ಚಿಕ್ಕಮಗಳೂರು : ಇಲ್ಲಿನ ದತ್ತಾತ್ರೇಯ ಪೀಠದಲ್ಲಿ ಭಜರಂಗದಳ ಹಾಗೂ ವಿಎಚ್ಪಿ ವತಿಯಿಂದ ನಡೆಯುತ್ತಿರುವ ದತ್ತ ಜಯಂತಿಗೆ ಕಾಫಿನಾಡಿನಾದ್ಯಂತ ಹೈಅಲರ್ಟ್ ಘೋಷಿಸಲಾಗಿದೆ ಎಂದು ಎಸ್.ಪಿ. ಹರೀಶ್ ಪಾಂಡೆ ತಿಳಿಸಿದ್ದಾರೆ.
ಡಿಸೆಂಬರ್ 9 ರಿಂದ 12 ರವರೆಗೆ ದತ್ತಪೀಠಕ್ಕೆ ಬರುವ ಭಕ್ತರಿಗೆ ಯಾವುದೇ ತೊಂದರೆಗಳಾಗಬಾರದು ಎಂದು ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ. ಓರ್ವ ಎಸ್ಪಿ, ಮೂವರು ಅಡಿಷನಲ್ ಎಸ್ಪಿ, 10 ಡಿವೈಎಸ್ಪಿ, 16 ಇನ್ಸ್ಪೆಕ್ಟರ್, 120 ಸಬ್ ಇನ್ಸ್ಪೆಕ್ಟರ್, 250 ಎಎಸ್ಐ, 450 ಸಿಸಿಟಿವಿ, 35 ಚೆಕ್ ಪೊಸ್ಟ್, 4,000 ಕ್ಕೂ ಅಧಿಕ ಪೊಲೀಸರು ಜಿಲ್ಲಾದ್ಯಂತ ಕಚ್ಚೆಚ್ಚರ ವಹಿಸಿದ್ದಾರೆ. ಜೊತೆಗೆ 10 ಕೆಎಸ್ಆರ್ಪಿ ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಎಸ್ಪಿ ಹರೀಶ್ ಪಾಂಡೆ ತಿಳಿಸಿದ್ದಾರೆ.
ದತ್ತಮಾಲಾ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಿಳಿಸಿದರು.