ETV Bharat / state

ಆನೆ ನಡೆದಿದ್ದೇ ದಾರಿ: ಕಾಫಿತೋಟದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ, ಸ್ಥಳೀಯರಲ್ಲಿ ಆತಂಕ - Chikkamagaluru ELEPHANTS ON COFFEE ESTATE

ಮೂಡಿಗೆರೆ ತಾಲೂಕಿನ ಕುಂಬರಡಿ ಗ್ರಾಮದಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದೆ. ಕಾಫಿ ತೋಟದ ಮಧ್ಯೆ ರಾಜಾರೋಷವಾಗಿ ಓಡಾಡೋದನ್ನು ಗಮನಿಸಿದ ತೋಟದ ಮಾಲೀಕರು ಹಾಗೂ ಕಾರ್ಮಿಕರು ಬೆಚ್ಚಿ ಬಿದ್ದಿದ್ದಾರೆ.

ಮಲೆನಾಡಿನಲ್ಲಿ ಮತ್ತೆ ಪ್ರತ್ಯಕ್ಷವಾದ ಒಂಟಿ ಸಲಗ
author img

By

Published : Oct 31, 2019, 5:00 PM IST

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮತ್ತೆ ಕಾಡಾನೆಗಳು ಪ್ರತ್ಯಕ್ಷವಾಗಿದ್ದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

ಮೂಡಿಗೆರೆ ತಾಲೂಕಿನ ಕುಂಬರಡಿ ಗ್ರಾಮದಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದ್ದು, ಕಾಫಿ ತೋಟದ ಮಧ್ಯೆ ಓಡಾಡೋದನ್ನು ನೋಡಿದ ತೋಟದ ಮಾಲೀಕರು ಹಾಗೂ ಕಾರ್ಮಿಕರಲ್ಲಿ ಭಯ ಉಂಟುಮಾಡಿದೆ.

ಮಲೆನಾಡಿನಲ್ಲಿ ಮತ್ತೆ ಪ್ರತ್ಯಕ್ಷವಾದ ಒಂಟಿ ಸಲಗ, ಜನರಲ್ಲಿ ಆತಂಕ

ಕಳೆದ ಮೂರು ದಿನಗಳ ಹಿಂದಷ್ಟೇ ಅರಣ್ಯ ಇಲಾಖೆ ಅಧಿಕಾರಿ ಚೇತನ್‌ ಮೇಲೆ ಕಾಡಾನೆ ದಾಳಿ ನಡೆಸಿತ್ತು. ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳಾಗಿ ಅಧಿಕಾರಿ ಪ್ರಾಣಾಪಾಯದಿಂದ ಪಾರಾಗಿದ್ದರು. ಈಗ ಮತ್ತೆ ಈ ಭಾಗದಲ್ಲಿ ಕಾಡಾನೆ ಕಾಣಿಸಿಕೊಂಡಿದ್ದು ಜನರಲ್ಲಿ ಭೀತಿ ಹೆಚ್ಚಿಸಿದೆ.

ಹಾಗಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಶೀಘ್ರ ಆನೆಗಳನ್ನು ಕಾಡಿಗಟ್ಟುವ ಕೆಲಸ ಮಾಡಬೇಕು ಎಂದು ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ.

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮತ್ತೆ ಕಾಡಾನೆಗಳು ಪ್ರತ್ಯಕ್ಷವಾಗಿದ್ದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

ಮೂಡಿಗೆರೆ ತಾಲೂಕಿನ ಕುಂಬರಡಿ ಗ್ರಾಮದಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದ್ದು, ಕಾಫಿ ತೋಟದ ಮಧ್ಯೆ ಓಡಾಡೋದನ್ನು ನೋಡಿದ ತೋಟದ ಮಾಲೀಕರು ಹಾಗೂ ಕಾರ್ಮಿಕರಲ್ಲಿ ಭಯ ಉಂಟುಮಾಡಿದೆ.

ಮಲೆನಾಡಿನಲ್ಲಿ ಮತ್ತೆ ಪ್ರತ್ಯಕ್ಷವಾದ ಒಂಟಿ ಸಲಗ, ಜನರಲ್ಲಿ ಆತಂಕ

ಕಳೆದ ಮೂರು ದಿನಗಳ ಹಿಂದಷ್ಟೇ ಅರಣ್ಯ ಇಲಾಖೆ ಅಧಿಕಾರಿ ಚೇತನ್‌ ಮೇಲೆ ಕಾಡಾನೆ ದಾಳಿ ನಡೆಸಿತ್ತು. ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳಾಗಿ ಅಧಿಕಾರಿ ಪ್ರಾಣಾಪಾಯದಿಂದ ಪಾರಾಗಿದ್ದರು. ಈಗ ಮತ್ತೆ ಈ ಭಾಗದಲ್ಲಿ ಕಾಡಾನೆ ಕಾಣಿಸಿಕೊಂಡಿದ್ದು ಜನರಲ್ಲಿ ಭೀತಿ ಹೆಚ್ಚಿಸಿದೆ.

ಹಾಗಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಶೀಘ್ರ ಆನೆಗಳನ್ನು ಕಾಡಿಗಟ್ಟುವ ಕೆಲಸ ಮಾಡಬೇಕು ಎಂದು ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ.

Intro:Kn_Ckm_02_Elephant_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮತ್ತೆ ಕಾಡಾನೆಗಳು ಪ್ರತ್ಯಕ್ಷವಾಗುತ್ತಿದ್ದು ಸ್ಥಳೀಯರಲ್ಲಿ ಆತಂಕದ ವಾತವರಣ ನಿರ್ಮಾಣ ಮಾಡುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕುಂಬರಡಿ ಗ್ರಾಮದಲ್ಲಿ ಓಂಟಿ ಸಲಗ ಆನೆ ಜನರಿಗೆ ಕಾಣಿಸಿಕೊಂಡಿದ್ದು ಆನೆ ಕಾಫೀ ತೋಟದ ಮಧ್ಯೆ ರಾಜಾ ರೋಷವಾಗಿ ಓಡಾಡೋದನ್ನು ನೋಡಿ ತೋಟದ ಮಾಲೀಕರು ಹಾಗೂ ಕಾರ್ಮಿಕರು ಬೆಚ್ಚಿ ಬಿದ್ದಿದ್ದಾರೆ. ಕಳೆದ ಮೂರು ದಿನಗಳ ಹಿಂದೇಯಷ್ಟೇ ಅರಣ್ಯ ಅಧಿಕಾರಿಯ ಮೇಲೆ ಕಾಡಾನೆ ದಾಳಿ ಮಾಡುವ ಪ್ರಯತ್ನ ಮಾಡಿತ್ತು. ಇದರಿಂದ ಚೇತನ್ ಎಂಬುವರಿಗೆ ಸಣ್ಣ ಪುಟ್ಟ ಗಾಯಾಗಳು ಸಹ ಆಗಿತ್ತು.ಈಗ ಮತ್ತೆ ಈ ಭಾಗದಲ್ಲಿ ಕಾಡಾನೆ ಕಾಣಿಸಿಕೊಳ್ಳುತ್ತಿರುವುದು ಜನರಲ್ಲಿ ಭಯದ ವಾತವರಣ ನಿರ್ಮಾಣ ಮಾಡಿದೆ. ಕಳೆದ ಕೆಲವು ದಿನಗಳಿಂದಾ ಮೂಡಿಗೆರೆ ತಾಲೂಕಿನ ಕುಂಬರಡಿ ಗ್ರಾಮ, ಗೌಡಳ್ಳಿ, ಭೈರಾಪುರ. ಗ್ರಾಮದಲ್ಲಿ ಆನೆ ಕಾಣಿಸಿಕೊಳ್ಳುತ್ತಿತ್ತು.ಈಗ ಮತ್ತೆ ಈ ಕಾಡಾನೆ ಕಾಣಿಸಿಕೊಳ್ಳುತ್ತಿರೋದರಿಂದ ಜನರು ರಸ್ತೆಯಲ್ಲಿ ಸಂಚಾರ ಮಾಡೋದಕ್ಕೂ ಭಯ ಪಡುವಂತಾಗಿದೆ.ಈ ಕಾಡಾನೆಗಳನ್ನು ಅರಣ್ಯ ಪ್ರದೇಶಕ್ಕೆ ಕಳುಹಿಸಿ ಎಂದೂ ಸಾರ್ವಜನಿಕರು ಅರಣ್ಯ ಇಲಾಖೆಯ ಅಧಿಕಾರಿಗಳ ಬಳಿ ಮನವಿ ಮಾಡುತ್ತಿದ್ದಾರೆ.....

Conclusion:ರಾಜಕುಮಾರ್.....
ಈ ಟಿವಿ ಭಾರತ್....
ಚಿಕ್ಕಮಗಳೂರು.....
ETV Bharat Logo

Copyright © 2025 Ushodaya Enterprises Pvt. Ltd., All Rights Reserved.