ಚಿಕ್ಕಮಗಳೂರು: ಕೊರೊನಾ ಸೋಂಕಿತ ವೈದ್ಯರ ವೈದ್ಯಕೀಯ ವರದಿ ಸಾಕಷ್ಟು ಗೊಂದಲಕ್ಕೆ ಕಾರಣವಾಗಿದೆ. ಈ ವೈದ್ಯನ ಪಾಸಿಟಿವ್ ಪ್ರಕರಣ ದಿನಕ್ಕೆ ದಿನಕ್ಕೆ ಹೊಸ ಸ್ವರೂಪ ಪಡೆದುಕೊಳ್ಳುತ್ತಾ ಸಾಗುತ್ತಿದೆ.
ವೈದ್ಯರಿಗೆ ಕೊರೊನಾ ಕಾಣಿಸಿಕೊಂಡ ಮೂರೇ ದಿನಕ್ಕೆ ಅವರ ವರದಿ ನೆಗೆಟಿವ್ ಎಂದು ಬಂದಿದೆ. ಇದು ಜನರ ಅನುಮಾನಕ್ಕೆ ಕಾರಣವಾದ ಅಂಶ. ಹಾಸನ ಲ್ಯಾಬ್ನಿಂದ ಬಂದ ಈ ರಿಪೋರ್ಟ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಹಾಗಾಗಿ ಈ ವೈದ್ಯರ ಪ್ರಕರಣದಲ್ಲಿ ನಡೆಯುತ್ತಿರುವುದೇನು? ಎಂದು ಜಿಲ್ಲೆಯಲ್ಲಿ ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಈಗಾಗಲೇ ಮೂಡಿಗೆರೆ ತಾಲೂಕಿನಲ್ಲಿ 850ಕ್ಕೂ ಹೆಚ್ಚು ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಇದರ ನಡುವೆ ಸೋಂಕಿತ ವೈದ್ಯನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಮೌನವಹಿಸಿದ್ದಾರೆ.