ETV Bharat / state

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ: ಶೃಂಗೇರಿ ಪೀಠದಿಂದ ಮೃತ್ತಿಕೆ ಹಸ್ತಾಂತರ

ಆಗಸ್ಟ್‌.05ರಂದು ಅಯೋಧ್ಯೆಯಲ್ಲಿ ರಾಮಂದಿರ ನಿರ್ಮಾಣ ಮಾಡಲು ಪ್ರಧಾನಿ ನರೇಂದ್ರ ಮೋದಿ ಶಂಕು ಸ್ಥಾಪನೆ ನೆರವೇರಿಸಲಿದ್ದು, ಈ ಹಿನ್ನೆಲೆಯಲ್ಲಿ ಶೃಂಗೇರಿ ಶಾರದ ಪೀಠದ ವತಿಯಿಂದ ಮೃತ್ತಿಕೆಯನ್ನು ಹಸ್ತಾಂತರ ಮಾಡಲಾಗಿದೆ. 

author img

By

Published : Jul 26, 2020, 12:54 PM IST

Chikkamagaluru
Chikkamagaluru

ಚಿಕ್ಕಮಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ ಶೃಂಗೇರಿ ಶಾರದ ಪೀಠದ ವತಿಯಿಂದ ಮೃತ್ತಿಕೆಯನ್ನು ಹಸ್ತಾಂತರ ಮಾಡಲಾಗಿದೆ.

ಅಯೋಧ್ಯೆಯಲ್ಲಿ ಟ್ರಸ್ಟ್ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಶ್ರೀರಾಮ ಮಂದಿರದ ಶಂಕು ಸ್ಥಾಪನೆಯನ್ನು ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ಅವರು ನೆರವೇರಿಸಲಿದ್ದು, ದೇಶದ ವಿವಿಧ ಪುಣ್ಯ ಸ್ಥಳಗಳಿಂದ ಮತ್ತು ಪುಣ್ಯ ನದಿಗಳಿಂದ ಮೃತ್ತಿಕೆ ಹಾಗೂ ಜಲ ಸಂಗ್ರಹಿಸಲಾಗುತ್ತಿದೆ.

ಈ ಕುರಿತಂತೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಮಠದ ಸ್ವಾಮೀಜಿಗಳಿಗೆ ಮೃತ್ತಿಕೆ ನೀಡುವಂತೆ ವಿನಂತಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಶೃಂಗೇರಿಯ ಜಗದ್ಗುರು ಶ್ರೀ ಭಾರತೀ ತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿಗಳ ಆಶೀರ್ವಾದದಿಂದ ಮಠದ ಮೃತ್ತಿಕೆ ಹಾಗೂ ಪುಣ್ಯ ತೀರ್ಥವನ್ನು ಬಜರಂಗದಳದ ಕಾರ್ಯಕರ್ತರ ಮೂಲಕ ಅಯೋಧ್ಯೆಯಲ್ಲಿ ನಿರ್ಮಾಣ ಆಗುತ್ತಿರುವ ಶ್ರೀರಾಮ ಮಂದಿರಕ್ಕೆ ಕಳುಹಿಸಿಕೊಟ್ಟು ಶುಭ ಹಾರೈಸಿ ಆಶೀರ್ವಾದ ಮಾಡಿದ್ದಾರೆ.

ಚಿಕ್ಕಮಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ ಶೃಂಗೇರಿ ಶಾರದ ಪೀಠದ ವತಿಯಿಂದ ಮೃತ್ತಿಕೆಯನ್ನು ಹಸ್ತಾಂತರ ಮಾಡಲಾಗಿದೆ.

ಅಯೋಧ್ಯೆಯಲ್ಲಿ ಟ್ರಸ್ಟ್ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಶ್ರೀರಾಮ ಮಂದಿರದ ಶಂಕು ಸ್ಥಾಪನೆಯನ್ನು ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ಅವರು ನೆರವೇರಿಸಲಿದ್ದು, ದೇಶದ ವಿವಿಧ ಪುಣ್ಯ ಸ್ಥಳಗಳಿಂದ ಮತ್ತು ಪುಣ್ಯ ನದಿಗಳಿಂದ ಮೃತ್ತಿಕೆ ಹಾಗೂ ಜಲ ಸಂಗ್ರಹಿಸಲಾಗುತ್ತಿದೆ.

ಈ ಕುರಿತಂತೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಮಠದ ಸ್ವಾಮೀಜಿಗಳಿಗೆ ಮೃತ್ತಿಕೆ ನೀಡುವಂತೆ ವಿನಂತಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಶೃಂಗೇರಿಯ ಜಗದ್ಗುರು ಶ್ರೀ ಭಾರತೀ ತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿಗಳ ಆಶೀರ್ವಾದದಿಂದ ಮಠದ ಮೃತ್ತಿಕೆ ಹಾಗೂ ಪುಣ್ಯ ತೀರ್ಥವನ್ನು ಬಜರಂಗದಳದ ಕಾರ್ಯಕರ್ತರ ಮೂಲಕ ಅಯೋಧ್ಯೆಯಲ್ಲಿ ನಿರ್ಮಾಣ ಆಗುತ್ತಿರುವ ಶ್ರೀರಾಮ ಮಂದಿರಕ್ಕೆ ಕಳುಹಿಸಿಕೊಟ್ಟು ಶುಭ ಹಾರೈಸಿ ಆಶೀರ್ವಾದ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.