ETV Bharat / state

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೇ ಕನ್ನ ಹಾಕಿದ್ಲು ಚಾಲಾಕಿ: ಕಾಫಿನಾಡಿನ ಖದೀಮ ಜೋಡಿ ಅಂದರ್!​

ಪ್ರಿಯಕರನ ಜೊತೆ ಸೇರಿ ತನ್ನ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಪ್ರಿಯತಮೆಯೇ ದೋಚಿರುವ ಘಟನೆ ಕಾಫಿನಾಡಿನಲ್ಲಿ ಬೆಳಕಿಗ ಬಂದಿದೆ. ಪೊಲೀಸರು ಕಾರ್ಯಾಚರಣೆ ನಡೆಸಿ ಖದೀಮ ಜೋಡಿಯನ್ನು ಬಂಧಿಸಿದ್ದಾರೆ.

author img

By

Published : Jul 7, 2021, 7:58 AM IST

Updated : Jul 7, 2021, 8:09 AM IST

ಖದೀಮ ಜೋಡಿ ಅಂದರ್​
police arrested two jewellery thieves

ಚಿಕ್ಕಮಗಳೂರು: ಕಾಫಿನಾಡಲ್ಲಿ ವಿಚಿತ್ರ ಪ್ರಕರಣವೊಂದು ನಡೆದಿದೆ. ಪ್ರಿಯಕರನ ಜೊತೆ ಸೇರಿ ತನ್ನ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದ ಯುವತಿ ಮತ್ತು ಆಕೆಯ ಲವರ್​ ಈಗ ಅಂದರ್​ ಆಗಿದ್ದಾರೆ. ಆಭರಣ ಸಹಿತ ಇಬ್ಬರನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಯುವತಿ ಶಮಂತಕ ಮಣಿ, ಪ್ರಿಯಕರ ಭರತ್ ಕುಮಾರ್ ಬಂಧಿತ ಆರೋಪಿಗಳಾಗಿದ್ದಾರೆ.

ಜಿಲ್ಲೆಯ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಬೋಕಿಕೆರೆ ಗ್ರಾಮದ ರಾಜೇಶ್ ಎಂಬುವರ ಪತ್ನಿ ಶಮಂತಕ ಮಣಿ ಹಾಗೂ ಅವರ ತಾಯಿ ಶಾರದಮ್ಮ ಮನೆಗೆ ಬೀಗ ಹಾಕಿಕೊಂಡು ಜಮೀನಿಗೆ ಹೋಗಿದ್ದರು. ಆ ಸಮಯದಲ್ಲಿ ರಾಜೇಶ್​​​ರವರ ಮನೆಯ ಬೀಗವನ್ನು ಒಡೆದು ಒಳ ನುಗ್ಗಿದ ಅನಾಮಿಕರು ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ದೋಚಿದ್ದಾರೆ.

ಈ ಸಂಬಂಧ ಬೀರೂರು ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಈ ಘಟನೆ ನಡೆದ ಕೆಲ ದಿನಗಳ ನಂತರ ಜೂ.30 ರಂದು ರಾಜೇಶ್ರವರ ಪತ್ನಿ ಶಮಂತಕ ಮಣಿ ಮನೆಯಿಂದ ಏಕಾಏಕಿ ಕಾಣೆಯಾಗಿದ್ದರು. ಇದರಿಂದ ಅನುಮಾನಗೊಂಡ ಪೊಲೀಸರು, ಅಪರಾಧಿಗಳ ಪತ್ತೆಗಾಗಿ ಪ್ರತ್ಯೇಕ ತಂಡ ರಚಿಸಿ ಕಾರ್ಯಾಚರಣೆ ನಡೆಸಿದ್ದರು.

ಈ ಸಂದರ್ಭದಲ್ಲಿ ರಾಜೇಶ್‌ ಪತ್ನಿ ಶಮಂತಕ ಮಣಿ ತನ್ನದೇ ಮನೆಯಲ್ಲಿ ಆಭರಣಗಳನ್ನು ದೋಚಿ ಬಳ್ಳಾರಿಯ ಹೊಸಪೇಟೆಯಲ್ಲಿ ಪ್ರಿಯಕರ ಭರತ್ ಕುಮಾರ್ ಎಂಬಾತನೊಂದಿಗೆ ಬಾಡಿಗೆ ಮನೆಯಲ್ಲಿರುವ ವಿಚಾರ ಪೊಲೀಸರಿಗೆ ತಿಳಿದು ಬಂದಿದೆ. ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಶಮಂತಕ ಮಣಿ ಮತ್ತು ಆಕೆಯ ಪ್ರಿಯಕರ ಭರತ್​ನನ್ನು ವಿಚಾರಣೆಗೊಳಪಡಿಸಿದಾಗ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ.

