ETV Bharat / state

ಪ್ರಗತಿ ಪರಿಶೀಲನೆ ಸಭೆಗೆ ನಿಖರ ಮಾಹಿತಿ ಜೊತೆ ಬನ್ನಿ, ಇಲ್ಲವೇ ಕ್ರಮ ಎದುರಿಸಿ: ಸುಜಾತ ಕೃಷ್ಣಪ್ಪ ಎಚ್ಚರಿಕೆ - Chikkamagaluru progress review meeting

ಪ್ರಗತಿ ಪರಿಶೀಲನೆಗೆ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ನಿಖರ ಮಾಹಿತಿಯೊಂದಿಗೆ ತಪ್ಪದೇ ಹಾಜರಾಗಬೇಕು ತಪ್ಪಿದ್ದಲ್ಲಿ ಅಂತಹವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುಜಾತ ಕೃಷ್ಣಪ್ಪ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

Chikkamagaluru progress review meeting
ಚಿಕ್ಕಮಗಳೂರು ಪ್ರಗತಿ ಪರಿಶೀಲನಾ ಸಭೆ
author img

By

Published : Feb 14, 2020, 6:33 PM IST

ಚಿಕ್ಕಮಗಳೂರು: ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಗೆ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ನಿಖರ ಮಾಹಿತಿಯೊಂದಿಗೆ ತಪ್ಪದೇ ಹಾಜರಾಗಬೇಕು. ತಪ್ಪಿದ್ದಲ್ಲಿ ಅಂತಹವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುಜಾತ ಕೃಷ್ಣಪ್ಪ ಎಚ್ಚರಿಕೆ ನೀಡಿದ್ದಾರೆ.

ಆದರೆ, ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆಗೆ ಕೆಲವು ಇಲಾಖೆ ಅಧಿಕಾರಿಗಳು ಗೈರಾಗಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು ಮುಂದಿನ ಸಭೆಗಳಲ್ಲಿ ಅನಧಿಕೃತವಾಗಿ ಗೈರಾಗುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಕಳಪೆ ಗುಣಮಟ್ಟದ ಎಣ್ಣೆ

ಶಾಲೆಗಳಲ್ಲಿ ನೀಡುವ ಮಧ್ಯಾಹ್ನದ ಬಿಸಿಯೂಟಕ್ಕೆ ಉತ್ತಮ ಶುಚಿಯಾದ ಆಹಾರ ಪದಾರ್ಥಗಳನ್ನು ಸರಬರಾಜು ಮಾಡಬೇಕು. ಆದರೆ ಸಾಂಬಾರು ಮಾಡಲು ಉಪಯೋಗಿಸುವ ಎಣ್ಣೆ ಉಕ್ಕುವುದು ಕಂಡು ಬರುತ್ತಿದೆ ಇದರ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರೈತರಿಗೆ ಬೆಳೆ ನಷ್ಟ ತುಲುಪಿಸಿ

ಕೃಷಿ ಇಲಾಖೆ ಅಧಿಕಾರಿಗಳು ರೈತರಿಗೆ ಉತ್ತಮ ಇಳುವರಿ ಪಡೆಯಲು ಮಣ್ಣು ಗುಣಮಟ್ಟದ ಅನ್ವಯ ಯಾವ ಗೊಬ್ಬರ ಬಳಕೆ ಬಗ್ಗೆ ಮಾಹಿತಿ ನೀಡಬೇಕು. ಫಸಲ್ ಭೀಮಾ ಯೋಜನೆ ಅಡಿ ವಿಮೆ ಮಾಡಿಸಿ ಬೆಳೆ ನಷ್ಟ ಆದ ರೈತರಿಗೆ ಪರಿಹಾರದ ಹಣವನ್ನು ತಲುಪಿಸಬೇಕು ಜೊತೆಗೆ ಅರ್ಹ ರೈತರಿಗೆ ಪ್ರದಾನ ಮಂತ್ರಿ ಕೃಷಿ ಸಮ್ಮಾನ್ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು.

ಮಂಗನಕಾಯಿಲೆ

ಅಲ್ಲದೆ ಜಿಲ್ಲೆಯ ಮಲೆನಾಡು ಹಾಗೂ ಅರೆ ಮಲೆನಾಡು ಭಾಗದಲ್ಲಿ ಮಂಗನಕಾಯಿಲೆ ಪ್ರಕರಣಗಳು ಕಂಡುಬಂದಿವೆ. ಇವುಗಳ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದ ಅವರು ಆರೋಗ್ಯ ಇಲಾಖೆಯಲ್ಲಿ ಹೊರಗುತ್ತಿಗೆ ನೌಕರರನ್ನು ನೇಮಕ ಮಾಡಿಕೊಳ್ಳುವಾಗ ಭ್ರಷ್ಟಾಚಾರದ ಆರೋಪ ಕೇಳಿ ಬರುತ್ತಿದ್ದು ಮೆರಿಟ್ ಆಧಾರದಲ್ಲಿಯೇ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಬೇಕು ಎಂದು ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುಜಾತ್ ಕೃಷ್ಣಪ್ಪ ಅಧಿಕಾರಿಗಳಿಗೆ ಎಚ್ಚರಿಸಿದರು.

