ETV Bharat / state

ಸಕಾಲದಲ್ಲಿ ಆಕ್ಸಿಜನ್‌ ಸಿಗದೆ ವ್ಯಕ್ತಿ ಸಾವು; ಪತ್ನಿ-ಮಗಳ ಕಣ್ಣೀರು - ಚಿಕ್ಕಮಗಳೂರು

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹೊಸಕೆರೆ ಗ್ರಾಮದ ಜಗದೀಶ್‌ ಉಸಿರಾಟದ ಸಮಸ್ಯೆಯಿಂದ ನರಳಿ ಸಾವನ್ನಪ್ಪಿದ್ದಾರೆ.

Chikkamagaluru
ಜಗದೀಶ್
author img

By

Published : Apr 19, 2021, 1:49 PM IST

ಚಿಕ್ಕಮಗಳೂರು: ಬೆಂಗಳೂರಿನಲ್ಲಿ ಆಕ್ಸಿಜನ್ ಕೊರತೆ ಇರುವುದು ಮತ್ತೆ ಬೆಳಕಿಗೆ ಬಂದಿದೆ. ಆಕ್ಸಿಜನ್ ಸಿಗದೇ ಪರದಾಟ ನಡೆಸಿ ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾನೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹೊಸಕೆರೆ ಗ್ರಾಮದ ಜಗದೀಶ್ (38) ಉಸಿರಾಟದ ಸಮಸ್ಯೆಯಿಂದ ನರಳಿ ಸಾವಿಗೀಡಾಗಿದ್ದಾರೆ. ಇವರಿಗೆ ಚಿಕಿತ್ಸೆ ಕೊಡಿಸಲು ಆಸ್ಪತ್ರೆಗೆ ಪತ್ನಿ-ಮಗಳು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಟ ನಡೆಸಿದ್ದಾರೆ. ಈ ವೇಳೆ ಕೋವಿಡ್ ರಿಪೋರ್ಟ್ ಇಲ್ಲದೇ ಚಿಕಿತ್ಸೆ ನೀಡಲು ನಿರಾಕರಿಸಿರುವ ಆರೋಪ ಕೇಳಿ ಬಂದಿದೆ.

ಮೃತ ಜಗದೀಶ್​ ಪತ್ನಿ ಅನಿತಾ

ಸತತ ಎರಡು ದಿನಗಳ ಕಾಲ ಬೆಂಗಳೂರಿನ ಆಸ್ಪತ್ರೆಗಳನ್ನು ಸುತ್ತಿದ್ರೂ ಚಿಕಿತ್ಸೆ ಸಿಗದೇ, ಕೊನೆಗೆ ಪತ್ನಿ ಮಗಳ ಕಣ್ಣೆದುರೇ ಜಗದೀಶ್​ ಸಾವನ್ನಪ್ಪಿದ್ದಾರೆ. 'ನನ್ನ ಪತಿ ತುಂಬಾ ಚೆನ್ನಾಗಿದ್ರು. ಆಸ್ಪತ್ರೆಗಳಲ್ಲಿ ಬೇಡಿಕೊಂಡರೂ ಆಕ್ಸಿಜನ್ ಸಿಗಲೇ ಇಲ್ಲ. ಕೋವಿಡ್ ನೆಪದಲ್ಲಿ ಸಾಮಾನ್ಯ ರೋಗಿಗಳಿಗೆ ಚಿಕಿತ್ಸೆ ಸಿಗುತ್ತಿಲ್ಲ' ಎಂದು ಅನಿತಾ ಕಣ್ಣೀರಿಟ್ಟರು.

ಜಗದೀಶ್​ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಸಾಲ ತೀರಿಸಬೇಕು, ಮಗಳಿಗೆ ಒಳ್ಳೆಯ ಶಿಕ್ಷಣ ಕೊಡಬೇಕೆಂಬ ಕನಸು ಕಂಡಿದ್ದರಂತೆ. ಹೀಗಾಗಿ ಊರು ಬಿಟ್ಟು ಕುಟುಂಬ ಸಮೇತ ಬೆಂಗಳೂರಿಗೆ ಹೋಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಆಕ್ಸಿಜನ್ ಸಿಗದೆ ಜಗದೀಶ್​ ಸಾವನ್ನಪ್ಪಿದ್ದು, ಹೀಗಿದ್ದರೂ ಗ್ರಾಮದಲ್ಲಿ ಸಾಮಾಜಿಕ ಸಕ್ರಿಯ ಸೇವಾ ಸಂಸ್ಥೆ ಕೊರೊನಾ ಮಾರ್ಗಸೂಚಿಯಂತೆ ಅಂತ್ಯಸಂಸ್ಕಾರ ನೆರವೇರಿಸಿದೆ.

