ETV Bharat / state

ಗೌರಿ ಗದ್ದೆ ಆಶ್ರಮದಲ್ಲಿ ಡಿಕೆಶಿ ವಿಶೇಷ ಪೂಜೆ... ವಿನಯ್​ ಗುರೂಜಿ ಆಶೀರ್ವಾದ ಪಡೆದ ಸಚಿವ

author img

By

Published : Jun 6, 2019, 4:05 AM IST

ಚಿಕ್ಕಮಗಳೂರು ಜಿಲ್ಲೆಯ ಗೌರಿ ಗದ್ದೆ ಆಶ್ರಮಕ್ಕೆ ಭೇಟಿ ನೀಡಿದ್ದ ಸಚಿವ ಡಿ ಕೆ ಶಿವಕುಮಾರ್​ ಅವರು ವಿನಯ್ ಗುರೂಜಿ ಆಶೀರ್ವಾದ ಪಡೆದರು. ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರಗಾಲ, ಮಳೆಯ ಕುರಿತು ಸ್ವಾಮೀಜಿ ಜೊತೆ ಚರ್ಚೆ ನಡೆಸಿದರು.

ಸಚಿವ ಡಿ.ಕೆ ಶಿವಕುಮಾರ್

ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿರುವ ಗೌರಿ ಗದ್ದೆ ಆಶ್ರಮಕ್ಕೆ ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರು ಭೇಟಿ ನೀಡಿ ವಿನಯ್ ಗುರೂಜಿ ಆಶೀರ್ವಾದ ಪಡೆದರು.

ಬುಧವಾರ ಮಠಕ್ಕೆ ಭೇಟಿ ನೀಡಿದ್ದ ಸಚಿವರು, ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರಗಾಲ ಹಾಗೂ ಮಳೆಯ ಕುರಿತು ಸ್ವಾಮೀಜಿ ಜೊತೆ ಕೆಲಕಾಲ ಚರ್ಚೆ ನಡೆಸಿದರು. ಇದೇ ಸಂದರ್ಭದಲ್ಲಿ ಗುರೂಜಿ ಅವರ ಕಡೆಯಿಂದ ಕೆಲವು ಸಲಹೆ, ಸೂಚನೆಗಳನ್ನು ಪಡೆದಿದ್ದಾರೆ.

ಈ ಹಿಂದೆ ಹಲವು ಬಾರಿ ಗೌರಿ ಗದ್ದೆ ಆಶ್ರಮಕ್ಕೆ ಸಚಿವ ಡಿ ಕೆ ಶಿವಕುಮಾರ್ ಅವರು ಭೇಟಿ ನೀಡಿ ವಿನಯ್ ಗುರೂಜಿ ಅವರ ಆಶೀರ್ವಾದ ಪಡೆದಿದ್ದರು. ನಿನ್ನೆ ಕೂಡ ಅವರ ಆಶೀರ್ವಾದ ಪಡೆದು ಆಶ್ರಮದ ಆವರಣದಲ್ಲಿರುವ ಸ್ಪಟಿಕ ಶಿವಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲೆಯ ಹಲವು ಕಾಂಗ್ರೆಸ್ ಮುಖಂಡರು ಸಚಿವ ಡಿಕೆಶಿಗೆ ಸಾಥ್ ನೀಡಿದರು.

ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿರುವ ಗೌರಿ ಗದ್ದೆ ಆಶ್ರಮಕ್ಕೆ ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರು ಭೇಟಿ ನೀಡಿ ವಿನಯ್ ಗುರೂಜಿ ಆಶೀರ್ವಾದ ಪಡೆದರು.

ಬುಧವಾರ ಮಠಕ್ಕೆ ಭೇಟಿ ನೀಡಿದ್ದ ಸಚಿವರು, ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರಗಾಲ ಹಾಗೂ ಮಳೆಯ ಕುರಿತು ಸ್ವಾಮೀಜಿ ಜೊತೆ ಕೆಲಕಾಲ ಚರ್ಚೆ ನಡೆಸಿದರು. ಇದೇ ಸಂದರ್ಭದಲ್ಲಿ ಗುರೂಜಿ ಅವರ ಕಡೆಯಿಂದ ಕೆಲವು ಸಲಹೆ, ಸೂಚನೆಗಳನ್ನು ಪಡೆದಿದ್ದಾರೆ.