ಚಿಕ್ಕಮಗಳೂರು: ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಗೆ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ನಿಖರ ಮಾಹಿತಿಯೊಂದಿಗೆ ತಪ್ಪದೇ ಹಾಜರಾಗಬೇಕು. ತಪ್ಪಿದ್ದಲ್ಲಿ ಅಂತಹವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುಜಾತ ಕೃಷ್ಣಪ್ಪ ಎಚ್ಚರಿಕೆ ನೀಡಿದ್ದಾರೆ.

ಆದರೆ, ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆಗೆ ಕೆಲವು ಇಲಾಖೆ ಅಧಿಕಾರಿಗಳು ಗೈರಾಗಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು ಮುಂದಿನ ಸಭೆಗಳಲ್ಲಿ ಅನಧಿಕೃತವಾಗಿ ಗೈರಾಗುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಕಳಪೆ ಗುಣಮಟ್ಟದ ಎಣ್ಣೆ

ಶಾಲೆಗಳಲ್ಲಿ ನೀಡುವ ಮಧ್ಯಾಹ್ನದ ಬಿಸಿಯೂಟಕ್ಕೆ ಉತ್ತಮ ಶುಚಿಯಾದ ಆಹಾರ ಪದಾರ್ಥಗಳನ್ನು ಸರಬರಾಜು ಮಾಡಬೇಕು. ಆದರೆ ಸಾಂಬಾರು ಮಾಡಲು ಉಪಯೋಗಿಸುವ ಎಣ್ಣೆ ಉಕ್ಕುವುದು ಕಂಡು ಬರುತ್ತಿದೆ ಇದರ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರೈತರಿಗೆ ಬೆಳೆ ನಷ್ಟ ತುಲುಪಿಸಿ

ಕೃಷಿ ಇಲಾಖೆ ಅಧಿಕಾರಿಗಳು ರೈತರಿಗೆ ಉತ್ತಮ ಇಳುವರಿ ಪಡೆಯಲು ಮಣ್ಣು ಗುಣಮಟ್ಟದ ಅನ್ವಯ ಯಾವ ಗೊಬ್ಬರ ಬಳಕೆ ಬಗ್ಗೆ ಮಾಹಿತಿ ನೀಡಬೇಕು. ಫಸಲ್ ಭೀಮಾ ಯೋಜನೆ ಅಡಿ ವಿಮೆ ಮಾಡಿಸಿ ಬೆಳೆ ನಷ್ಟ ಆದ ರೈತರಿಗೆ ಪರಿಹಾರದ ಹಣವನ್ನು ತಲುಪಿಸಬೇಕು ಜೊತೆಗೆ ಅರ್ಹ ರೈತರಿಗೆ ಪ್ರದಾನ ಮಂತ್ರಿ ಕೃಷಿ ಸಮ್ಮಾನ್ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು.

ಮಂಗನಕಾಯಿಲೆ

ಅಲ್ಲದೆ ಜಿಲ್ಲೆಯ ಮಲೆನಾಡು ಹಾಗೂ ಅರೆ ಮಲೆನಾಡು ಭಾಗದಲ್ಲಿ ಮಂಗನಕಾಯಿಲೆ ಪ್ರಕರಣಗಳು ಕಂಡುಬಂದಿವೆ. ಇವುಗಳ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದ ಅವರು ಆರೋಗ್ಯ ಇಲಾಖೆಯಲ್ಲಿ ಹೊರಗುತ್ತಿಗೆ ನೌಕರರನ್ನು ನೇಮಕ ಮಾಡಿಕೊಳ್ಳುವಾಗ ಭ್ರಷ್ಟಾಚಾರದ ಆರೋಪ ಕೇಳಿ ಬರುತ್ತಿದ್ದು ಮೆರಿಟ್ ಆಧಾರದಲ್ಲಿಯೇ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಬೇಕು ಎಂದು ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುಜಾತ್ ಕೃಷ್ಣಪ್ಪ ಅಧಿಕಾರಿಗಳಿಗೆ ಎಚ್ಚರಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.