ಇದನ್ನೂ ಓದಿ: ಇನ್ಮೇಲೆ ಮೆಡಿಕಲ್ ಆ್ಯಕ್ಸಿಜನ್‌ ಕೊರತೆ ಆಗೋದಿಲ್ಲ.. ಇದನ್ನ ನಿಯಂತ್ರಿಸಲು ವಾರ್ ರೂಂ

ಚಿಕ್ಕಮಗಳೂರು: ಬೆಂಗಳೂರಿನಲ್ಲಿ ಆಕ್ಸಿಜನ್ ಕೊರತೆ ಇರುವುದು ಮತ್ತೆ ಬೆಳಕಿಗೆ ಬಂದಿದೆ. ಆಕ್ಸಿಜನ್ ಸಿಗದೇ ಪರದಾಟ ನಡೆಸಿ ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾನೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹೊಸಕೆರೆ ಗ್ರಾಮದ ಜಗದೀಶ್ (38) ಉಸಿರಾಟದ ಸಮಸ್ಯೆಯಿಂದ ನರಳಿ ಸಾವಿಗೀಡಾಗಿದ್ದಾರೆ. ಇವರಿಗೆ ಚಿಕಿತ್ಸೆ ಕೊಡಿಸಲು ಆಸ್ಪತ್ರೆಗೆ ಪತ್ನಿ-ಮಗಳು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಟ ನಡೆಸಿದ್ದಾರೆ. ಈ ವೇಳೆ ಕೋವಿಡ್ ರಿಪೋರ್ಟ್ ಇಲ್ಲದೇ ಚಿಕಿತ್ಸೆ ನೀಡಲು ನಿರಾಕರಿಸಿರುವ ಆರೋಪ ಕೇಳಿ ಬಂದಿದೆ.

ಮೃತ ಜಗದೀಶ್​ ಪತ್ನಿ ಅನಿತಾ

ಸತತ ಎರಡು ದಿನಗಳ ಕಾಲ ಬೆಂಗಳೂರಿನ ಆಸ್ಪತ್ರೆಗಳನ್ನು ಸುತ್ತಿದ್ರೂ ಚಿಕಿತ್ಸೆ ಸಿಗದೇ, ಕೊನೆಗೆ ಪತ್ನಿ ಮಗಳ ಕಣ್ಣೆದುರೇ ಜಗದೀಶ್​ ಸಾವನ್ನಪ್ಪಿದ್ದಾರೆ. 'ನನ್ನ ಪತಿ ತುಂಬಾ ಚೆನ್ನಾಗಿದ್ರು. ಆಸ್ಪತ್ರೆಗಳಲ್ಲಿ ಬೇಡಿಕೊಂಡರೂ ಆಕ್ಸಿಜನ್ ಸಿಗಲೇ ಇಲ್ಲ. ಕೋವಿಡ್ ನೆಪದಲ್ಲಿ ಸಾಮಾನ್ಯ ರೋಗಿಗಳಿಗೆ ಚಿಕಿತ್ಸೆ ಸಿಗುತ್ತಿಲ್ಲ' ಎಂದು ಅನಿತಾ ಕಣ್ಣೀರಿಟ್ಟರು.

ಜಗದೀಶ್​ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಸಾಲ ತೀರಿಸಬೇಕು, ಮಗಳಿಗೆ ಒಳ್ಳೆಯ ಶಿಕ್ಷಣ ಕೊಡಬೇಕೆಂಬ ಕನಸು ಕಂಡಿದ್ದರಂತೆ. ಹೀಗಾಗಿ ಊರು ಬಿಟ್ಟು ಕುಟುಂಬ ಸಮೇತ ಬೆಂಗಳೂರಿಗೆ ಹೋಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಆಕ್ಸಿಜನ್ ಸಿಗದೆ ಜಗದೀಶ್​ ಸಾವನ್ನಪ್ಪಿದ್ದು, ಹೀಗಿದ್ದರೂ ಗ್ರಾಮದಲ್ಲಿ ಸಾಮಾಜಿಕ ಸಕ್ರಿಯ ಸೇವಾ ಸಂಸ್ಥೆ ಕೊರೊನಾ ಮಾರ್ಗಸೂಚಿಯಂತೆ ಅಂತ್ಯಸಂಸ್ಕಾರ ನೆರವೇರಿಸಿದೆ.

ಇದನ್ನೂ ಓದಿ: ಇನ್ಮೇಲೆ ಮೆಡಿಕಲ್ ಆ್ಯಕ್ಸಿಜನ್‌ ಕೊರತೆ ಆಗೋದಿಲ್ಲ.. ಇದನ್ನ ನಿಯಂತ್ರಿಸಲು ವಾರ್ ರೂಂ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.