ಚಿಕ್ಕಮಗಳೂರು: ಕಾಫಿನಾಡಲ್ಲಿ ವಿಚಿತ್ರ ಪ್ರಕರಣವೊಂದು ನಡೆದಿದೆ. ಪ್ರಿಯಕರನ ಜೊತೆ ಸೇರಿ ತನ್ನ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದ ಯುವತಿ ಮತ್ತು ಆಕೆಯ ಲವರ್​ ಈಗ ಅಂದರ್​ ಆಗಿದ್ದಾರೆ. ಆಭರಣ ಸಹಿತ ಇಬ್ಬರನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಯುವತಿ ಶಮಂತಕ ಮಣಿ, ಪ್ರಿಯಕರ ಭರತ್ ಕುಮಾರ್ ಬಂಧಿತ ಆರೋಪಿಗಳಾಗಿದ್ದಾರೆ.

ಜಿಲ್ಲೆಯ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಬೋಕಿಕೆರೆ ಗ್ರಾಮದ ರಾಜೇಶ್ ಎಂಬುವರ ಪತ್ನಿ ಶಮಂತಕ ಮಣಿ ಹಾಗೂ ಅವರ ತಾಯಿ ಶಾರದಮ್ಮ ಮನೆಗೆ ಬೀಗ ಹಾಕಿಕೊಂಡು ಜಮೀನಿಗೆ ಹೋಗಿದ್ದರು. ಆ ಸಮಯದಲ್ಲಿ ರಾಜೇಶ್​​​ರವರ ಮನೆಯ ಬೀಗವನ್ನು ಒಡೆದು ಒಳ ನುಗ್ಗಿದ ಅನಾಮಿಕರು ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ದೋಚಿದ್ದಾರೆ.

ಈ ಸಂಬಂಧ ಬೀರೂರು ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಈ ಘಟನೆ ನಡೆದ ಕೆಲ ದಿನಗಳ ನಂತರ ಜೂ.30 ರಂದು ರಾಜೇಶ್ರವರ ಪತ್ನಿ ಶಮಂತಕ ಮಣಿ ಮನೆಯಿಂದ ಏಕಾಏಕಿ ಕಾಣೆಯಾಗಿದ್ದರು. ಇದರಿಂದ ಅನುಮಾನಗೊಂಡ ಪೊಲೀಸರು, ಅಪರಾಧಿಗಳ ಪತ್ತೆಗಾಗಿ ಪ್ರತ್ಯೇಕ ತಂಡ ರಚಿಸಿ ಕಾರ್ಯಾಚರಣೆ ನಡೆಸಿದ್ದರು.

ಈ ಸಂದರ್ಭದಲ್ಲಿ ರಾಜೇಶ್‌ ಪತ್ನಿ ಶಮಂತಕ ಮಣಿ ತನ್ನದೇ ಮನೆಯಲ್ಲಿ ಆಭರಣಗಳನ್ನು ದೋಚಿ ಬಳ್ಳಾರಿಯ ಹೊಸಪೇಟೆಯಲ್ಲಿ ಪ್ರಿಯಕರ ಭರತ್ ಕುಮಾರ್ ಎಂಬಾತನೊಂದಿಗೆ ಬಾಡಿಗೆ ಮನೆಯಲ್ಲಿರುವ ವಿಚಾರ ಪೊಲೀಸರಿಗೆ ತಿಳಿದು ಬಂದಿದೆ. ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಶಮಂತಕ ಮಣಿ ಮತ್ತು ಆಕೆಯ ಪ್ರಿಯಕರ ಭರತ್​ನನ್ನು ವಿಚಾರಣೆಗೊಳಪಡಿಸಿದಾಗ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ.

Last Updated : Jul 7, 2021, 8:09 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.