ಈ ಹಿಂದೆ ಹಲವು ಬಾರಿ ಗೌರಿ ಗದ್ದೆ ಆಶ್ರಮಕ್ಕೆ ಸಚಿವ ಡಿ ಕೆ ಶಿವಕುಮಾರ್ ಅವರು ಭೇಟಿ ನೀಡಿ ವಿನಯ್ ಗುರೂಜಿ ಅವರ ಆಶೀರ್ವಾದ ಪಡೆದಿದ್ದರು. ನಿನ್ನೆ ಕೂಡ ಅವರ ಆಶೀರ್ವಾದ ಪಡೆದು ಆಶ್ರಮದ ಆವರಣದಲ್ಲಿರುವ ಸ್ಪಟಿಕ ಶಿವಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲೆಯ ಹಲವು ಕಾಂಗ್ರೆಸ್ ಮುಖಂಡರು ಸಚಿವ ಡಿಕೆಶಿಗೆ ಸಾಥ್ ನೀಡಿದರು.

Intro:R_kn_ckm_05_05_Gowri gadde visit_Rajakumar_ckm_av_7202347Body:

ಚಿಕ್ಕಮಗಳೂರು :-

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿರುವ ಗೌರಿ ಗದ್ದೆ ಆಶ್ರಮಮಕ್ಕೆ ಜಲ ಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ಅವರು ಭೇಟಿ ನೀಡಿದ್ದಾರೆ. ಇದೆ ಸಂದರ್ಭದಲ್ಲಿ ಆಶ್ರಮದ ವಿನಯ್ ಗುರೂಜಿ ಅವರ ಆಶೀರ್ವಾದ ಪಡೆದಿದ್ದು ರಾಜದಲ್ಲಿ ಉಂಟಾಗಿರುವ ಭೀಕರ ಬರಗಾಲ ಹಾಗೂ ಮಳೆಯ ಕುರಿತು ಚರ್ಚೆ ಮಾಡಿದರು. ಇದೆ ಸಂದರ್ಭದಲ್ಲಿ ಗುರೂಜಿ ಅವರ ಕಡೆಯಿಂದ ಕೆಲವು ಸಲಹೆ ಹಾಗೂ ಸೂಚನೆಗಳನ್ನು ಪಡೆದಿದ್ದು ರಾಜ್ಯದಲ್ಲಿ ಉತ್ತಮ ಮಳೆ, ರೈತರು ಬೆಳೆದ ಬೆಳೆಗಳು ಉತ್ತಮ ರೀತಿಯಲ್ಲಿ ಇರುವಂತೆ ಆಶೀರ್ವಾದ ಮಾಡಿ ಅವರು ಸಹ ದೇವರ ಬಳಿ ರಾಜ್ಯದಲ್ಲಿ ಉತ್ತಮ ಮಳೆಯಾಗಲಿ ಎಂದೂ ದೇವರ ಬಳಿ ಪ್ರಾಥನೇ ಸಲ್ಲಿಸಿದ್ದಾರೆ.ಈ ಹಿಂದೆ ಹಲವು ಬಾರಿ ಗೌರಿ ಗದ್ದೆ ಆಶ್ರಮಕ್ಕೆ ಸಚಿವ ಡಿ ಕೆ ಶಿವಕುಮಾರ್ ಅವರು ಭೇಟಿ ನೀಡಿ ವಿನಯ್ ಗುರೂಜಿ ಅವರ ಬಳಿ ಆಶೀರ್ವಾದ ಪಡೆದಿದ್ದರು. ಇಂದು ಕೂಡ ಅವರ ಬಳಿ ಆಶೀರ್ವಾದ ಪಡೆದು ಆಶ್ರಮದ ಆವರಣದಲ್ಲಿರುವ ಸ್ಪಟಿಕ ಶಿವಲಿಂಗಕ್ಕೆ ನಮಸ್ಕರಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.ಈ ಸಂದರ್ಭದಲ್ಲಿ ಜಿಲ್ಲೆಯ ಹಲವು ಕಾಂಗ್ರೆಸ್ ಮುಖಂಡರು ಇವರಿಗೆ ಸಾಥ್ ನೀಡಿದರು....Conclusion:ರಾಜಕುಮಾರ್....
ಈಟಿವಿ ಭಾರತ್....
ಚಿಕ್ಕಮಗಳೂರು....

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.