ETV Bharat / state

ವಿದ್ಯುತ್​ ತಂತಿ ತುಳಿದು ಕಾಡುಕೋಣ ಸಾವು - undefined

ಕಾಡುಕೊಣವೊಂದು ವಿದ್ಯುತ್​ ತಂತಿ ತುಳಿದು ಸಾವಿಗೀಡಾದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ವಿದ್ಯುತ್​ ತಂತಿ ತುಳಿದು ಕಾಡುಕೋಣ ಸಾವು
author img

By

Published : Jun 26, 2019, 7:52 PM IST

ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ತಾಲೂಕಿನ ಬಸರಿಕಟ್ಟೆ ಗ್ರಾಮದಲ್ಲಿ ವಿದ್ಯುತ್ ತಂತಿ ತುಳಿದು ಕಾಡು ಕೋಣ ಸ್ಥಳದಲ್ಲಿಯೇ ಮೃತಪಟ್ಟಿದೆ.

ಕಾಡುಕೋಣ ರಸ್ತೆಯಲ್ಲಿ ನಡೆದುಕೊಂಡು ಹೋಗುತಿದ್ದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಈ ದುರ್ಘಟನೆ ನಡೆದಿದೆ. ಒಂದೂವರೆ ತಿಂಗಳ ಹಿಂದೆಯೂ ವಿದ್ಯುತ್ ತಂತಿ ತಗುಲಿ ಒಂದು ಕಾಡುಕೋಣ ಮೃತಪಟ್ಟಿತ್ತು. ಪದೇ ಪದೆ ಈ ರೀತಿಯ ಅವಘಡ ನಡೆಯುತ್ತಿದ್ದರೂ ಅರಣ್ಯ ಇಲಾಖೆ ಹಾಗೂ ಮೆಸ್ಕಾಂ ಸಿಬ್ಬಂದಿ ಎಚ್ಚೆತ್ತುಕೊಂಡಿಲ್ಲ.

ವಿದ್ಯುತ್ ಲೈನ್ ದುರಸ್ತಿ ಮಾಡಿ ಸಾರ್ವಜನಿಕರ ಹಾಗೂ ಕಾಡು ಪ್ರಾಣಿಗಳ ಜೀವ ರಕ್ಷಣೆ ಮಾಡಬೇಕು ಎಂದು ಸ್ಥಳೀಯರು ಅಗ್ರಹಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕೊಪ್ಪ ಅರಣ್ಯ ಇಲಾಖೆ ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ತಾಲೂಕಿನ ಬಸರಿಕಟ್ಟೆ ಗ್ರಾಮದಲ್ಲಿ ವಿದ್ಯುತ್ ತಂತಿ ತುಳಿದು ಕಾಡು ಕೋಣ ಸ್ಥಳದಲ್ಲಿಯೇ ಮೃತಪಟ್ಟಿದೆ.

ಕಾಡುಕೋಣ ರಸ್ತೆಯಲ್ಲಿ ನಡೆದುಕೊಂಡು ಹೋಗುತಿದ್ದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಈ ದುರ್ಘಟನೆ ನಡೆದಿದೆ. ಒಂದೂವರೆ ತಿಂಗಳ ಹಿಂದೆಯೂ ವಿದ್ಯುತ್ ತಂತಿ ತಗುಲಿ ಒಂದು ಕಾಡುಕೋಣ ಮೃತಪಟ್ಟಿತ್ತು. ಪದೇ ಪದೆ ಈ ರೀತಿಯ ಅವಘಡ ನಡೆಯುತ್ತಿದ್ದರೂ ಅರಣ್ಯ ಇಲಾಖೆ ಹಾಗೂ ಮೆಸ್ಕಾಂ ಸಿಬ್ಬಂದಿ ಎಚ್ಚೆತ್ತುಕೊಂಡಿಲ್ಲ.

ವಿದ್ಯುತ್ ಲೈನ್ ದುರಸ್ತಿ ಮಾಡಿ ಸಾರ್ವಜನಿಕರ ಹಾಗೂ ಕಾಡು ಪ್ರಾಣಿಗಳ ಜೀವ ರಕ್ಷಣೆ ಮಾಡಬೇಕು ಎಂದು ಸ್ಥಳೀಯರು ಅಗ್ರಹಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕೊಪ್ಪ ಅರಣ್ಯ ಇಲಾಖೆ ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:R_kn_ckm_02_26_Kadukona death_Rajakumar_ckm_av_7202347Body:


ಚಿಕ್ಕಮಗಳೂರು :-


ಚಿಕ್ಕಮಗಳೂರಿನಲ್ಲಿ ವಿದ್ಯುತ್ ತಂತಿ ತುಳಿದು ಬೃಹತ್ ಗಾತ್ರದ ಕಾಡು ಕೋಣ ಸ್ಥಳದಲ್ಲಿಯೇ ಸಾವನಪ್ಪಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಬಸರಿಕಟ್ಟೆ ಗ್ರಾಮದಲ್ಲಿ ಈ ಅವಘಡ ಜರುಗಿದ್ದು ರಸ್ತೆಯಲ್ಲಿ ಕಾಡುಕೋಣ ಹೋಗುವ ವೇಳೆ ಜೋತು ಬಿದ್ದ ವಿದ್ಯುತ್ ತಂತಿ ತುಳಿದು ಕಾಡುಕೋಣ ಮೃತಪಟ್ಟಿದೆ.ಒಂದೂವರೆ ತಿಂಗಳ ಹಿಂದೆಯೂ ವಿದ್ಯುತ್ ತಂತಿ ತಗುಲಿ ಒಂದು ಕಾಡುಕೋಣ ಮೃತಪಟ್ಟಿತ್ತು. ಪದೇ ಪದೇ ಈ ರೀತಿಯ ಅವಘಡ ನಡೆಯುತ್ತಿದ್ದರೂ ಅರಣ್ಯ ಇಲಾಖೆ ಸಿಬಂದ್ದಿಗಳು ಹಾಗೂ ಮೆಸ್ಕಾಂ ಸಿಬ್ಬಂದಿಗಳು ಎಚ್ಚೆತ್ತುಕೊಂಡಿಲ್ಲ. ವಿದ್ಯುತ್ ಲೈನ್ ದುರಸ್ತಿ ಮಾಡಿ ಸಾರ್ವಜನಿಕರ ಹಾಗೂ ಕಾಡು ಪ್ರಾಣಿಗಳ ಜೀವ ರಕ್ಷಣೆ ಮಾಡಬೇಕು ಎಂದೂ ಸ್ಥಳೀಯರು ಅಗ್ರಹಿಸುತಿದ್ದು ಕೊಪ್ಪ ಅರಣ್ಯ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ......


Conclusion:ರಾಜಕುಮಾರ್....
ಈಟಿವಿ ಭಾರತ್....
ಚಿಕ್ಕಮಗಳೂರು....

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.