ ಧಾರಕಾರ ಮಳೆ ಮುಂದುವರೆದರೇ ಮುಳುಗುವ ಸಾಧ್ಯತೆ ಇದೆ. ನಿರಂತರ ಮಳೆಯಿಂದಾ ಮೈದುಂಬಿ ನದಿಗಳು ಹರಿಯುತ್ತಿದ್ದು ಪ್ರಮುಖವಾಗಿ ತುಂಗಾ, ಭದ್ರಾ, ಹೇಮಾವತಿ, ಹರಿವಿನ ಪ್ರಮಾಣದಲ್ಲಿ ಬಾರೀ ಪ್ರಮಾಣದಲ್ಲಿ ಏರಿಕೆ ಯಾಗಿದೆ.ಕುದುರೆ ಮುಖ, ಕಳಸ, ಸಂಸೆ, ಬಾಳೆಹೊಳೆ, ಬಸ್ರೀಕಟ್ಟೆ, ತನಿಕೋಡು, ಚಾರ್ಮಾಡಿ ಘಾಟ್, ಕೊಟ್ಟಿಗೆಹಾರ, ಸೇರಿದಂತೆ ಸುತ್ತ ಮುತ್ತಲ ಪ್ರದೇಶದಲ್ಲಿ ನಿರಂತರ ಧಾರಕಾರ ಮಳೆಯಾಗುತ್ತಿದೆ.ಶೃಂಗೇರಿ, ಎನ್ ಆರ್ ಪುರ, ಮೂಡಿಗೆರೆ, ಕೊಪ್ಪದಲ್ಲಿಯೂ ನಿರಂತರ ಮಳೆ ಮುಂದುವರೆದಿದೆ. ನಿರಂತರ ಮಳೆಯಿಂದಾ ಜನಜೀವನ ಅಸ್ತವ್ಯಸ್ಥವಾಗಿದ್ದು ರಸ್ತೆ ಸಂಚಾರದಲ್ಲಿಯೂ ಅಸ್ತವ್ಯಸ್ಥ ಉಂಟಾಗಿದೆ...

Conclusion:ರಾಜಕುಮಾರ್.....
ಈ ಟಿವಿ ಭಾರತ್.....
ಚಿಕ್ಕಮಗಳೂರು....

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.