ಚಿಕ್ಕಮಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ನೇತೃತ್ವದಲ್ಲಿ ಮನೆ ಮನೆಗೆ ತೆರಳಿ ಜನಜಾಗೃತಿ ಅಭಿಯಾನ ನಡೆಸಲಾಯಿತು.
ಕೆಂಪನಹಳ್ಳಿ ಬಡಾವಣೆಯಲ್ಲಿನ ಅಲ್ವಸಂಖ್ಯಾತರ ಮನೆಗಳಿಗೆ ತೆರಳಿದ ಸಿ.ಟಿ. ರವಿಯವರು, ಭಾರತೀಯ ಮುಸಲ್ಮಾನರಿಗೆ ಈ ಕಾಯ್ದೆಯಿಂದ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ. ಕಾಂಗ್ರೆಸ್ ಅಲ್ವಸಂಖ್ಯಾತರಲ್ಲಿ ಗೊಂದಲ ಮೂಡಿಸುತ್ತಿದೆ ಎಂದು ಆರೋಪಿಸಿದರು. ಇಲ್ಲಿಯೇ ಜನಿಸಿದ ಪ್ರತಿವೋರ್ವ ಮುಸ್ಲಿಂನಿಗೂ ಪೌರತ್ವ ಇದೆ. ಈ ಕಾಯ್ದೆಗೆ ಹೆದರುವ ಅವಶ್ಯಕತೆಯಿಲ್ಲ ಎಂದು ಹೇಳಿದ್ರು.