ETV Bharat / state

ಭೀಕರ ಅಪಘಾತದಲ್ಲಿ ಓರ್ವ ಸಾವು: ಸುಟ್ಟು ಕರಕಲಾದ ಬೈಕ್​ಗಳು

ಬೈಕ್​ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಎರಡೂ ಬೈಕ್​ಗಳು ಸುಟ್ಟು ಕರಕಲಾಗಿವೆ.

author img

By

Published : Aug 31, 2020, 8:09 AM IST

Collision between bike
ಬೈಕ್​ಗಳ ನಡುವೆ ಅಪಘಾತ

ಚಿಕ್ಕಮಗಳೂರು: ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಎರಡೂ ಬೈಕ್​ಗಳು ಹೊತ್ತಿ ಉರಿದಿರುವ ಘಟನೆ ನಡೆದಿದೆ.

ಜಿಲ್ಲೆಯ ಕಡೂರು ತಾಲೂಕಿನ ಗೆದ್ದಲ ಹಳ್ಳಿ ಬಳಿ ಈ ಘಟನೆ ನಡೆದಿದ್ದು, ಯುನಿಕಾರ್ನ್ ಬೈಕ್​ನಲ್ಲಿದ್ದ ಮಂಜುನಾಥ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಹಾಸನದ ಕಡೆ ಹೋಗುತ್ತಿದ್ದ ಮಂಜುನಾಥ್ ಬೈಕ್, ಹಾಸನದಿಂದ ಶಿವಮೊಗ್ಗ ಮಾರ್ಗವಾಗಿ ಬರುತ್ತಿದ್ದ ಪಲ್ಸರ್ ಬೈಕ್​ಗೆ ಡಿಕ್ಕಿ ಹೊಡೆದಿದೆ.

ಬೈಕ್​ಗಳ ನಡುವೆ ಅಪಘಾತ

ಬೈಕ್​ನಲ್ಲಿದ್ದ ಸಂಜಯ್ ಹಾಗೂ ಗೌತಮ್​ಗೆ ಗಂಭೀರ ಗಾಯಗಳಾಗಿವೆ. ಕಡೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಚಿಕ್ಕಮಗಳೂರು: ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಎರಡೂ ಬೈಕ್​ಗಳು ಹೊತ್ತಿ ಉರಿದಿರುವ ಘಟನೆ ನಡೆದಿದೆ.

ಜಿಲ್ಲೆಯ ಕಡೂರು ತಾಲೂಕಿನ ಗೆದ್ದಲ ಹಳ್ಳಿ ಬಳಿ ಈ ಘಟನೆ ನಡೆದಿದ್ದು, ಯುನಿಕಾರ್ನ್ ಬೈಕ್​ನಲ್ಲಿದ್ದ ಮಂಜುನಾಥ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಹಾಸನದ ಕಡೆ ಹೋಗುತ್ತಿದ್ದ ಮಂಜುನಾಥ್ ಬೈಕ್, ಹಾಸನದಿಂದ ಶಿವಮೊಗ್ಗ ಮಾರ್ಗವಾಗಿ ಬರುತ್ತಿದ್ದ ಪಲ್ಸರ್ ಬೈಕ್​ಗೆ ಡಿಕ್ಕಿ ಹೊಡೆದಿದೆ.

ಬೈಕ್​ಗಳ ನಡುವೆ ಅಪಘಾತ

ಬೈಕ್​ನಲ್ಲಿದ್ದ ಸಂಜಯ್ ಹಾಗೂ ಗೌತಮ್​ಗೆ ಗಂಭೀರ ಗಾಯಗಳಾಗಿವೆ. ಕಡೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.